Latest

ಅಕ್ರಮ ಚಟುವಟಿಕೆಗಳಿಂದ ಹಾನಿಗೊಳವಾದ ಹಾರೋಹಳ್ಳಿ ಇಂದಿರಾ ಕ್ಯಾಂಟೀನ್.

ಹಾರೋಹಳ್ಳಿ: ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಕಡಿಮೆ ದರದಲ್ಲಿ ಆಹಾರ ಪೂರೈಸುವ ಉದ್ದೇಶದಿಂದ ಸ್ಥಾಪನೆಯಾಗಿದ್ದ ಇಂದಿರಾ ಕ್ಯಾಂಟೀನ್ ಉದ್ಘಾಟನೆಗೂ ಮುನ್ನವೇ ಕಿಡಿಗೇಡಿಗಳ ಅಕ್ರಮ ಚಟುವಟಿಕೆಗಳಿಗೆ ಸೇರುವ ಸ್ಥಳವಾಗಿ ಮಾರ್ಪಟ್ಟಿದೆ.
ಹಾರೋಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ಸ್ಥಾಪಿತವಾದ ಈ ಕ್ಯಾಂಟೀನ್, ತಾಲ್ಲೂಕು ಕಚೇರಿಯಿಂದ ದೂರದಲ್ಲಿದೆ. ಈ ಕ್ಯಾಂಟೀನ್ ಅನ್ನು ರಾಜ್ಯ ಸರ್ಕಾರ ಜನರ ಅನುಕೂಲಕ್ಕಾಗಿ ಪ್ರಾರಂಭಿಸಬೇಕೆಂದು ಜಾಗವನ್ನು ಆಯ್ಕೆ ಮಾಡಿತ್ತು. ಆದರೆ, ಇತ್ತೀಚೆಗೆ ಕಟ್ಟಡ ಪೂರ್ಣಗೊಂಡು ಐದು ತಿಂಗಳು ಆಗಿದ್ದರೂ, ಇದರ ಮೂಲಭೂತ ಸೌಕರ್ಯಗಳು, ನೀರು ಮತ್ತು ವಿದ್ಯುತ್, ಇನ್ನೂ ಸಂಪರ್ಕವಾಗಿಲ್ಲ. ಇದರಿಂದಾಗಿ, ಈ ಕಟ್ಟಡವನ್ನು ಕಿಡಿಗೇಡಿಗಳು ತಮ್ಮ ಅಕ್ರಮ ಚಟುವಟಿಕೆಗಳಿಗೆ ಉಪಯೋಗಿಸಕೊಳ್ಳುತ್ತಿದ್ದಾರೆ.
ಹಾರೋಹಳ್ಳಿ ಪಟ್ಟಣದಲ್ಲಿ ಪ್ರತಿದಿನವೂ ಸಾವಿರಾರು ಕಾರ್ಮಿಕರು ಮತ್ತು ವಿದ್ಯಾರ್ಥಿಗಳು ತಮ್ಮ ಕೆಲಸ ಮತ್ತು ಶಾಲೆಗಳಿಗೆ ತೆರಳುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ, ಇಂದಿರಾ ಕ್ಯಾಂಟೀನ್‌ ನಂತಹ ಯೋಜನೆಯ ಅವಶ್ಯಕತೆ ಹೆಚ್ಚಿದ್ದು, ಈ ಕಟ್ಟಡವನ್ನು ಜವಾಬ್ದಾರಿಯುತವಾಗಿ ಬಳಸಬೇಕಾಗಿತ್ತು. ಆದರೆ, ಖಾಲಿ ಕಟ್ಟಡವನ್ನು ಬಂಡವಾಳವಾಗಿ ಬಳಸಿಕೊಂಡು ಕಿಡಿಗೇಡಿಗಳು ಅದನ್ನು ಕುಡಿತ ಹಾಗೂ ಅನಧಿಕೃತ ಚಟುವಟಿಕೆಗಳ ಸ್ಥಳವಾಗಿ ಮಾರ್ಪಟ್ಟಿದ್ದಾರೆ.
ಇನ್ನು, ಈ ಸ್ಥಳ ದ್ವಿಚಕ್ರ ವಾಹನ ಸವಾರರ ಪಾರ್ಕಿಂಗ್ ಕೂಡಾಗಿ ಬಳಸಲಾಗುತ್ತಿದೆ. ಈ ಅಕ್ರಮ ಚಟುವಟಿಕೆಗಳಿಗೆ ತಡೆಯು ಹಾಕಲು ಸ್ಥಳೀಯರು ಪೊಲೀಸರ ಮತ್ತು ಪಟ್ಟಣ ಪಂಚಾಯತ್ ಅಧಿಕಾರಿಗಳಿಂದ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

 

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago