Crime

ಅನೈತಿಕ ಸಂಬಂಧದ ದ್ವೇಷ – ಬಾವನ ಕೊಲೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಪೊಲೀಸರು

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಇತ್ತೀಚೆಗೆ ಅನೈತಿಕ ಸಂಬಂಧಗಳ ಹಿನ್ನೆಲೆಯಲ್ಲಿ ನಡೆದ ಕೊಲೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಅದರೊಂದಿಷ್ಟು ಪ್ರಕರಣಗಳು ಇಂತಹದ್ದೇ ಮತ್ತೊಂದು ಭಯಾನಕ ಕೊಲೆ ಪ್ರಕರಣ ಚಿಕ್ಕಬಳ್ಳಾಪುರ ತಾಲ್ಲೂಕಿನ ಮೊಟ್ಲೂರು ಕ್ರಾಸ್ ಬಳಿ ಬೆಳಕಿಗೆ ಬಂದಿದೆ.

ಅಕ್ರಮ ಸಂಬಂಧದ ವೈಮನಸ್ಯ – ಕೊಲೆಗೆ ಕಾರಣ

ಕೃತ್ಯದಲ್ಲಿ ಸಾವಿಗೀಡಾದ ವ್ಯಕ್ತಿಯನ್ನು ಗೌಚೇನಹಳ್ಳಿಯ 35 ವರ್ಷದ ಸುಭಾಷ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಸುಭಾಷ್ ತನ್ನ ಬಾವಮೈದನ (ಆರೋಪಿ) ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಈ ಸಂಬಂಧಕ್ಕಾಗಿ ಬಾಮೈದ ನನ ಪತ್ನಿಗೆ ಸುಭಾಷ್ ನಿರಂತರ ಕಿರುಕುಳ ನೀಡುತ್ತಿದ್ದಂತೆ ಆರೋಪಿಗಳ ಹೇಳಿಕೆಯಿದೆ. ಈ ದ್ವೇಷದಿಂದ ಮನೋಜ್ (ಮುಖ್ಯ ಆರೋಪಿ) ತನ್ನ ಸ್ನೇಹಿತರನ್ನು ಒಳಗೊಳ್ಳುವ ಮೂಲಕ ಸುತ್ತುಹಾಕಿ ಕೊಲೆ ನಡೆಸಿದ್ದಾನೆ.

ನಿಷ್ಪಾಪ ಭಾವನೆಗೆ ನುಗ್ಗಿದ ಕ್ರೌರ್ಯ

ಘಟನೆಯ ದಿನ, ಸುಭಾಷ್ ಒಂಟಿಯಾಗಿ ರಸ್ತೆಯಲ್ಲಿ ನಡೆಯುತ್ತಿದ್ದಾಗ, ಮನೋಜ್ ಹಾಗೂ ನಾಲ್ಕೈದು ಸ್ನೇಹಿತರು ಅವನನ್ನು ಹಿಂಬಾಲಿಸಿದರು. ಕೊನೆಗೆ, ತಪ್ಪಿಸಿಕೊಳ್ಳಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ, ಅಡ್ಡಗಟ್ಟಿ ಮೊದಲು ಹಲ್ಲೆ ನಡೆಸಿದರು. ತದನಂತರ ಮಚ್ಚು ಮತ್ತು ದೊಡ್ಡ ಕಲ್ಲುಗಳಿಂದ ಹಲ್ಲೆ ನಡೆಸಿ, ತೀವ್ರವಾಗಿ ಗಾಯಗೊಳಿಸಿ ಕೊಲೆ ಮಾಡಿದರು. ಕೊನೆಯಾಗಿ, ಪತ್ತೆ ಬೀಳದಂತೆ ಮಾಡಬೇಕೆಂಬ ಉದ್ದೇಶದಿಂದ ಮೃತದೇಹವನ್ನು ನೀರು ಹರಿಯುವ ಕಾಲುವೆಗೆ ಎಸೆದಿದ್ದಾರೆ.

ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು

ಈ ಘಟನೆಗೆ ಸಂಬಂಧಿಸಿದಂತೆ ಮಾಹಿತಿ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಎಸ್‌ಪಿ ಕುಶಲ್ ಚೌಕ್ಸೆ, ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಮುಖ ಆರೋಪಿ ಮನೋಜ್ ಅನ್ನು ಪೊಲೀಸರು ತಕ್ಷಣವೇ ಬಂಧಿಸಿದ್ದಾರೆ. ಇದಲ್ಲದೆ, ಘಟನೆಯಲ್ಲಿ ಭಾಗಿಯಾದ ಇನ್ನೂ ನಾಲ್ಕೈದು ಜನ ಆರೋಪಿ ತಲೆಮರೆಸಿಕೊಂಡಿದ್ದಾರೆ. ಅವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಪೊಲೀಸರ ಹರಸಾಹಸ – ಶೀಘ್ರವೇ ಬಂಧನ ನಿರೀಕ್ಷೆ

ಅನೈತಿಕ ಸಂಬಂಧದ ದ್ವೇಷವು ಮತ್ತೊಂದು ಜೀವ ತೆಗೆದಿದೆ. ಈ ಹಿನ್ನಲೆಯಲ್ಲಿ ಪೊಲೀಸರು ಪರಾರಿಯಾದ ಆರೋಪಿಗಳನ್ನು ಪತ್ತೆ ಹಚ್ಚಲು ಗಂಭೀರ ಕ್ರಮ ಕೈಗೊಂಡಿದ್ದು, ಶೀಘ್ರದಲ್ಲೇ ಅವರನ್ನು ಬಂಧಿಸಿ ಕಾನೂನು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಇನ್ನು ಮುಂದೆ ಇಂತಹ ಘಟನೆಗಳು ಪುನರಾವೃತ್ತಿಯಾಗದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪೊಲೀಸರು ಮುಂದಾಗಿದ್ದಾರೆ. ವರದಿ: ಸುಬ್ರಹ್ಮಣ್ಯಂ

nazeer ahamad

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

11 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

11 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

11 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

11 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

11 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

11 hours ago