Categories: CrimeLatest

ಪ್ರೀತ್ಸೆ ಎಂದು ಮೂರು ಮಕ್ಕಳ ತಾಯಿಯ ಹಿಂದೆ ಬಿದ್ದ: ಒಪ್ಪದಕ್ಕೆ ಅವಳನ್ನೇ ಕೊಂದ..!

ಬೆಂಗಳೂರು ನಗರದ ಚಂದ್ರಾ ಲೇಔಟ್ ವ್ಯಾಪ್ತಿಯ ಗಂಗೊಂಡನಹಳ್ಳಿಯಲ್ಲಿ ಮಧ್ಯಾಹ್ನ ನಡೆದ ಭೀಕರ ಘಟನೆಯಲ್ಲಿ ವಿವಾಹಿತ ಮಹಿಳೆ ಫಿರ್ದೋಸ್ ಭಾನು ಹತ್ಯೆಯಾಗಿದ್ದಾಳೆ. ಪರಿಚಿತ ವ್ಯಕ್ತಿಯೊಬ್ಬನಿಂದಲೇ ಚಾಕುವಿನಿಂದ ಹಲ್ಲೆ ನಡೆಸಲ್ಪಟ್ಟಿದ್ದು, ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಮಾಹಿತಿಯ ಪ್ರಕಾರ, ಫಿರ್ದೋಸ್ ಭಾನು ಅವರ ಹೊಟ್ಟೆ, ತೊಡೆ ಮತ್ತು ಕೈ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದು, ರಕ್ತಸ್ರಾವದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಈ ಕೃತ್ಯ ಎಸಗಿದ ಆರೋಪಿಯನ್ನು ‘ಅಫೀಸ್’ ಎಂದು ಗುರುತಿಸಲಾಗಿದೆ. ಆತ ಸ್ಥಳೀಯ ಆಟೋ ಗ್ಯಾರೇಜ್‌ನಲ್ಲಿ ಕೆಲಸ ಮಾಡುತ್ತಿದ್ದನೆಂದು ತಿಳಿದುಬಂದಿದೆ.

ಕಳೆದ ಕೆಲವು ತಿಂಗಳಿನಿಂದ ಆರೋಪಿ ಫಿರ್ದೋಸ್ ಅವರ ಹಿಂದೆ ಬಿದ್ದು, ಪ್ರೀತಿಸಲು ಒತ್ತಾಯಿಸುತ್ತಿದ್ದನು. ಆದರೆ ಫಿರ್ದೋಸ್ ಈ ಪ್ರಸ್ತಾವವನ್ನು ಸ್ಪಷ್ಟವಾಗಿ ನಿರಾಕರಿಸಿ, ಆತನಿಂದ ದೂರವಿರಲು ಪ್ರಯತ್ನಿಸುತ್ತಿದ್ದಳು. ಈ ವಿಚಾರ ಮೊದಲು ಚಂದ್ರಾ ಲೇಔಟ್ ಪೊಲೀಸ್ ಠಾಣೆಗೂ ತಲುಪಿದ್ದು, ಫಿರ್ದೋಸ್ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಕರೆಸಿ ಎಚ್ಚರಿಕೆ ನೀಡಿದ್ದರು. ಇನ್ನು ಮುಂದೆ ಕಿರುಕುಳ ನೀಡುವುದಿಲ್ಲವೆಂದು ಆತ ಬರವಸೆ ಪತ್ರ ನೀಡಿದ್ದನು.

ಆದರೂ, ಆರೋಪಿ ತನ್ನ ವರ್ತನೆ ಬದಲಿಸದೆ ಮತ್ತೆ ಮತ್ತೆ ಫಿರ್ದೋಸ್ ಅವರ ಹಿಂದೆ ಬೀಳುತ್ತಿದ್ದನು. ಅವರು ಎಲ್ಲಿಗೆ ಹೋಗುತ್ತಾರೆ ಎಂಬುದನ್ನೂ ಗಮನಿಸುತ್ತಿದ್ದನೆಂದು ತಿಳಿದುಬಂದಿದೆ.

ಘಟನೆ ನಡೆದ ದಿನ ಮಧ್ಯಾಹ್ನ ಸುಮಾರು 2 ಗಂಟೆಗೆ, ಗಂಗೊಂಡನಹಳ್ಳಿ ಮಸೀದಿ ಸಮೀಪ ಫಿರ್ದೋಸ್ ಮನೆ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾಗ ಆರೋಪಿ ಹಿಂಬಾಲಿಸಿಕೊಂಡು ಬಂದಿದ್ದನು. ಈ ವೇಳೆ ಇಬ್ಬರ ನಡುವೆ ವಾಗ್ವಾದ ಉಂಟಾಗಿ, ಕೋಪಗೊಂಡ ಆರೋಪಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಪರಿಣಾಮವಾಗಿ ಫಿರ್ದೋಸ್ ಭಾನು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಆರೋಪಿ ಪರಾರಿಯಾಗಿದ್ದು, ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ಮೃತ ಫಿರ್ದೋಸ್ ಭಾನು ಮೂವರು ಮಕ್ಕಳ ತಾಯಿ. ಕುಟುಂಬಸ್ಥರ ಹೇಳಿಕೆ ಪ್ರಕಾರ, ಆರೋಪಿ ನಿರಂತರವಾಗಿ ಕಿರುಕುಳ ನೀಡುತ್ತಾ ‘ಮಾತನಾಡು’ ಎಂದು ಒತ್ತಾಯಿಸುತ್ತಿದ್ದನು. ಮಾತಾಡದಿದ್ದರೆ ಮನೆಗೆ ಹೇಳುವುದಾಗಿ ಬೆದರಿಸುತ್ತಿದ್ದನೆಂದು ಮೃತಳ ಅಕ್ಕ ಸಲ್ಮಾ ತಿಳಿಸಿದ್ದಾರೆ. ಈ ಘಟನೆಯು ಏಕಪಕ್ಷೀಯ ಪ್ರೀತಿ ಮತ್ತು ಕಿರುಕುಳ ಹೇಗೆ ಭೀಕರ ಅಂತ್ಯಕ್ಕೇ ದಾರಿ ಮಾಡಿಕೊಡುತ್ತದೆ ಎಂಬುದಕ್ಕೆ ಮತ್ತೊಂದು ಉದಾಹರಣೆಯಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಲು ಮುಂದಾಗಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago