ಮುಂಡಗೋಡ: ಸಬ್ ರಿಜಿಸ್ಟರ್ ಕಚೇರಿಯ ಸಿಬ್ಬಂದಿ ನೋಂದಣಿ ಮಾಡಲು ಸರಕಾರಿ ಶುಲ್ಕಕ್ಕಿಂತ ಹೆಚ್ಚಿನ ಹಣವನ್ನು ಕೇಳುತ್ತಾರೆ ಎಂದು ಆರೋಪಿಸಿ ಸಾರ್ವಜನಿಕರು ಗುರುವಾರ ಕಚೇರಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಕೊಳಗೇರಿ ನಿರ್ಮೂಲನಾ ಮಂಡಳಿಯಿಂದ ಪಟ್ಟಣದ ಕೊಳಗೇರಿ ನಿವಾಸಿಗಳಿಗೆ ಈ ಹಿಂದೆ ಅಧಿಕೃತ ಹಕ್ಕು ಪತ್ರವನ್ನು ಸಚಿವ ಶಿವರಾಂ ಹೆಬ್ಬಾರ್ ವಿತರಿಸಿ ಇದನ್ನು ಸಬ್ ರಿಜಿಸ್ಟರ್ ಕಚೇರಿಯಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು ನೋಂದಣಿ ಮಾಡಿಸಿಕೊಳ್ಳುವಾಗ ಯಾರಿಗೂ ಹಣವನ್ನು ನೀಡಬಾರದು ಎಂದು ಹೇಳಿದ್ದರು ಈ ಹಿನ್ನೆಲೆಯಲ್ಲಿ ಕಂಬಾರಗಟ್ಟಿಯ ನಿವಾಸಿಗಳು ನೋಂದಣಿ ಮಾಡಿಸಲು ಹೋದಾಗ ಸರಕಾರಿ ಶುಲ್ಕಕ್ಕಿಂತ ಹೆಚ್ಚಿನ ಹಣವನ್ನು ಸಿಬ್ಬಂದಿಗಳು ಕೇಳಿದಾಗ ಆಕ್ರೋಶಗೊಂಡ ಕೆಲವು ಸಾರ್ವಜನಿಕರು ಸಬ್ ರಿಜಿಸ್ಟರ್ ಕಚೇರಿಯ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ನಂತರ ತಹಶೀಲ್ದಾರ್ ಕೊಠಡಿಗೆ ತೆರಳಿ ಸಬ್ ರೆಜಿಸ್ಟಾರ್ ಕಚೇರಿಯಲ್ಲಿ ಸರಕಾರಿ ಶುಲ್ಕಕ್ಕಿಂತ ಹೆಚ್ಚಿನ ಹಣವನ್ನು ಕೇಳುತ್ತಿದ್ದಾರೆ ಹಣ ಕೊಡದಿದ್ದರೆ ಸರ್ವರ್ ಇಲ್ಲ,ಸಿಬ್ಬಂದಿ ಇಲ್ಲವೆಂಬ ನೆಪ ಹೇಳುತ್ತಿದ್ದಾರೆ ಅಲ್ಲದೆ ಕಚೇರಿಯಲ್ಲಿ ಸಿಸಿ ಕ್ಯಾಮರಾವನ್ನು ಸಹ ಅಳವಡಿಸಿಲ್ಲ ಎಂದು ಮನವಿ ಪತ್ರದಲ್ಲಿ ವಿನಂತಿಸಿ ಕೂಡಲೇ ಕಛೇರಿಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವಂತೆಯೂ ಸಹ ವಿನಂತಿಸಿದ್ದಾರೆ.
ವರದಿ: ಮಂಜುನಾಥ ಹರಿಜನ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…