Latest

ಜಾತಿ ಸಮೀಕ್ಷೆ ಉದ್ದೇಶ ಮರೆವೆಯೆ? ಸಮೀಕ್ಷೆ ಇಲ್ಲದೆ ಸ್ಟಿಕ್ಕರ್ ಅಂಟಿಸುವ ಬಿಬಿಎಂಪಿ ಸಿಬ್ಬಂದಿ ವಿರುದ್ಧ ಜನರ ಆಕ್ರೋಶ

ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ 3.6 ಕೋಟಿ ರೂಪಾಯಿ ವೆಚ್ಚ ಮಾಡಿರುವು ಆದರೆ, ನಿಜವಾದ ಸಮೀಕ್ಷೆ ನಡೆಯದೆ, ಬಿಬಿಎಂಪಿ ಸಿಬ್ಬಂದಿ ಮನೆ ಮನೆಗೆ ತೆರಳದೆ ಕೇವಲ ‘ಸರ್ವೇ ಪೂರ್ಣ’ ಎಂಬ ಸ್ಟಿಕ್ಕರ್ ಅಂಟಿಸಿ ಹೋಗುತ್ತಿರುವುದಕ್ಕೆ ಸಾರ್ವಜನಿಕ ಆಕ್ರೋಶ ಹೊರಹೊಮ್ಮಿದೆ.

ಬೆಂಗಳೂರು ನಗರದ ಹಲವು ಕಡೆ, ವಿಶೇಷವಾಗಿ ಥಣಿಸಂದ್ರ ಸೇರಿದಂತೆ ಹಲವೆಡೆ, ಸಮೀಕ್ಷೆ ನಡೆದೇ ಇಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ಕೆಲವು ಸ್ಥಳಗಳಲ್ಲಿ ಮನೆಗಳಲ್ಲಷ್ಟೇ ಅಲ್ಲದೆ, ಬೇಕರಿ ಹಾಗೂ ಕಾಂಡಿಮೆಂಟ್ಸ್ ಅಂಗಡಿಗಳ ಮೇಲೂ ‘ಜಾತಿ ಸಮೀಕ್ಷೆ ಪೂರ್ಣ’ ಎಂಬ ಸ್ಟಿಕ್ಕರ್‌ಗಳು ಅಂಟಿಸಿರುವುದು ಬೆಳಕಿಗೆ ಬಂದಿದೆ. ಇದು ಜನರ ಕೋಪಕ್ಕೆ ಕಾರಣವಾಗಿದ್ದು, “ಅಂಗಡಿಯವರಿಗೆ ಜಾತಿಯ ಕುರಿತು ಹೇಗೆ ಮಾಹಿತಿ ಸಂಗ್ರಹಿಸುತ್ತಾರೆ?” ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಸಮೀಕ್ಷೆಯ ವಿಷಯದಲ್ಲಿ ಅಸಡ್ಡೆಪೂರಿತ ವಹಿವಾಟು ನಡೆಯುತ್ತಿರುವುದನ್ನು ತೋರಿಸುವ ಫೋಟೋಗಳು ಈಗ ವೈರಲ್ ಆಗುತ್ತಿವೆ. ಈ ಮೂಲಕ ಸರ್ಕಾರದ ಭದ್ರತೆ ಮತ್ತು ಕಾರ್ಯಪದ್ಧತಿಯ ಮೇಲೂ ಪ್ರಶ್ನಾರ್ಥಕ ಚಿಹ್ನೆ ಮೂಡಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸ್ಥಳೀಯ ನಿವಾಸಿಗಳು, “ಇದು ಸಾರ್ವಜನಿಕ ಹಣದ ನಿಷ್ಫಲ ಬಳಕೆ. ಸಮೀಕ್ಷೆಯ ಉದ್ದೇಶವನ್ನು ನಿರ್ಲಕ್ಷಿಸುವ, ಕೇವಲ ಕೆಲಸ ಮುಗಿಸಿದ ನಾಟಕವನ್ನೇ ಬಿಬಿಎಂಪಿ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ವೇ ನಿಜವಾಗಿಯೂ ನಡೆದಿದೆಯೇ? ಅಥವಾ ಕೇವಲ ಪಟ್ಟಿ ಪೂರ್ಣವಾಯಿತೆಂದು ತೋರಿಸಲು ಸ್ಟಿಕ್ಕರ್‌ಗಳ ಮೂಲಕ ಲೋಕದೃಷ್ಟಿ ಮಾಯಮಾಡಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಅಧಿಕಾರಿಗಳು ಸ್ಪಷ್ಟನೆ ನೀಡಬೇಕಾಗಿದೆ.

