Latest

ಜಾತಿ ಸಮೀಕ್ಷೆ ಉದ್ದೇಶ ಮರೆವೆಯೆ? ಸಮೀಕ್ಷೆ ಇಲ್ಲದೆ ಸ್ಟಿಕ್ಕರ್ ಅಂಟಿಸುವ ಬಿಬಿಎಂಪಿ ಸಿಬ್ಬಂದಿ ವಿರುದ್ಧ ಜನರ ಆಕ್ರೋಶ

ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ 3.6 ಕೋಟಿ ರೂಪಾಯಿ ವೆಚ್ಚ ಮಾಡಿರುವು ಆದರೆ, ನಿಜವಾದ ಸಮೀಕ್ಷೆ ನಡೆಯದೆ, ಬಿಬಿಎಂಪಿ ಸಿಬ್ಬಂದಿ ಮನೆ ಮನೆಗೆ ತೆರಳದೆ ಕೇವಲ ‘ಸರ್ವೇ ಪೂರ್ಣ’ ಎಂಬ ಸ್ಟಿಕ್ಕರ್ ಅಂಟಿಸಿ ಹೋಗುತ್ತಿರುವುದಕ್ಕೆ ಸಾರ್ವಜನಿಕ ಆಕ್ರೋಶ ಹೊರಹೊಮ್ಮಿದೆ.

ಬೆಂಗಳೂರು ನಗರದ ಹಲವು ಕಡೆ, ವಿಶೇಷವಾಗಿ ಥಣಿಸಂದ್ರ ಸೇರಿದಂತೆ ಹಲವೆಡೆ, ಸಮೀಕ್ಷೆ ನಡೆದೇ ಇಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ಕೆಲವು ಸ್ಥಳಗಳಲ್ಲಿ ಮನೆಗಳಲ್ಲಷ್ಟೇ ಅಲ್ಲದೆ, ಬೇಕರಿ ಹಾಗೂ ಕಾಂಡಿಮೆಂಟ್ಸ್ ಅಂಗಡಿಗಳ ಮೇಲೂ ‘ಜಾತಿ ಸಮೀಕ್ಷೆ ಪೂರ್ಣ’ ಎಂಬ ಸ್ಟಿಕ್ಕರ್‌ಗಳು ಅಂಟಿಸಿರುವುದು ಬೆಳಕಿಗೆ ಬಂದಿದೆ. ಇದು ಜನರ ಕೋಪಕ್ಕೆ ಕಾರಣವಾಗಿದ್ದು, “ಅಂಗಡಿಯವರಿಗೆ ಜಾತಿಯ ಕುರಿತು ಹೇಗೆ ಮಾಹಿತಿ ಸಂಗ್ರಹಿಸುತ್ತಾರೆ?” ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಸಮೀಕ್ಷೆಯ ವಿಷಯದಲ್ಲಿ ಅಸಡ್ಡೆಪೂರಿತ ವಹಿವಾಟು ನಡೆಯುತ್ತಿರುವುದನ್ನು ತೋರಿಸುವ ಫೋಟೋಗಳು ಈಗ ವೈರಲ್ ಆಗುತ್ತಿವೆ. ಈ ಮೂಲಕ ಸರ್ಕಾರದ ಭದ್ರತೆ ಮತ್ತು ಕಾರ್ಯಪದ್ಧತಿಯ ಮೇಲೂ ಪ್ರಶ್ನಾರ್ಥಕ ಚಿಹ್ನೆ ಮೂಡಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸ್ಥಳೀಯ ನಿವಾಸಿಗಳು, “ಇದು ಸಾರ್ವಜನಿಕ ಹಣದ ನಿಷ್ಫಲ ಬಳಕೆ. ಸಮೀಕ್ಷೆಯ ಉದ್ದೇಶವನ್ನು ನಿರ್ಲಕ್ಷಿಸುವ, ಕೇವಲ ಕೆಲಸ ಮುಗಿಸಿದ ನಾಟಕವನ್ನೇ ಬಿಬಿಎಂಪಿ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ವೇ ನಿಜವಾಗಿಯೂ ನಡೆದಿದೆಯೇ? ಅಥವಾ ಕೇವಲ ಪಟ್ಟಿ ಪೂರ್ಣವಾಯಿತೆಂದು ತೋರಿಸಲು ಸ್ಟಿಕ್ಕರ್‌ಗಳ ಮೂಲಕ ಲೋಕದೃಷ್ಟಿ ಮಾಯಮಾಡಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಅಧಿಕಾರಿಗಳು ಸ್ಪಷ್ಟನೆ ನೀಡಬೇಕಾಗಿದೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago