Categories: CrimeLatest

ಪ್ರೀತ್ಸೆ ಎಂದು ಮೂರು ಮಕ್ಕಳ ತಾಯಿಯ ಹಿಂದೆ ಬಿದ್ದ: ಒಪ್ಪದಕ್ಕೆ ಅವಳನ್ನೇ ಕೊಂದ..!

ಬೆಂಗಳೂರು ನಗರದ ಚಂದ್ರಾ ಲೇಔಟ್ ವ್ಯಾಪ್ತಿಯ ಗಂಗೊಂಡನಹಳ್ಳಿಯಲ್ಲಿ ಮಧ್ಯಾಹ್ನ ನಡೆದ ಭೀಕರ ಘಟನೆಯಲ್ಲಿ ವಿವಾಹಿತ ಮಹಿಳೆ ಫಿರ್ದೋಸ್ ಭಾನು ಹತ್ಯೆಯಾಗಿದ್ದಾಳೆ. ಪರಿಚಿತ ವ್ಯಕ್ತಿಯೊಬ್ಬನಿಂದಲೇ ಚಾಕುವಿನಿಂದ ಹಲ್ಲೆ ನಡೆಸಲ್ಪಟ್ಟಿದ್ದು, ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಮಾಹಿತಿಯ ಪ್ರಕಾರ, ಫಿರ್ದೋಸ್ ಭಾನು ಅವರ ಹೊಟ್ಟೆ, ತೊಡೆ ಮತ್ತು ಕೈ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದು, ರಕ್ತಸ್ರಾವದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಈ ಕೃತ್ಯ ಎಸಗಿದ ಆರೋಪಿಯನ್ನು ‘ಅಫೀಸ್’ ಎಂದು ಗುರುತಿಸಲಾಗಿದೆ. ಆತ ಸ್ಥಳೀಯ ಆಟೋ ಗ್ಯಾರೇಜ್‌ನಲ್ಲಿ ಕೆಲಸ ಮಾಡುತ್ತಿದ್ದನೆಂದು ತಿಳಿದುಬಂದಿದೆ.

ಕಳೆದ ಕೆಲವು ತಿಂಗಳಿನಿಂದ ಆರೋಪಿ ಫಿರ್ದೋಸ್ ಅವರ ಹಿಂದೆ ಬಿದ್ದು, ಪ್ರೀತಿಸಲು ಒತ್ತಾಯಿಸುತ್ತಿದ್ದನು. ಆದರೆ ಫಿರ್ದೋಸ್ ಈ ಪ್ರಸ್ತಾವವನ್ನು ಸ್ಪಷ್ಟವಾಗಿ ನಿರಾಕರಿಸಿ, ಆತನಿಂದ ದೂರವಿರಲು ಪ್ರಯತ್ನಿಸುತ್ತಿದ್ದಳು. ಈ ವಿಚಾರ ಮೊದಲು ಚಂದ್ರಾ ಲೇಔಟ್ ಪೊಲೀಸ್ ಠಾಣೆಗೂ ತಲುಪಿದ್ದು, ಫಿರ್ದೋಸ್ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಕರೆಸಿ ಎಚ್ಚರಿಕೆ ನೀಡಿದ್ದರು. ಇನ್ನು ಮುಂದೆ ಕಿರುಕುಳ ನೀಡುವುದಿಲ್ಲವೆಂದು ಆತ ಬರವಸೆ ಪತ್ರ ನೀಡಿದ್ದನು.

ಆದರೂ, ಆರೋಪಿ ತನ್ನ ವರ್ತನೆ ಬದಲಿಸದೆ ಮತ್ತೆ ಮತ್ತೆ ಫಿರ್ದೋಸ್ ಅವರ ಹಿಂದೆ ಬೀಳುತ್ತಿದ್ದನು. ಅವರು ಎಲ್ಲಿಗೆ ಹೋಗುತ್ತಾರೆ ಎಂಬುದನ್ನೂ ಗಮನಿಸುತ್ತಿದ್ದನೆಂದು ತಿಳಿದುಬಂದಿದೆ.

ಘಟನೆ ನಡೆದ ದಿನ ಮಧ್ಯಾಹ್ನ ಸುಮಾರು 2 ಗಂಟೆಗೆ, ಗಂಗೊಂಡನಹಳ್ಳಿ ಮಸೀದಿ ಸಮೀಪ ಫಿರ್ದೋಸ್ ಮನೆ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾಗ ಆರೋಪಿ ಹಿಂಬಾಲಿಸಿಕೊಂಡು ಬಂದಿದ್ದನು. ಈ ವೇಳೆ ಇಬ್ಬರ ನಡುವೆ ವಾಗ್ವಾದ ಉಂಟಾಗಿ, ಕೋಪಗೊಂಡ ಆರೋಪಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಪರಿಣಾಮವಾಗಿ ಫಿರ್ದೋಸ್ ಭಾನು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಆರೋಪಿ ಪರಾರಿಯಾಗಿದ್ದು, ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ಮೃತ ಫಿರ್ದೋಸ್ ಭಾನು ಮೂವರು ಮಕ್ಕಳ ತಾಯಿ. ಕುಟುಂಬಸ್ಥರ ಹೇಳಿಕೆ ಪ್ರಕಾರ, ಆರೋಪಿ ನಿರಂತರವಾಗಿ ಕಿರುಕುಳ ನೀಡುತ್ತಾ ‘ಮಾತನಾಡು’ ಎಂದು ಒತ್ತಾಯಿಸುತ್ತಿದ್ದನು. ಮಾತಾಡದಿದ್ದರೆ ಮನೆಗೆ ಹೇಳುವುದಾಗಿ ಬೆದರಿಸುತ್ತಿದ್ದನೆಂದು ಮೃತಳ ಅಕ್ಕ ಸಲ್ಮಾ ತಿಳಿಸಿದ್ದಾರೆ. ಈ ಘಟನೆಯು ಏಕಪಕ್ಷೀಯ ಪ್ರೀತಿ ಮತ್ತು ಕಿರುಕುಳ ಹೇಗೆ ಭೀಕರ ಅಂತ್ಯಕ್ಕೇ ದಾರಿ ಮಾಡಿಕೊಡುತ್ತದೆ ಎಂಬುದಕ್ಕೆ ಮತ್ತೊಂದು ಉದಾಹರಣೆಯಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಲು ಮುಂದಾಗಿದ್ದಾರೆ.

ಭ್ರಷ್ಟರ ಬೇಟೆ

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

6 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

12 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

12 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago