ಮನೆ ಮನೆಗೆ ಬಟ್ಟೆ ಮಾರುವುದಾಗಿ ಹೇಳಿಕೊಂಡು ಆರೋಪಿಗಳು ಕಾಣಿಯೂರಿಗೆ ಬಂದಿದ್ದಾರೆ. ಅಲ್ಲಿಂದ ಹಲವು ಮನೆಗಳಿಗೆ ಅವರು ತೆರಳಿದ್ದು, ಬಳಿಕ ದೋಳ್ಪಾಡಿ ಗ್ರಾಮಕ್ಕೂ ಬಂದಿದ್ದರು. ಅಲ್ಲಿ ಅವರು ಬಟ್ಟೆ ಮಾರುವ ನೆಪದಲ್ಲಿ ಮನೆಯೊಂದಕ್ಕೆ ತೆರಳಿದ್ದು, ಒಬ್ಬಂಟಿ ಮಹಿಳೆ ಇರುವುದನ್ನು ಗಮನಿಸಿದ್ದಾರೆ. ಅದಾದ ಬಳಿಕ ಓರ್ವ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಈ ವೇಳೆ ಮಹಿಳೆ ಜೋರಾಗಿ ಕಿರುಚಾಡಿದ್ದು ಕೂಡಲೇ ಆರೋಪಿಗಳು ತಾವು ಬಂದಿದ್ದ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದಾರೆ. ಮಹಿಳೆ ಕಿರುಚಿದ ಸದ್ದು ಕೇಳಿದ ಸ್ಥಳೀಯರು ಆರೋಪಿಗಳನ್ನು ಬೆನ್ನಟ್ಟಿದ್ದಾರೆ. ಆದರೆ, ಆರೋಪಿಗಳು ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಕಾರು ಪಲ್ಟಿಯಾಗಿ ಅವಘಡ ಸಂಭವಿಸಿದೆ.
ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ.
ಪೊಳಲಿಯ ಅಡ್ಡೂರು ನಿವಾಸಿಗಳಾದ ರಫೀಕ್ ಹಾಗೂ ರಮಿಯಾಸುದ್ದಿನ್ ಅಪಘಾತದಲ್ಲಿ ಗಾಯಗೊಂಡವರು. ಇವರ ವಿರುದ್ಧ ಅತ್ಯಾಚಾರಕ್ಕೆ ಯತ್ನಿಸಿದ ಬಗ್ಗೆ ಮಹಿಳೆ ದೂರು ನೀಡಿದ್ದು, ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಗೊಂಡಿರುವ ಆರೋಪಿಗಳನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…