Latest

ಅಕ್ರಮ ಚಟುವಟಿಕೆಗಳಿಂದ ಹಾನಿಗೊಳವಾದ ಹಾರೋಹಳ್ಳಿ ಇಂದಿರಾ ಕ್ಯಾಂಟೀನ್.

ಹಾರೋಹಳ್ಳಿ: ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಕಡಿಮೆ ದರದಲ್ಲಿ ಆಹಾರ ಪೂರೈಸುವ ಉದ್ದೇಶದಿಂದ ಸ್ಥಾಪನೆಯಾಗಿದ್ದ ಇಂದಿರಾ ಕ್ಯಾಂಟೀನ್ ಉದ್ಘಾಟನೆಗೂ ಮುನ್ನವೇ ಕಿಡಿಗೇಡಿಗಳ ಅಕ್ರಮ ಚಟುವಟಿಕೆಗಳಿಗೆ ಸೇರುವ ಸ್ಥಳವಾಗಿ ಮಾರ್ಪಟ್ಟಿದೆ.
ಹಾರೋಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ಸ್ಥಾಪಿತವಾದ ಈ ಕ್ಯಾಂಟೀನ್, ತಾಲ್ಲೂಕು ಕಚೇರಿಯಿಂದ ದೂರದಲ್ಲಿದೆ. ಈ ಕ್ಯಾಂಟೀನ್ ಅನ್ನು ರಾಜ್ಯ ಸರ್ಕಾರ ಜನರ ಅನುಕೂಲಕ್ಕಾಗಿ ಪ್ರಾರಂಭಿಸಬೇಕೆಂದು ಜಾಗವನ್ನು ಆಯ್ಕೆ ಮಾಡಿತ್ತು. ಆದರೆ, ಇತ್ತೀಚೆಗೆ ಕಟ್ಟಡ ಪೂರ್ಣಗೊಂಡು ಐದು ತಿಂಗಳು ಆಗಿದ್ದರೂ, ಇದರ ಮೂಲಭೂತ ಸೌಕರ್ಯಗಳು, ನೀರು ಮತ್ತು ವಿದ್ಯುತ್, ಇನ್ನೂ ಸಂಪರ್ಕವಾಗಿಲ್ಲ. ಇದರಿಂದಾಗಿ, ಈ ಕಟ್ಟಡವನ್ನು ಕಿಡಿಗೇಡಿಗಳು ತಮ್ಮ ಅಕ್ರಮ ಚಟುವಟಿಕೆಗಳಿಗೆ ಉಪಯೋಗಿಸಕೊಳ್ಳುತ್ತಿದ್ದಾರೆ.
ಹಾರೋಹಳ್ಳಿ ಪಟ್ಟಣದಲ್ಲಿ ಪ್ರತಿದಿನವೂ ಸಾವಿರಾರು ಕಾರ್ಮಿಕರು ಮತ್ತು ವಿದ್ಯಾರ್ಥಿಗಳು ತಮ್ಮ ಕೆಲಸ ಮತ್ತು ಶಾಲೆಗಳಿಗೆ ತೆರಳುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ, ಇಂದಿರಾ ಕ್ಯಾಂಟೀನ್‌ ನಂತಹ ಯೋಜನೆಯ ಅವಶ್ಯಕತೆ ಹೆಚ್ಚಿದ್ದು, ಈ ಕಟ್ಟಡವನ್ನು ಜವಾಬ್ದಾರಿಯುತವಾಗಿ ಬಳಸಬೇಕಾಗಿತ್ತು. ಆದರೆ, ಖಾಲಿ ಕಟ್ಟಡವನ್ನು ಬಂಡವಾಳವಾಗಿ ಬಳಸಿಕೊಂಡು ಕಿಡಿಗೇಡಿಗಳು ಅದನ್ನು ಕುಡಿತ ಹಾಗೂ ಅನಧಿಕೃತ ಚಟುವಟಿಕೆಗಳ ಸ್ಥಳವಾಗಿ ಮಾರ್ಪಟ್ಟಿದ್ದಾರೆ.
ಇನ್ನು, ಈ ಸ್ಥಳ ದ್ವಿಚಕ್ರ ವಾಹನ ಸವಾರರ ಪಾರ್ಕಿಂಗ್ ಕೂಡಾಗಿ ಬಳಸಲಾಗುತ್ತಿದೆ. ಈ ಅಕ್ರಮ ಚಟುವಟಿಕೆಗಳಿಗೆ ತಡೆಯು ಹಾಕಲು ಸ್ಥಳೀಯರು ಪೊಲೀಸರ ಮತ್ತು ಪಟ್ಟಣ ಪಂಚಾಯತ್ ಅಧಿಕಾರಿಗಳಿಂದ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

 

nazeer ahamad

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

9 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

11 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

22 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

22 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

22 hours ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

23 hours ago