ರಾಯಚೂರು: ಮಕ್ಕಳಿಗೆ ಸಂಸ್ಕಾರ, ಶಿಸ್ತಿನ ಪಾಠ ಬೋಧಿಸಬೇಕಾದ ಶಿಕ್ಷಕರೇ ವಿದ್ಯಾಭ್ಯಾಸದ ಪವಿತ್ರತೆಯನ್ನು ಕೆಡಿಸುತ್ತಿರುವ ಉದಾಹರಣೆ ಮತ್ತೊಂದು ಪ್ರಕರಣದಲ್ಲಿ ಬೆಳಕಿಗೆ ಬಂದಿದೆ. ರಾಯಚೂರು ಜಿಲ್ಲೆ ಮಸ್ಕಿ ತಾಲ್ಲೂಕಿನ ಗೋನಾಳ ಗ್ರಾಮದ ಅಂಬಾದೇವಿ ನಗರದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕನೊಬ್ಬ ಮದ್ಯಪಾನ ಮಾಡಿಕೊಂಡು ಶಾಲೆಯ ಬಾಗಿಲಲ್ಲೇ ಮಲಗಿ ನಿದ್ದೆಗೆ ಜಾರಿರುವ ಘಟನೆ ಸಾರ್ವಜನಿಕರಲ್ಲಿ ಆಕ್ರೋಶ ಉಂಟುಮಾಡಿದೆ.
ನಿಂಗಪ್ಪ ಎಂಬುವವರೇ ಈ ಶಾಲೆಯ ಮುಖ್ಯ ಶಿಕ್ಷಕನಾಗಿದ್ದು, ಅವರು ಈ ಹಿಂದೆಯೂ ಹಲವು ಬಾರಿ ಮದ್ಯಪಾನ ಮಾಡಿದ ಸ್ಥಿತಿಯಲ್ಲಿ ಶಾಲೆಗೆ ಬಂದಿದ್ದು, ಸಿಬ್ಬಂದಿ ಹಾಗೂ ಗ್ರಾಮಸ್ಥರ ಅಸಹನೆಗೆ ಕಾರಣರಾಗಿದ್ದಾರೆ ಎನ್ನಲಾಗಿದೆ.
ಘಟನೆ ನಡೆದ ದಿನವೂ ತರಗತಿಗಳು ನಡೆಯುತ್ತಿದ್ದ ವೇಳೆ, ವಿದ್ಯಾರ್ಥಿಗಳು ಮತ್ತು ಪಾಲಕರ ಕಣ್ಣೆದುರೇ ಬಾಗಿಲ ಬಳಿ ಮಲಗಿರುವ ಶಿಕ್ಷಕರ ದೃಶ್ಯ ಮನವರಿಕೆಯನ್ನೇ ಹಾಳು ಮಾಡಿದೆ. ಇದು ಶಾಲಾ ಶಿಸ್ತಿಗೆ ಅಪಮಾನದ ಸಂಗತಿಯಾಗಿದ್ದು, ಮಕ್ಕಳು ಕಂಡು ಬೆಚ್ಚಿ ಬೀಳುವಂತಹ ಸ್ಥಿತಿ ನಿರ್ಮಾಣವಾಗಿದೆ.
ಈ ವಿಚಾರ ತಿಳಿದು ಪೋಷಕರು ಹಾಗೂ ಗ್ರಾಮಸ್ಥರು ಶಾಲೆಗೆ ಭೇಟಿ ನೀಡಿ ನಿಂಗಪ್ಪ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಇವರಂತಹವರು ಶಾಲೆಗೆ ಅವಶ್ಯಕವೇ ಇಲ್ಲ. ಮಕ್ಕಳ ಭವಿಷ್ಯವನ್ನು ಹಾಳುಮಾಡುವ ಮುನ್ನ ಇಂಥವರನ್ನು ಸೇವೆಯಿಂದ ಅಮಾನತುಗೊಳಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…