Latest

ಕೆಎಸ್‌ಆರ್‌ಟಿಸಿ ಚಾಲಕನ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ ಹೆಡ್‌ಕಾನ್ಸ್‌ಟೇಬಲ್‌ ಅಮಾನತು

ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಪೊಲೀಸ್ ಹೆಡ್‌ಕಾನ್ಸ್‌ಟೇಬಲ್‌ ಒಬ್ಬರ ಅಸಭ್ಯ ವರ್ತನೆ ಹಾಗೂ ಹಲ್ಲೆ ಪ್ರಕರಣ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಕರ್ತವ್ಯ ನಿರತ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ ಚಪ್ಪಲಿ ಮತ್ತು ಹೆಲ್ಮೆಟ್‌ನಿಂದ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ, ಕೂಡ್ಲಿಗಿ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ಮಂಜುನಾಥ್ ಅವರನ್ನು ಇಲಾಖೆಯಿಂದ ಅಮಾನತುಗೊಳಿಸಲಾಗಿದೆ.

ಘಟನೆ ಎರಡು ದಿನಗಳ ಹಿಂದೆ ನಡೆದಿದೆ. ಹರಿಹರ ಘಟಕದ ಬಸ್ ಬಳ್ಳಾರಿಗೆ ತೆರಳುತ್ತಿದ್ದ ವೇಳೆ, ಕೊಟ್ಟೂರಿನಿಂದ ಕೂಡ್ಲಿಗಿ ಕಡೆ ಸಾಗುತ್ತಿದ್ದ ಬಸ್‌ ಮಲ್ಲನಾಯಕಹಳ್ಳಿ ಹತ್ತಿರ ಬಂದಾಗ, ಬಸ್ ಚಾಲಕ ರಾಮಲಿಂಗಪ್ಪ ಎದುರಿಗೆ ಬರುತ್ತಿದ್ದ ಕಾರಿನ ಕಾರಣದಿಂದ ಬೈಕ್ ಹಿಂದಿಕ್ಕುವ ವೇಳೆ ಎಡಕ್ಕೆ ಸರಿದಿದ್ದಾರೆ. ಈ ಸಮಯದಲ್ಲಿ ಬಸ್ ಹಿಂಭಾಗ ಬೈಕ್ ಹ್ಯಾಂಡಲ್‌ಗೆ ಸ್ವಲ್ಪ ಮಟ್ಟಿಗೆ ತಾಗಿದೆಯೆಂಬುದು ಆರೋಪ. ಬೈಕ್‌ನಲ್ಲಿ ಕೂಡ್ಲಿಗಿ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ಮಂಜುನಾಥ ಹಾಗೂ ಮತ್ತೊಬ್ಬ ಕಾನ್ಸ್‌ಟೇಬಲ್ ಸವಾರರಾಗಿದ್ದರು.

ಘಟನೆ ಬಳಿಕ ಗಜಾಪೂರದ ಬಳಿ ಬಸ್ ನಿಲ್ಲಿಸಿದ ಮಂಜುನಾಥ, ಯಾವುದೇ ವಿಚಾರಣೆ ಮಾಡದೇ ಬಸ್ ಒಳಗೆ ನುಗ್ಗಿ ಚಾಲಕನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಕಾಲಿನಲ್ಲಿದ್ದ ಚಪ್ಪಲಿ ತೆಗೆದು ಹೊಡೆದಿದ್ದಾರೆ. ಅಲ್ಲದೆ ಚಾಲಕನ ಜೇಬಿನಲ್ಲಿದ್ದ ಮೊಬೈಲ್ ಕಿತ್ತುಕೊಂಡು “ಸ್ಟೇಷನ್‌ಗೆ ಬಾ” ಎಂದು ಬೆದರಿಕೆ ಹಾಕಿದ್ದಾರೆ. ಚಾಲಕ ಮೊಬೈಲ್ ಹಿಂತಿರುಗಿಸುವಂತೆ ವಿನಂತಿಸಿದಾಗ, ಮಂಜುನಾಥ ಕೈಯಲ್ಲಿದ್ದ ಹೆಲ್ಮೆಟ್‌ನಿಂದ ಮತ್ತೊಮ್ಮೆ ಹಲ್ಲೆ ನಡೆಸಿದ್ದಾರೆ.

ಘಟನೆಯ ನಂತರ ಚಾಲಕ ರಾಮಲಿಂಗಪ್ಪ ಕೂಡ್ಲಿಗಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮಂಜುನಾಥ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಘಟನೆಯ ಸಮಯದಲ್ಲಿ ಮಂಜುನಾಥ ಕರ್ತವ್ಯದಲ್ಲಿರದಿದ್ದರೂ, ಕರ್ತವ್ಯ ನಿರತ ಸರ್ಕಾರಿ ನೌಕರರ ಮೇಲೆ ಹಲ್ಲೆ ನಡೆಸಿರುವುದರಿಂದ ಸಾರ್ವಜನಿಕರು ಹಾಗೂ ಸಾರಿಗೆ ನೌಕರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು, ಆರೋಪಿಯನ್ನು ತಕ್ಷಣ ಬಂಧಿಸಿ, ಸೇವೆಯಿಂದ ವಜಾ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಸಾರ್ವಜನಿಕ ಒತ್ತಡ ಮತ್ತು ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಪೊಲೀಸ್ ಇಲಾಖೆ ಶಿಸ್ತಿನ ಕ್ರಮವಾಗಿ ಮಂಜುನಾಥ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿದೆ. ಈ ಕ್ರಮಕ್ಕೆ ಬೆಂಬಲ ವ್ಯಕ್ತವಾಗಿದ್ದು, “ರೌಡಿಯಂತೆ ವರ್ತಿಸಿದ ಪೊಲೀಸರಿಗೆ ಇದು ಸರಿಯಾದ ಪಾಠ” ಎಂದು ಜನತೆ ಪ್ರತಿಕ್ರಿಯಿಸಿದ್ದಾರೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392

nazeer ahamad

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

14 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

14 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

14 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

14 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

14 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

14 hours ago