ಮುಂಡಗೋಡ: ಸಬ್ ರಿಜಿಸ್ಟರ್ ಕಚೇರಿಯ ಸಿಬ್ಬಂದಿ ನೋಂದಣಿ ಮಾಡಲು ಸರಕಾರಿ ಶುಲ್ಕಕ್ಕಿಂತ ಹೆಚ್ಚಿನ ಹಣವನ್ನು ಕೇಳುತ್ತಾರೆ ಎಂದು ಆರೋಪಿಸಿ ಸಾರ್ವಜನಿಕರು ಗುರುವಾರ ಕಚೇರಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಕೊಳಗೇರಿ ನಿರ್ಮೂಲನಾ ಮಂಡಳಿಯಿಂದ ಪಟ್ಟಣದ ಕೊಳಗೇರಿ ನಿವಾಸಿಗಳಿಗೆ ಈ ಹಿಂದೆ ಅಧಿಕೃತ ಹಕ್ಕು ಪತ್ರವನ್ನು ಸಚಿವ ಶಿವರಾಂ ಹೆಬ್ಬಾರ್ ವಿತರಿಸಿ ಇದನ್ನು ಸಬ್ ರಿಜಿಸ್ಟರ್ ಕಚೇರಿಯಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು ನೋಂದಣಿ ಮಾಡಿಸಿಕೊಳ್ಳುವಾಗ ಯಾರಿಗೂ ಹಣವನ್ನು ನೀಡಬಾರದು ಎಂದು ಹೇಳಿದ್ದರು ಈ ಹಿನ್ನೆಲೆಯಲ್ಲಿ ಕಂಬಾರಗಟ್ಟಿಯ ನಿವಾಸಿಗಳು ನೋಂದಣಿ ಮಾಡಿಸಲು ಹೋದಾಗ ಸರಕಾರಿ ಶುಲ್ಕಕ್ಕಿಂತ ಹೆಚ್ಚಿನ ಹಣವನ್ನು ಸಿಬ್ಬಂದಿಗಳು ಕೇಳಿದಾಗ ಆಕ್ರೋಶಗೊಂಡ ಕೆಲವು ಸಾರ್ವಜನಿಕರು ಸಬ್ ರಿಜಿಸ್ಟರ್ ಕಚೇರಿಯ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ನಂತರ ತಹಶೀಲ್ದಾರ್ ಕೊಠಡಿಗೆ ತೆರಳಿ ಸಬ್ ರೆಜಿಸ್ಟಾರ್ ಕಚೇರಿಯಲ್ಲಿ ಸರಕಾರಿ ಶುಲ್ಕಕ್ಕಿಂತ ಹೆಚ್ಚಿನ ಹಣವನ್ನು ಕೇಳುತ್ತಿದ್ದಾರೆ ಹಣ ಕೊಡದಿದ್ದರೆ ಸರ್ವರ್ ಇಲ್ಲ,ಸಿಬ್ಬಂದಿ ಇಲ್ಲವೆಂಬ ನೆಪ ಹೇಳುತ್ತಿದ್ದಾರೆ ಅಲ್ಲದೆ ಕಚೇರಿಯಲ್ಲಿ ಸಿಸಿ ಕ್ಯಾಮರಾವನ್ನು ಸಹ ಅಳವಡಿಸಿಲ್ಲ ಎಂದು ಮನವಿ ಪತ್ರದಲ್ಲಿ ವಿನಂತಿಸಿ ಕೂಡಲೇ ಕಛೇರಿಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವಂತೆಯೂ ಸಹ ವಿನಂತಿಸಿದ್ದಾರೆ.
ವರದಿ: ಮಂಜುನಾಥ ಹರಿಜನ.
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…