ಹಾರೋಹಳ್ಳಿ: ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಕಡಿಮೆ ದರದಲ್ಲಿ ಆಹಾರ ಪೂರೈಸುವ ಉದ್ದೇಶದಿಂದ ಸ್ಥಾಪನೆಯಾಗಿದ್ದ ಇಂದಿರಾ ಕ್ಯಾಂಟೀನ್ ಉದ್ಘಾಟನೆಗೂ ಮುನ್ನವೇ ಕಿಡಿಗೇಡಿಗಳ ಅಕ್ರಮ ಚಟುವಟಿಕೆಗಳಿಗೆ ಸೇರುವ ಸ್ಥಳವಾಗಿ ಮಾರ್ಪಟ್ಟಿದೆ.
ಹಾರೋಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ಸ್ಥಾಪಿತವಾದ ಈ ಕ್ಯಾಂಟೀನ್, ತಾಲ್ಲೂಕು ಕಚೇರಿಯಿಂದ ದೂರದಲ್ಲಿದೆ. ಈ ಕ್ಯಾಂಟೀನ್ ಅನ್ನು ರಾಜ್ಯ ಸರ್ಕಾರ ಜನರ ಅನುಕೂಲಕ್ಕಾಗಿ ಪ್ರಾರಂಭಿಸಬೇಕೆಂದು ಜಾಗವನ್ನು ಆಯ್ಕೆ ಮಾಡಿತ್ತು. ಆದರೆ, ಇತ್ತೀಚೆಗೆ ಕಟ್ಟಡ ಪೂರ್ಣಗೊಂಡು ಐದು ತಿಂಗಳು ಆಗಿದ್ದರೂ, ಇದರ ಮೂಲಭೂತ ಸೌಕರ್ಯಗಳು, ನೀರು ಮತ್ತು ವಿದ್ಯುತ್, ಇನ್ನೂ ಸಂಪರ್ಕವಾಗಿಲ್ಲ. ಇದರಿಂದಾಗಿ, ಈ ಕಟ್ಟಡವನ್ನು ಕಿಡಿಗೇಡಿಗಳು ತಮ್ಮ ಅಕ್ರಮ ಚಟುವಟಿಕೆಗಳಿಗೆ ಉಪಯೋಗಿಸಕೊಳ್ಳುತ್ತಿದ್ದಾರೆ.
ಹಾರೋಹಳ್ಳಿ ಪಟ್ಟಣದಲ್ಲಿ ಪ್ರತಿದಿನವೂ ಸಾವಿರಾರು ಕಾರ್ಮಿಕರು ಮತ್ತು ವಿದ್ಯಾರ್ಥಿಗಳು ತಮ್ಮ ಕೆಲಸ ಮತ್ತು ಶಾಲೆಗಳಿಗೆ ತೆರಳುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ, ಇಂದಿರಾ ಕ್ಯಾಂಟೀನ್ ನಂತಹ ಯೋಜನೆಯ ಅವಶ್ಯಕತೆ ಹೆಚ್ಚಿದ್ದು, ಈ ಕಟ್ಟಡವನ್ನು ಜವಾಬ್ದಾರಿಯುತವಾಗಿ ಬಳಸಬೇಕಾಗಿತ್ತು. ಆದರೆ, ಖಾಲಿ ಕಟ್ಟಡವನ್ನು ಬಂಡವಾಳವಾಗಿ ಬಳಸಿಕೊಂಡು ಕಿಡಿಗೇಡಿಗಳು ಅದನ್ನು ಕುಡಿತ ಹಾಗೂ ಅನಧಿಕೃತ ಚಟುವಟಿಕೆಗಳ ಸ್ಥಳವಾಗಿ ಮಾರ್ಪಟ್ಟಿದ್ದಾರೆ.
ಇನ್ನು, ಈ ಸ್ಥಳ ದ್ವಿಚಕ್ರ ವಾಹನ ಸವಾರರ ಪಾರ್ಕಿಂಗ್ ಕೂಡಾಗಿ ಬಳಸಲಾಗುತ್ತಿದೆ. ಈ ಅಕ್ರಮ ಚಟುವಟಿಕೆಗಳಿಗೆ ತಡೆಯು ಹಾಕಲು ಸ್ಥಳೀಯರು ಪೊಲೀಸರ ಮತ್ತು ಪಟ್ಟಣ ಪಂಚಾಯತ್ ಅಧಿಕಾರಿಗಳಿಂದ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…