ಬೆಂಗಳೂರು ನಗರದ ಚಂದ್ರಾ ಲೇಔಟ್ ವ್ಯಾಪ್ತಿಯ ಗಂಗೊಂಡನಹಳ್ಳಿಯಲ್ಲಿ ಮಧ್ಯಾಹ್ನ ನಡೆದ ಭೀಕರ ಘಟನೆಯಲ್ಲಿ ವಿವಾಹಿತ ಮಹಿಳೆ ಫಿರ್ದೋಸ್ ಭಾನು ಹತ್ಯೆಯಾಗಿದ್ದಾಳೆ. ಪರಿಚಿತ ವ್ಯಕ್ತಿಯೊಬ್ಬನಿಂದಲೇ ಚಾಕುವಿನಿಂದ ಹಲ್ಲೆ ನಡೆಸಲ್ಪಟ್ಟಿದ್ದು, ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಮಾಹಿತಿಯ ಪ್ರಕಾರ, ಫಿರ್ದೋಸ್ ಭಾನು ಅವರ ಹೊಟ್ಟೆ, ತೊಡೆ ಮತ್ತು ಕೈ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದು, ರಕ್ತಸ್ರಾವದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಈ ಕೃತ್ಯ ಎಸಗಿದ ಆರೋಪಿಯನ್ನು ‘ಅಫೀಸ್’ ಎಂದು ಗುರುತಿಸಲಾಗಿದೆ. ಆತ ಸ್ಥಳೀಯ ಆಟೋ ಗ್ಯಾರೇಜ್ನಲ್ಲಿ ಕೆಲಸ ಮಾಡುತ್ತಿದ್ದನೆಂದು ತಿಳಿದುಬಂದಿದೆ.
ಕಳೆದ ಕೆಲವು ತಿಂಗಳಿನಿಂದ ಆರೋಪಿ ಫಿರ್ದೋಸ್ ಅವರ ಹಿಂದೆ ಬಿದ್ದು, ಪ್ರೀತಿಸಲು ಒತ್ತಾಯಿಸುತ್ತಿದ್ದನು. ಆದರೆ ಫಿರ್ದೋಸ್ ಈ ಪ್ರಸ್ತಾವವನ್ನು ಸ್ಪಷ್ಟವಾಗಿ ನಿರಾಕರಿಸಿ, ಆತನಿಂದ ದೂರವಿರಲು ಪ್ರಯತ್ನಿಸುತ್ತಿದ್ದಳು. ಈ ವಿಚಾರ ಮೊದಲು ಚಂದ್ರಾ ಲೇಔಟ್ ಪೊಲೀಸ್ ಠಾಣೆಗೂ ತಲುಪಿದ್ದು, ಫಿರ್ದೋಸ್ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಕರೆಸಿ ಎಚ್ಚರಿಕೆ ನೀಡಿದ್ದರು. ಇನ್ನು ಮುಂದೆ ಕಿರುಕುಳ ನೀಡುವುದಿಲ್ಲವೆಂದು ಆತ ಬರವಸೆ ಪತ್ರ ನೀಡಿದ್ದನು.
ಆದರೂ, ಆರೋಪಿ ತನ್ನ ವರ್ತನೆ ಬದಲಿಸದೆ ಮತ್ತೆ ಮತ್ತೆ ಫಿರ್ದೋಸ್ ಅವರ ಹಿಂದೆ ಬೀಳುತ್ತಿದ್ದನು. ಅವರು ಎಲ್ಲಿಗೆ ಹೋಗುತ್ತಾರೆ ಎಂಬುದನ್ನೂ ಗಮನಿಸುತ್ತಿದ್ದನೆಂದು ತಿಳಿದುಬಂದಿದೆ.
ಘಟನೆ ನಡೆದ ದಿನ ಮಧ್ಯಾಹ್ನ ಸುಮಾರು 2 ಗಂಟೆಗೆ, ಗಂಗೊಂಡನಹಳ್ಳಿ ಮಸೀದಿ ಸಮೀಪ ಫಿರ್ದೋಸ್ ಮನೆ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾಗ ಆರೋಪಿ ಹಿಂಬಾಲಿಸಿಕೊಂಡು ಬಂದಿದ್ದನು. ಈ ವೇಳೆ ಇಬ್ಬರ ನಡುವೆ ವಾಗ್ವಾದ ಉಂಟಾಗಿ, ಕೋಪಗೊಂಡ ಆರೋಪಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಪರಿಣಾಮವಾಗಿ ಫಿರ್ದೋಸ್ ಭಾನು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಆರೋಪಿ ಪರಾರಿಯಾಗಿದ್ದು, ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.
ಮೃತ ಫಿರ್ದೋಸ್ ಭಾನು ಮೂವರು ಮಕ್ಕಳ ತಾಯಿ. ಕುಟುಂಬಸ್ಥರ ಹೇಳಿಕೆ ಪ್ರಕಾರ, ಆರೋಪಿ ನಿರಂತರವಾಗಿ ಕಿರುಕುಳ ನೀಡುತ್ತಾ ‘ಮಾತನಾಡು’ ಎಂದು ಒತ್ತಾಯಿಸುತ್ತಿದ್ದನು. ಮಾತಾಡದಿದ್ದರೆ ಮನೆಗೆ ಹೇಳುವುದಾಗಿ ಬೆದರಿಸುತ್ತಿದ್ದನೆಂದು ಮೃತಳ ಅಕ್ಕ ಸಲ್ಮಾ ತಿಳಿಸಿದ್ದಾರೆ. ಈ ಘಟನೆಯು ಏಕಪಕ್ಷೀಯ ಪ್ರೀತಿ ಮತ್ತು ಕಿರುಕುಳ ಹೇಗೆ ಭೀಕರ ಅಂತ್ಯಕ್ಕೇ ದಾರಿ ಮಾಡಿಕೊಡುತ್ತದೆ ಎಂಬುದಕ್ಕೆ ಮತ್ತೊಂದು ಉದಾಹರಣೆಯಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಲು ಮುಂದಾಗಿದ್ದಾರೆ.
ಮುಂಡಗೋಡ ಪೊಲೀಸರು ಅಕ್ರಮವಾಗಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದ ಶಿರಸಿ ಹುಬ್ಬಳ್ಳಿ…
ಯಾದಗಿರಿ ಜಿಲ್ಲೆಯ ಗೋನಾಳ ಗ್ರಾಮದಲ್ಲಿ ನಡೆದ ವೃದ್ಧನ ಹತ್ಯೆ ಪ್ರಕರಣಕ್ಕೆ ಈಗ ಅಚ್ಚರಿ ಮೂಡಿಸುವ ತಿರುವು ಸಿಕ್ಕಿದೆ. 74 ವರ್ಷದ…
ಮಹಾರಾಷ್ಟ್ರದಲ್ಲಿ ರಾಜಕೀಯ ಮುಖಂಡರ ಜ್ಯೋತಿಷ್ಯ ಹೇಳಿ ಖ್ಯಾತಿ ಪಡೆದಿದ್ದ ಸ್ವಯಂ ಘೋಷಿತ ಜ್ಯೋತಿಷಿ ‘ಕ್ಯಾಪ್ಟನ್’ ಅಶೋಕ್ ಖರತ್ ಇದೀಗ ಗಂಭೀರ…
ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉತ್ತಮ ಸಂಬಳದ ಉದ್ಯೋಗ ಪಡೆಯಲು ಬಯಸುವವರಿಗೆ ಮಹತ್ವದ ಅವಕಾಶ ಬಂದಿದೆ. ರಾಷ್ಟ್ರೀಯ ಜಲ ವಿದ್ಯುಚ್ಛಕ್ತಿ ನಿಗಮ…
ಕಾನೂನು ಪದವಿ ಪಡೆದ ನಂತರ ಉತ್ತಮ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಸಂತಸದ ಸುದ್ದಿ. ಕರ್ನಾಟಕ ಹೈಕೋರ್ಟ್ವು 2026ರ ನೇಮಕಾತಿಗಾಗಿ ಅಧಿಸೂಚನೆ…
ರಾಜ್ಯದಲ್ಲಿ ಪ್ರಾಥಮಿಕ ಶಿಕ್ಷಣವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಸಕ್ತ ವರ್ಷದಲ್ಲೇ ಸುಮಾರು 5,000 ಅಂಗನವಾಡಿ ಕೇಂದ್ರಗಳಲ್ಲಿ…