nazeer ahamad

Recent Posts

ಪೊಲೀಸ್ ಅಧಿಕಾರಿ ಡಿವೈಎಸ್ಪಿ ಗೀತಾ ಪಾಟೀಲ, ಪಿಐ ಸೀತಾರಾಮ ಅಮಾನತಿಗೆ ಆಗ್ರಹಿಸಿ ಬೀದಿಗಿಳಿದ ಸಾರ್ವಜನಿಕರು

ಸಿದ್ದಾಪುರ: ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ ಹಾಗೂ ಸಿದ್ದಾಪುರ ಪೊಲೀಸ್ ಠಾಣೆಯ ಪಿಐ ಸೀತಾರಾಮ ಅವರನ್ನು ಅಮಾನತುಗೊಳಿಸಿ ಇಲಾಖಾ ತನಿಖೆ…

4 hours ago

ಬೆಂಗಳೂರಿನ ಪೊಲೀಸರೇ ತಲೆತಗ್ಗಿಸುವ ಕೆಲಸ, ಪೊಲೀಸರೇ ಅರೆಸ್ಟ್ : ಸಿಐಡಿ ಜೀಪ್‌ನಲ್ಲಿ ಬಂದು ₹20 ಲಕ್ಷ ದರೋಡೆ

ಬೆಂಗಳೂರು ನಗರದಲ್ಲಿ ಪೊಲೀಸರ ಮೇಲೆಯೇ ದರೋಡೆ ಆರೋಪ ಕೇಳಿಬಂದಿರುವ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…

11 hours ago

ಗೌರಿಬಿದನೂರಿನಲ್ಲಿ ಭೀಕರ ದರೋಡೆ: ಕಿವಿಯ ಸಮೇತ ಬಂಗಾರದ ವಾಲೆ ಕಿತ್ತುಕೊಂಡ ಕಳ್ಳರು, ವೃದ್ಧೆ ಮೃತ್ಯು

ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಹೋಬಳಿಯ ಬಸವನಹಳ್ಳಿ ಗ್ರಾಮದಲ್ಲಿ ನಡೆದ ಭೀಕರ ದರೋಡೆ ಹಾಗೂ ಹಲ್ಲೆ ಪ್ರಕರಣವು ವೃದ್ಧೆಯ ಸಾವಿನಲ್ಲಿ ಅಂತ್ಯಗೊಂಡಿದ್ದು,…

11 hours ago

ಭಟ್ಕಳ ಘಟನೆಗೆ ಹೊಸ ತಿರುವು: ಯುವತಿಯ ದೂರಿನ ಮೇರೆಗೆ ಮುಸ್ಲಿಂ ಯುವಕ ಬಂಧನ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿ ಮಹಿಳಾ ಸಹೋದ್ಯೋಗಿಯನ್ನು ಆಕೆಯ ಇಚ್ಛೆಗೆ ವಿರುದ್ಧವಾಗಿ ಕಾರಿನಲ್ಲಿ ಕರೆದೊಯ್ದ ಆರೋಪದ ಹಿನ್ನೆಲೆಯಲ್ಲಿ…

1 day ago

ಅಧಿಕಾರಿಗೆ ಚಪ್ಪಲಿ ಏಟು: 20 ವರ್ಷವಾದರೂ ಭೂ ಪರಿಹಾರ ನೀಡದ ಬಾಗಲಕೋಟೆ ಅಧಿಕಾರಿಗಳಿಗೆ ಲೋಕಾಯುಕ್ತ ಸಮನ್ಸ್

ಬಾಗಲಕೋಟೆ: ಸುಮಾರು 20 ವರ್ಷಗಳ ಹಿಂದೆ ಭೂಸ್ವಾಧೀನಪಡಿಸಿಕೊಂಡ ಜಮೀನಿಗೆ ಇನ್ನೂ ಪರಿಹಾರ ನೀಡದೇ ರೈತನನ್ನು ಅಲೆದಾಡಿಸಿರುವ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ…

1 day ago

ಸಾರ್ವಜನಿಕರ ದೂರುಗಳ ಬೆನ್ನಲ್ಲೇ ದಾಸನಪುರ ಗ್ರಾಮ ಪಂಚಾಯಿತಿ ಪಿಡಿಓ ಉಷಾ ಅಮಾನತು

ಬೆಂಗಳೂರು: ಅಧಿಕೃತ ಕರ್ತವ್ಯ ನಿರ್ವಹಣೆಯಲ್ಲಿ ಲೋಪ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಗ್ರಾಮ ಪಂಚಾಯಿತಿಯ ಅಭಿವೃದ್ಧಿ…

1 day ago