ರಾಯಚೂರು: ಮಕ್ಕಳಿಗೆ ಸಂಸ್ಕಾರ, ಶಿಸ್ತಿನ ಪಾಠ ಬೋಧಿಸಬೇಕಾದ ಶಿಕ್ಷಕರೇ ವಿದ್ಯಾಭ್ಯಾಸದ ಪವಿತ್ರತೆಯನ್ನು ಕೆಡಿಸುತ್ತಿರುವ ಉದಾಹರಣೆ ಮತ್ತೊಂದು ಪ್ರಕರಣದಲ್ಲಿ ಬೆಳಕಿಗೆ ಬಂದಿದೆ. ರಾಯಚೂರು ಜಿಲ್ಲೆ ಮಸ್ಕಿ ತಾಲ್ಲೂಕಿನ ಗೋನಾಳ ಗ್ರಾಮದ ಅಂಬಾದೇವಿ ನಗರದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕನೊಬ್ಬ ಮದ್ಯಪಾನ ಮಾಡಿಕೊಂಡು ಶಾಲೆಯ ಬಾಗಿಲಲ್ಲೇ ಮಲಗಿ ನಿದ್ದೆಗೆ ಜಾರಿರುವ ಘಟನೆ ಸಾರ್ವಜನಿಕರಲ್ಲಿ ಆಕ್ರೋಶ ಉಂಟುಮಾಡಿದೆ.
ನಿಂಗಪ್ಪ ಎಂಬುವವರೇ ಈ ಶಾಲೆಯ ಮುಖ್ಯ ಶಿಕ್ಷಕನಾಗಿದ್ದು, ಅವರು ಈ ಹಿಂದೆಯೂ ಹಲವು ಬಾರಿ ಮದ್ಯಪಾನ ಮಾಡಿದ ಸ್ಥಿತಿಯಲ್ಲಿ ಶಾಲೆಗೆ ಬಂದಿದ್ದು, ಸಿಬ್ಬಂದಿ ಹಾಗೂ ಗ್ರಾಮಸ್ಥರ ಅಸಹನೆಗೆ ಕಾರಣರಾಗಿದ್ದಾರೆ ಎನ್ನಲಾಗಿದೆ.
ಘಟನೆ ನಡೆದ ದಿನವೂ ತರಗತಿಗಳು ನಡೆಯುತ್ತಿದ್ದ ವೇಳೆ, ವಿದ್ಯಾರ್ಥಿಗಳು ಮತ್ತು ಪಾಲಕರ ಕಣ್ಣೆದುರೇ ಬಾಗಿಲ ಬಳಿ ಮಲಗಿರುವ ಶಿಕ್ಷಕರ ದೃಶ್ಯ ಮನವರಿಕೆಯನ್ನೇ ಹಾಳು ಮಾಡಿದೆ. ಇದು ಶಾಲಾ ಶಿಸ್ತಿಗೆ ಅಪಮಾನದ ಸಂಗತಿಯಾಗಿದ್ದು, ಮಕ್ಕಳು ಕಂಡು ಬೆಚ್ಚಿ ಬೀಳುವಂತಹ ಸ್ಥಿತಿ ನಿರ್ಮಾಣವಾಗಿದೆ.
ಈ ವಿಚಾರ ತಿಳಿದು ಪೋಷಕರು ಹಾಗೂ ಗ್ರಾಮಸ್ಥರು ಶಾಲೆಗೆ ಭೇಟಿ ನೀಡಿ ನಿಂಗಪ್ಪ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಇವರಂತಹವರು ಶಾಲೆಗೆ ಅವಶ್ಯಕವೇ ಇಲ್ಲ. ಮಕ್ಕಳ ಭವಿಷ್ಯವನ್ನು ಹಾಳುಮಾಡುವ ಮುನ್ನ ಇಂಥವರನ್ನು ಸೇವೆಯಿಂದ ಅಮಾನತುಗೊಳಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…