Latest

ಕೆಎಸ್‌ಆರ್‌ಟಿಸಿ ಚಾಲಕನ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ ಹೆಡ್‌ಕಾನ್ಸ್‌ಟೇಬಲ್‌ ಅಮಾನತು

ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಪೊಲೀಸ್ ಹೆಡ್‌ಕಾನ್ಸ್‌ಟೇಬಲ್‌ ಒಬ್ಬರ ಅಸಭ್ಯ ವರ್ತನೆ ಹಾಗೂ ಹಲ್ಲೆ ಪ್ರಕರಣ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಕರ್ತವ್ಯ ನಿರತ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ ಚಪ್ಪಲಿ ಮತ್ತು ಹೆಲ್ಮೆಟ್‌ನಿಂದ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ, ಕೂಡ್ಲಿಗಿ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ಮಂಜುನಾಥ್ ಅವರನ್ನು ಇಲಾಖೆಯಿಂದ ಅಮಾನತುಗೊಳಿಸಲಾಗಿದೆ.

ಘಟನೆ ಎರಡು ದಿನಗಳ ಹಿಂದೆ ನಡೆದಿದೆ. ಹರಿಹರ ಘಟಕದ ಬಸ್ ಬಳ್ಳಾರಿಗೆ ತೆರಳುತ್ತಿದ್ದ ವೇಳೆ, ಕೊಟ್ಟೂರಿನಿಂದ ಕೂಡ್ಲಿಗಿ ಕಡೆ ಸಾಗುತ್ತಿದ್ದ ಬಸ್‌ ಮಲ್ಲನಾಯಕಹಳ್ಳಿ ಹತ್ತಿರ ಬಂದಾಗ, ಬಸ್ ಚಾಲಕ ರಾಮಲಿಂಗಪ್ಪ ಎದುರಿಗೆ ಬರುತ್ತಿದ್ದ ಕಾರಿನ ಕಾರಣದಿಂದ ಬೈಕ್ ಹಿಂದಿಕ್ಕುವ ವೇಳೆ ಎಡಕ್ಕೆ ಸರಿದಿದ್ದಾರೆ. ಈ ಸಮಯದಲ್ಲಿ ಬಸ್ ಹಿಂಭಾಗ ಬೈಕ್ ಹ್ಯಾಂಡಲ್‌ಗೆ ಸ್ವಲ್ಪ ಮಟ್ಟಿಗೆ ತಾಗಿದೆಯೆಂಬುದು ಆರೋಪ. ಬೈಕ್‌ನಲ್ಲಿ ಕೂಡ್ಲಿಗಿ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ಮಂಜುನಾಥ ಹಾಗೂ ಮತ್ತೊಬ್ಬ ಕಾನ್ಸ್‌ಟೇಬಲ್ ಸವಾರರಾಗಿದ್ದರು.

ಘಟನೆ ಬಳಿಕ ಗಜಾಪೂರದ ಬಳಿ ಬಸ್ ನಿಲ್ಲಿಸಿದ ಮಂಜುನಾಥ, ಯಾವುದೇ ವಿಚಾರಣೆ ಮಾಡದೇ ಬಸ್ ಒಳಗೆ ನುಗ್ಗಿ ಚಾಲಕನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಕಾಲಿನಲ್ಲಿದ್ದ ಚಪ್ಪಲಿ ತೆಗೆದು ಹೊಡೆದಿದ್ದಾರೆ. ಅಲ್ಲದೆ ಚಾಲಕನ ಜೇಬಿನಲ್ಲಿದ್ದ ಮೊಬೈಲ್ ಕಿತ್ತುಕೊಂಡು “ಸ್ಟೇಷನ್‌ಗೆ ಬಾ” ಎಂದು ಬೆದರಿಕೆ ಹಾಕಿದ್ದಾರೆ. ಚಾಲಕ ಮೊಬೈಲ್ ಹಿಂತಿರುಗಿಸುವಂತೆ ವಿನಂತಿಸಿದಾಗ, ಮಂಜುನಾಥ ಕೈಯಲ್ಲಿದ್ದ ಹೆಲ್ಮೆಟ್‌ನಿಂದ ಮತ್ತೊಮ್ಮೆ ಹಲ್ಲೆ ನಡೆಸಿದ್ದಾರೆ.

ಘಟನೆಯ ನಂತರ ಚಾಲಕ ರಾಮಲಿಂಗಪ್ಪ ಕೂಡ್ಲಿಗಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮಂಜುನಾಥ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಘಟನೆಯ ಸಮಯದಲ್ಲಿ ಮಂಜುನಾಥ ಕರ್ತವ್ಯದಲ್ಲಿರದಿದ್ದರೂ, ಕರ್ತವ್ಯ ನಿರತ ಸರ್ಕಾರಿ ನೌಕರರ ಮೇಲೆ ಹಲ್ಲೆ ನಡೆಸಿರುವುದರಿಂದ ಸಾರ್ವಜನಿಕರು ಹಾಗೂ ಸಾರಿಗೆ ನೌಕರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು, ಆರೋಪಿಯನ್ನು ತಕ್ಷಣ ಬಂಧಿಸಿ, ಸೇವೆಯಿಂದ ವಜಾ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಸಾರ್ವಜನಿಕ ಒತ್ತಡ ಮತ್ತು ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಪೊಲೀಸ್ ಇಲಾಖೆ ಶಿಸ್ತಿನ ಕ್ರಮವಾಗಿ ಮಂಜುನಾಥ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿದೆ. ಈ ಕ್ರಮಕ್ಕೆ ಬೆಂಬಲ ವ್ಯಕ್ತವಾಗಿದ್ದು, “ರೌಡಿಯಂತೆ ವರ್ತಿಸಿದ ಪೊಲೀಸರಿಗೆ ಇದು ಸರಿಯಾದ ಪಾಠ” ಎಂದು ಜನತೆ ಪ್ರತಿಕ್ರಿಯಿಸಿದ್ದಾರೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

10 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

15 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

15 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

15 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

15 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

20 hours ago