Latest

ಕಳ್ಳತನ ತಡೆಯಲೆತ್ನಿಸಿದ ಹೆಡ್ ಕಾನ್‌ಸ್ಟೆಬಲ್‌ ಮೇಲೆ ಚಾಕುವಿನಿಂದ ಹಲ್ಲೆ: ಆಸ್ಪತ್ರೆಯಲ್ಲಿ ಗಂಭೀರ ಚಿಕಿತ್ಸೆ

ಬಸವನಬಾಗೇವಾಡಿ, ಆಗಸ್ಟ್ 6 – ಪಟ್ಟಣದ ಎಪಿಎಂಸಿ ಮಾರುಕಟ್ಟೆ ಹಿಂಭಾಗದ ಶ್ರೀನಗರ ಪ್ರದೇಶದಲ್ಲಿ ಮಂಗಳವಾರ ರಾತ್ರಿ ನಡೆದ ಕಳ್ಳತನ ಯತ್ನವನ್ನು ತಡೆಗಟ್ಟಲು ಮುಂದಾದ ಪೊಲೀಸ್ ಸಿಬ್ಬಂದಿಯೊಬ್ಬರು ದುಷ್ಕರ್ಮಿಗಳಿಂದ ಚಾಕುವಿನಿಂದ ಹಲ್ಲೆಗೆ ಒಳಗಾದ ಘಟನೆ ಭೀತಿಗೊಳಿಸಿದೆ.

ರಾತ್ರಿ ಸುಮಾರು 2.30ರ ಸುಮಾರಿಗೆ ಸುರಿಯುತ್ತಿದ್ದ ಮಳೆಯ ನಡುವೆಯೇ, ಶ್ರೀನಗರದ ನಿವಾಸಿ ಸಚಿನ್ ಖಾನಾಪುರ ಅವರ ಬಾಡಿಗೆ ಮನೆಯಲ್ಲಿ ಯಾವುದೇವರು ಇಲ್ಲದ ಸಮಯದಲ್ಲಿ ನಾಲ್ವರು ಶಂಕಾಸ್ಪದ ಕಳ್ಳರು ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ್ದರು. ಸ್ಥಳೀಯರ ಗಮನಕ್ಕೆ ವಿಷಯ ಬಂದ ಕೂಡಲೇ ಅವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು.

ಸುದ್ದಿ ತಿಳಿದ ಕ್ಷಣದಿಂದಲೇ ಇನ್‌ಸ್ಪೆಕ್ಟರ್ ಗುರುಶಾಂತ ದಾಶ್ಯಾಳ ಅವರ ಜೊತೆಗೆ ಜೀಪ್ ಚಾಲಕರಾಗಿ ಕಾರ್ಯನಿರ್ವಹಿಸುತ್ತಿರುವ ಹೆಡ್ ಕಾನ್‌ಸ್ಟೆಬಲ್ ರಮೇಶ ಗೂಳಿ ಹಾಗೂ ಇನ್ನೊಬ್ಬ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತಕ್ಷಣವೇ ದೌಡಾಯಿಸಿದರು. ಈ ವೇಳೆ ಕಳ್ಳರನ್ನು ಪತ್ತೆಹಚ್ಚುವ ಪ್ರಕ್ರಿಯೆಯಲ್ಲಿ ಒಬ್ಬ ಶಂಕಿತನನ್ನು ಹಿಡಿದಾಗ, ಆತನು ತನ್ನ ಬಳಿ ಇದ್ದ ಚಾಕುವಿನಿಂದ ರಮೇಶ್ ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾದ. ಈ ದಾಳಿಯಲ್ಲಿ ರಮೇಶ್ ಗೂಳಿ ಅವರ ಭುಜ, ಕುತ್ತಿಗೆ, ಎದೆ ಮತ್ತು ತೊಡೆಯ ಭಾಗಗಳಲ್ಲಿ ಗಂಭೀರ ಗಾಯಗಳಾಗಿವೆ.

ಗಾಯಾಳು ಹೆಡ್ ಕಾನ್‌ಸ್ಟೆಬಲ್ ರಮೇಶ ಅವರನ್ನು ತಕ್ಷಣ ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಮಾಹಿತಿಯನ್ನು ಪಡೆದ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಆಸ್ಪತ್ರೆಗೆ ಭೇಟಿ ನೀಡಿ ರಮೇಶ್ ಅವರ ಆರೋಗ್ಯ ವಿಚಾರಿಸಿದರು ಹಾಗೂ ವೈದ್ಯರಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡರು. ಆರೋಪಿಗಳನ್ನು ಶೀಘ್ರದಲ್ಲೇ ಪತ್ತೆ ಮಾಡಿ ಕ್ರಮ ಜರುಗಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಅದರೊಂದಿಗೆ, ಹೆಚ್ಚುವರಿ ಎಸ್ಪಿ ರಾಮನಗೌಡ ಹಟ್ಟಿ, ಡಿವೈಎಸ್‌ಪಿ ಬಲ್ಲಪ್ಪ ನಂದಗಾವಿ ಹಾಗೂ ಇನ್‌ಸ್ಪೆಕ್ಟರ್ ದಾಶ್ಯಾಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಕಳ್ಳರನ್ನು ಪತ್ತೆ ಹಚ್ಚುವ ದಿಕ್ಕಿನಲ್ಲಿ ತನಿಖೆ ನಡೆಯುತ್ತಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

14 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

14 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

14 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

14 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago