ಮುಂಡಗೋಡ: ಸಬ್ ರಿಜಿಸ್ಟರ್ ಕಚೇರಿಯ ಸಿಬ್ಬಂದಿ ನೋಂದಣಿ ಮಾಡಲು ಸರಕಾರಿ ಶುಲ್ಕಕ್ಕಿಂತ ಹೆಚ್ಚಿನ ಹಣವನ್ನು ಕೇಳುತ್ತಾರೆ ಎಂದು ಆರೋಪಿಸಿ ಸಾರ್ವಜನಿಕರು ಗುರುವಾರ ಕಚೇರಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಕೊಳಗೇರಿ ನಿರ್ಮೂಲನಾ ಮಂಡಳಿಯಿಂದ ಪಟ್ಟಣದ ಕೊಳಗೇರಿ ನಿವಾಸಿಗಳಿಗೆ ಈ ಹಿಂದೆ ಅಧಿಕೃತ ಹಕ್ಕು ಪತ್ರವನ್ನು ಸಚಿವ ಶಿವರಾಂ ಹೆಬ್ಬಾರ್ ವಿತರಿಸಿ ಇದನ್ನು ಸಬ್ ರಿಜಿಸ್ಟರ್ ಕಚೇರಿಯಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು ನೋಂದಣಿ ಮಾಡಿಸಿಕೊಳ್ಳುವಾಗ ಯಾರಿಗೂ ಹಣವನ್ನು ನೀಡಬಾರದು ಎಂದು ಹೇಳಿದ್ದರು ಈ ಹಿನ್ನೆಲೆಯಲ್ಲಿ ಕಂಬಾರಗಟ್ಟಿಯ ನಿವಾಸಿಗಳು ನೋಂದಣಿ ಮಾಡಿಸಲು ಹೋದಾಗ ಸರಕಾರಿ ಶುಲ್ಕಕ್ಕಿಂತ ಹೆಚ್ಚಿನ ಹಣವನ್ನು ಸಿಬ್ಬಂದಿಗಳು ಕೇಳಿದಾಗ ಆಕ್ರೋಶಗೊಂಡ ಕೆಲವು ಸಾರ್ವಜನಿಕರು ಸಬ್ ರಿಜಿಸ್ಟರ್ ಕಚೇರಿಯ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ನಂತರ ತಹಶೀಲ್ದಾರ್ ಕೊಠಡಿಗೆ ತೆರಳಿ ಸಬ್ ರೆಜಿಸ್ಟಾರ್ ಕಚೇರಿಯಲ್ಲಿ ಸರಕಾರಿ ಶುಲ್ಕಕ್ಕಿಂತ ಹೆಚ್ಚಿನ ಹಣವನ್ನು ಕೇಳುತ್ತಿದ್ದಾರೆ ಹಣ ಕೊಡದಿದ್ದರೆ ಸರ್ವರ್ ಇಲ್ಲ,ಸಿಬ್ಬಂದಿ ಇಲ್ಲವೆಂಬ ನೆಪ ಹೇಳುತ್ತಿದ್ದಾರೆ ಅಲ್ಲದೆ ಕಚೇರಿಯಲ್ಲಿ ಸಿಸಿ ಕ್ಯಾಮರಾವನ್ನು ಸಹ ಅಳವಡಿಸಿಲ್ಲ ಎಂದು ಮನವಿ ಪತ್ರದಲ್ಲಿ ವಿನಂತಿಸಿ ಕೂಡಲೇ ಕಛೇರಿಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವಂತೆಯೂ ಸಹ ವಿನಂತಿಸಿದ್ದಾರೆ.
ವರದಿ: ಮಂಜುನಾಥ ಹರಿಜನ.
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…