Latest

ಮಾಟಮಂತ್ರದ ನೆಪದಲ್ಲಿ ಕಿರುಕುಳ: ಮಹಿಳೆಯ ಬೆತ್ತಲೆ ವೀಡಿಯೋ ಮಾಡಿ ಬ್ಲ್ಯಾಕ್‌ಮೇಲ್ ಮಾಡಿದ ಅರ್ಚಕ.!

ಬೆಂಗಳೂರು: ಮಾಟಮಂತ್ರ ಪರಿಹಾರದ ಹೆಸರಿನಲ್ಲಿ ಮಹಿಳೆಗೆ ಬೆತ್ತಲೆ ವೀಡಿಯೋ ಮಾಡಿ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಅರ್ಚಕನೋರ್ವನನ್ನು ಬೆಳ್ಳಂದೂರು ಠಾಣೆ ಪೊಲೀಸರು ಬಂಧಿಸಿರುವ ಗಂಭೀರ ಘಟನೆ ಬೆಳಕಿಗೆ ಬಂದಿದೆ.

ಬಂಧಿತ ಆರೋಪಿ ಕೇರಳ ಮೂಲದ ಅರ್ಚಕ ಅರುಣ್. ಪ್ರಕರಣದಲ್ಲಿ ಪ್ರಮುಖ ಆರೋಪಿ ಹಾಗೂ ದೇವಾಲಯದ ಮುಖ್ಯ ಅರ್ಚಕ ಉನ್ನಿ ದಾಮೋದರನ್‌ ಇನ್ನೂ ಪರಾರಿಯಾಗಿದ್ದಾನೆ.

ಮಾಟಮಂತ್ರದ ಶಾಪದಿಂದ ಪರಿಹಾರ ಬೇಕೆಂಬ ಆಶಯದಲ್ಲಿ ಮಹಿಳೆಯೊಬ್ಬರು ಕೇರಳದ ಪೆರಿಂಗೊಟ್ಟುಕರ ದೇವಾಲಯವನ್ನು ಸಂಪರ್ಕಿಸಿದ್ದರು. ಅರ್ಚಕರು 24 ಸಾವಿರ ರೂಪಾಯಿ ವಸೂಲಿಸಿಕೊಂಡು ವಿಶೇಷ ಪೂಜೆ ಮಾಡುವುದಾಗಿ ಭರವಸೆ ನೀಡಿದ್ದರು. ನಂತರ ಅರ್ಚಕ ಅರುಣ್, ಮಹಿಳೆಯ ವಾಟ್ಸಾಪ್ ಸಂಖ್ಯೆಯನ್ನು ಪಡೆದು, ಕೆಲವು ದಿನಗಳಲ್ಲಿ ಪುನಃ ಸಂಪರ್ಕಿಸಲು ಸೂಚಿಸಿದ್ದರು.

ಆದರೆ, ರಾತ್ರಿ ಸಮಯದಲ್ಲಿ ಅರ್ಚಕ ಅರುಣ್ ಮಹಿಳೆಗೆ ವಾಟ್ಸಾಪ್ ವೀಡಿಯೋ ಕರೆ ಮಾಡಿದ್ದು, ತಾನು ಬೆತ್ತಲೆಯಲ್ಲೇ ವಿಡಿಯೋ ಕಾಲ್‌ನಲ್ಲಿ ಕಾಣಿಸಿಕೊಂಡಿದ್ದ. ಬಳಿಕ ಮಹಿಳೆಗೆ “ಮಾಟಮಂತ್ರ ಹೋಗಬೇಕಾದರೆ ನೀವೂ ಬೆತ್ತಲಾಗಬೇಕು” ಎಂದು ಒತ್ತಾಯಿಸಿದ್ದು, ಮಹಿಳೆ ವಿರೋಧ ವ್ಯಕ್ತಪಡಿಸಿದರೂ, ಮಕ್ಕಳಿಗೆ ಹಾನಿ ಮಾಡುವಂತೆ ಶಾಪದ ಪೂಜೆ ಮಾಡುತ್ತೇನೆ ಎಂದು ಬೆದರಿಸಿದ್ದ.

ಭಯದಿಂದ ಮಹಿಳೆ ಬೇಸರದಿಂದ ಅರ್ಚಕನ ಮಾತಿಗೆ ಒಳಪಟ್ಟಿದ್ದು, ವೀಡಿಯೊ ಕರೆ ನಲ್ಲಿ ಅರ್ಚಕನ ಸೂಚನೆಯಂತೆ ನಡೆದಿದ್ದರು. ಆ ವಿಡಿಯೋವನ್ನು ನಂತರ ಅರುಣ್ ಬಳಿಸಿಕೊಂಡು ಮಹಿಳೆಯನ್ನು ನಿರಂತರವಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ. ಕೆಲವೇ ದಿನಗಳಲ್ಲಿ ಕೇರಳಕ್ಕೆ ಬರಲು ಪ್ರೇಷರ್ ಹಾಕಿದ ಅರ್ಚಕ, ಮಹಿಳೆ ತೆರಳಿದಾಗ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂಬ ಆರೋಪವೂ ದೂರುಗಳಲ್ಲಿ ಉಲ್ಲೇಖವಾಗಿದೆ.

ಇಲ್ಲಿಂದ ಮಾನಸಿಕವಾಗಿ ಕುಗ್ಗಿದ ಮಹಿಳೆ ಕೊನೆಗೆ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಅರ್ಚಕ ಅರುಣ್‌ನ್ನು ಬಂಧಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಮುಖ್ಯಅರ್ಚಕ ಉನ್ನಿ ದಾಮೋದರನ್ ಬಂಧನಕ್ಕೂ ಕಾರ್ಯಾಚರಣೆ ಮುಂದುವರೆಸಿದ್ದಾರೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

11 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

18 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

18 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago