ಕನಕಪುರ, ಮಾ.22: ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಹಾರೋಹಳ್ಳಿ ತಹಸೀಲ್ದಾರ್ ಆರ್.ಸಿ. ಶಿವಕುಮಾರ್ ಅವರನ್ನು ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಮುಖರ್ ಪಾಷ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಆರೋಪದ ಹಿನ್ನೆಲೆ
ಬಗರ್ಹುಕುಂ ಸಾಗುವಳಿ ಅರ್ಜಿ ವಿಚಾರಣೆ ಪ್ರಕ್ರಿಯೆಯಲ್ಲಿ ತೊಂದರೆ ಉಂಟಾಗುತ್ತಿದೆ ಮತ್ತು ಸರಿಯಾಗಿ ಕೆಲಸ ನಡೆಯುತ್ತಿಲ್ಲ ಎಂಬ ಕಾರಣವನ್ನು ಉಲ್ಲೇಖಿಸಿ, ಹಾರೋಹಳ್ಳಿ ಪ್ರಭಾರ ಕಂದಾಯ ನಿರೀಕ್ಷಕ ಅಶೋಕ್, ಭಗತ್ಕುಮಾರ್ ಹಾಗೂ ಬಗ್ಗಳ ಗ್ರಾಮ ಆಡಳಿತಾಧಿಕಾರಿ ಈಶ್ವರ್ ಅವರು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಈ ದೂರಿನ ಪರಿಗಣನೆಯ ನಂತರ, ಶಿವಕುಮಾರ್ ಅವರನ್ನು ಕರ್ತವ್ಯ ಲೋಪ ಆರೋಪದಡಿ ಅಮಾನತು ಮಾಡಲಾಗಿದೆ.
ಗ್ರಾಮಸ್ಥರಲ್ಲಿ ಆಕ್ರೋಶ
ಶಿವಕುಮಾರ್ ಅವರು ಗ್ರಾಮಸ್ಥರು ಮತ್ತು ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಉತ್ತಮ ಸೇವೆ ನೀಡುತ್ತಿರುವ ಅಧಿಕಾರಿಯಾಗಿದ್ದರು. ಅವರ ಅಮಾನತು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನ ಉಂಟುಮಾಡಿದೆ. ಸ್ಥಳೀಯರು ಈ ಕ್ರಮವನ್ನು ಅನ್ಯಾಯ ಎಂದು ಖಂಡಿಸುತ್ತಿದ್ದು, ಅವರ ಮೇಲೆ ಆರೋಪ ಮಾಡಿರುವ ಅಧಿಕಾರಿಗಳ ಮೇಲೂ ಸೂಕ್ತ ತನಿಖೆ ನಡೆಯಬೇಕು ಎಂದು ಒತ್ತಾಯಿಸುತ್ತಿದ್ದಾರೆ.
ಆರೋಪದ ವಿರುದ್ಧ ಆರೋಪ
ಶಿವಕುಮಾರ್ ವಿರುದ್ಧ ದೂರು ನೀಡಿದ ಆರ್ಐ ಮೇಲೆ ಸಹ ಹಲವು ಗಂಭೀರ ದೂರುಗಳಿವೆ ಎಂಬ ಮಾಹಿತಿ ಗ್ರಾಮಸ್ಥರಿಂದ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ, ಅಧಿಕಾರಿಗಳು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಮತ್ತು ನಿಜವಾದ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂಬುದು ಸ್ಥಳೀಯರ ಬೇಡಿಕೆ.
ಈ ಸಂಬಂಧ ಮುಂದಿನ ಕ್ರಮಗಳ ಕುರಿತು ಅಧಿಕಾರಿಗಳ ಸ್ಪಷ್ಟನೆ ನಿರೀಕ್ಷಿಸಲಾಗುತ್ತಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…