Latest

ಕೆಎಸ್‌ಆರ್‌ಟಿಸಿ ಚಾಲಕನ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ ಹೆಡ್‌ಕಾನ್ಸ್‌ಟೇಬಲ್‌ ಅಮಾನತು

ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಪೊಲೀಸ್ ಹೆಡ್‌ಕಾನ್ಸ್‌ಟೇಬಲ್‌ ಒಬ್ಬರ ಅಸಭ್ಯ ವರ್ತನೆ ಹಾಗೂ ಹಲ್ಲೆ ಪ್ರಕರಣ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಕರ್ತವ್ಯ ನಿರತ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ ಚಪ್ಪಲಿ ಮತ್ತು ಹೆಲ್ಮೆಟ್‌ನಿಂದ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ, ಕೂಡ್ಲಿಗಿ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ಮಂಜುನಾಥ್ ಅವರನ್ನು ಇಲಾಖೆಯಿಂದ ಅಮಾನತುಗೊಳಿಸಲಾಗಿದೆ.

ಘಟನೆ ಎರಡು ದಿನಗಳ ಹಿಂದೆ ನಡೆದಿದೆ. ಹರಿಹರ ಘಟಕದ ಬಸ್ ಬಳ್ಳಾರಿಗೆ ತೆರಳುತ್ತಿದ್ದ ವೇಳೆ, ಕೊಟ್ಟೂರಿನಿಂದ ಕೂಡ್ಲಿಗಿ ಕಡೆ ಸಾಗುತ್ತಿದ್ದ ಬಸ್‌ ಮಲ್ಲನಾಯಕಹಳ್ಳಿ ಹತ್ತಿರ ಬಂದಾಗ, ಬಸ್ ಚಾಲಕ ರಾಮಲಿಂಗಪ್ಪ ಎದುರಿಗೆ ಬರುತ್ತಿದ್ದ ಕಾರಿನ ಕಾರಣದಿಂದ ಬೈಕ್ ಹಿಂದಿಕ್ಕುವ ವೇಳೆ ಎಡಕ್ಕೆ ಸರಿದಿದ್ದಾರೆ. ಈ ಸಮಯದಲ್ಲಿ ಬಸ್ ಹಿಂಭಾಗ ಬೈಕ್ ಹ್ಯಾಂಡಲ್‌ಗೆ ಸ್ವಲ್ಪ ಮಟ್ಟಿಗೆ ತಾಗಿದೆಯೆಂಬುದು ಆರೋಪ. ಬೈಕ್‌ನಲ್ಲಿ ಕೂಡ್ಲಿಗಿ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ಮಂಜುನಾಥ ಹಾಗೂ ಮತ್ತೊಬ್ಬ ಕಾನ್ಸ್‌ಟೇಬಲ್ ಸವಾರರಾಗಿದ್ದರು.

ಘಟನೆ ಬಳಿಕ ಗಜಾಪೂರದ ಬಳಿ ಬಸ್ ನಿಲ್ಲಿಸಿದ ಮಂಜುನಾಥ, ಯಾವುದೇ ವಿಚಾರಣೆ ಮಾಡದೇ ಬಸ್ ಒಳಗೆ ನುಗ್ಗಿ ಚಾಲಕನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಕಾಲಿನಲ್ಲಿದ್ದ ಚಪ್ಪಲಿ ತೆಗೆದು ಹೊಡೆದಿದ್ದಾರೆ. ಅಲ್ಲದೆ ಚಾಲಕನ ಜೇಬಿನಲ್ಲಿದ್ದ ಮೊಬೈಲ್ ಕಿತ್ತುಕೊಂಡು “ಸ್ಟೇಷನ್‌ಗೆ ಬಾ” ಎಂದು ಬೆದರಿಕೆ ಹಾಕಿದ್ದಾರೆ. ಚಾಲಕ ಮೊಬೈಲ್ ಹಿಂತಿರುಗಿಸುವಂತೆ ವಿನಂತಿಸಿದಾಗ, ಮಂಜುನಾಥ ಕೈಯಲ್ಲಿದ್ದ ಹೆಲ್ಮೆಟ್‌ನಿಂದ ಮತ್ತೊಮ್ಮೆ ಹಲ್ಲೆ ನಡೆಸಿದ್ದಾರೆ.

ಘಟನೆಯ ನಂತರ ಚಾಲಕ ರಾಮಲಿಂಗಪ್ಪ ಕೂಡ್ಲಿಗಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮಂಜುನಾಥ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಘಟನೆಯ ಸಮಯದಲ್ಲಿ ಮಂಜುನಾಥ ಕರ್ತವ್ಯದಲ್ಲಿರದಿದ್ದರೂ, ಕರ್ತವ್ಯ ನಿರತ ಸರ್ಕಾರಿ ನೌಕರರ ಮೇಲೆ ಹಲ್ಲೆ ನಡೆಸಿರುವುದರಿಂದ ಸಾರ್ವಜನಿಕರು ಹಾಗೂ ಸಾರಿಗೆ ನೌಕರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು, ಆರೋಪಿಯನ್ನು ತಕ್ಷಣ ಬಂಧಿಸಿ, ಸೇವೆಯಿಂದ ವಜಾ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಸಾರ್ವಜನಿಕ ಒತ್ತಡ ಮತ್ತು ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಪೊಲೀಸ್ ಇಲಾಖೆ ಶಿಸ್ತಿನ ಕ್ರಮವಾಗಿ ಮಂಜುನಾಥ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿದೆ. ಈ ಕ್ರಮಕ್ಕೆ ಬೆಂಬಲ ವ್ಯಕ್ತವಾಗಿದ್ದು, “ರೌಡಿಯಂತೆ ವರ್ತಿಸಿದ ಪೊಲೀಸರಿಗೆ ಇದು ಸರಿಯಾದ ಪಾಠ” ಎಂದು ಜನತೆ ಪ್ರತಿಕ್ರಿಯಿಸಿದ್ದಾರೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

2 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

8 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

8 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago