Latest

ಜಾತಿ ಸಮೀಕ್ಷೆ ಉದ್ದೇಶ ಮರೆವೆಯೆ? ಸಮೀಕ್ಷೆ ಇಲ್ಲದೆ ಸ್ಟಿಕ್ಕರ್ ಅಂಟಿಸುವ ಬಿಬಿಎಂಪಿ ಸಿಬ್ಬಂದಿ ವಿರುದ್ಧ ಜನರ ಆಕ್ರೋಶ

ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ 3.6 ಕೋಟಿ ರೂಪಾಯಿ ವೆಚ್ಚ ಮಾಡಿರುವು ಆದರೆ, ನಿಜವಾದ ಸಮೀಕ್ಷೆ ನಡೆಯದೆ, ಬಿಬಿಎಂಪಿ ಸಿಬ್ಬಂದಿ ಮನೆ ಮನೆಗೆ ತೆರಳದೆ ಕೇವಲ ‘ಸರ್ವೇ ಪೂರ್ಣ’ ಎಂಬ ಸ್ಟಿಕ್ಕರ್ ಅಂಟಿಸಿ ಹೋಗುತ್ತಿರುವುದಕ್ಕೆ ಸಾರ್ವಜನಿಕ ಆಕ್ರೋಶ ಹೊರಹೊಮ್ಮಿದೆ.

ಬೆಂಗಳೂರು ನಗರದ ಹಲವು ಕಡೆ, ವಿಶೇಷವಾಗಿ ಥಣಿಸಂದ್ರ ಸೇರಿದಂತೆ ಹಲವೆಡೆ, ಸಮೀಕ್ಷೆ ನಡೆದೇ ಇಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ಕೆಲವು ಸ್ಥಳಗಳಲ್ಲಿ ಮನೆಗಳಲ್ಲಷ್ಟೇ ಅಲ್ಲದೆ, ಬೇಕರಿ ಹಾಗೂ ಕಾಂಡಿಮೆಂಟ್ಸ್ ಅಂಗಡಿಗಳ ಮೇಲೂ ‘ಜಾತಿ ಸಮೀಕ್ಷೆ ಪೂರ್ಣ’ ಎಂಬ ಸ್ಟಿಕ್ಕರ್‌ಗಳು ಅಂಟಿಸಿರುವುದು ಬೆಳಕಿಗೆ ಬಂದಿದೆ. ಇದು ಜನರ ಕೋಪಕ್ಕೆ ಕಾರಣವಾಗಿದ್ದು, “ಅಂಗಡಿಯವರಿಗೆ ಜಾತಿಯ ಕುರಿತು ಹೇಗೆ ಮಾಹಿತಿ ಸಂಗ್ರಹಿಸುತ್ತಾರೆ?” ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಸಮೀಕ್ಷೆಯ ವಿಷಯದಲ್ಲಿ ಅಸಡ್ಡೆಪೂರಿತ ವಹಿವಾಟು ನಡೆಯುತ್ತಿರುವುದನ್ನು ತೋರಿಸುವ ಫೋಟೋಗಳು ಈಗ ವೈರಲ್ ಆಗುತ್ತಿವೆ. ಈ ಮೂಲಕ ಸರ್ಕಾರದ ಭದ್ರತೆ ಮತ್ತು ಕಾರ್ಯಪದ್ಧತಿಯ ಮೇಲೂ ಪ್ರಶ್ನಾರ್ಥಕ ಚಿಹ್ನೆ ಮೂಡಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸ್ಥಳೀಯ ನಿವಾಸಿಗಳು, “ಇದು ಸಾರ್ವಜನಿಕ ಹಣದ ನಿಷ್ಫಲ ಬಳಕೆ. ಸಮೀಕ್ಷೆಯ ಉದ್ದೇಶವನ್ನು ನಿರ್ಲಕ್ಷಿಸುವ, ಕೇವಲ ಕೆಲಸ ಮುಗಿಸಿದ ನಾಟಕವನ್ನೇ ಬಿಬಿಎಂಪಿ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ವೇ ನಿಜವಾಗಿಯೂ ನಡೆದಿದೆಯೇ? ಅಥವಾ ಕೇವಲ ಪಟ್ಟಿ ಪೂರ್ಣವಾಯಿತೆಂದು ತೋರಿಸಲು ಸ್ಟಿಕ್ಕರ್‌ಗಳ ಮೂಲಕ ಲೋಕದೃಷ್ಟಿ ಮಾಯಮಾಡಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಅಧಿಕಾರಿಗಳು ಸ್ಪಷ್ಟನೆ ನೀಡಬೇಕಾಗಿದೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago