Latest

ಪಟ್ಟಣ ಪಂಚಾಯಿತಿ ಆಡಳಿತ ವ್ಯವಸ್ಥೆ ಕುರಿತು ಪ್ರೌಢಶಾಲಾ ವಿದ್ಯಾರ್ಥಿನಿಯರ ಜೊತೆ ಮುಖ್ಯಾಧಿಕಾರಿ ಚರ್ಚೆ

ಕೊಟ್ಟೂರು:- ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ವಿದ್ಯಾರ್ಥಿನಿಯರು ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಎ. ನಸಾರುಲ್ಲ ರವರ ಜೊತೆ ಸ್ಥಳೀಯ ಪಟ್ಟಣ ಪಂಚಾಯಿತಿ ಆಡಳಿತ ವ್ಯವಸ್ಥೆಯ ಕುರಿತು ಗುರುವಾರ ಚರ್ಚೆ ನಡೆಸಿದರು

ಈ ಸಂದರ್ಭದಲ್ಲಿ ಮಾತನಾಡಿದ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಯವರು ಪಂಚಾಯಿತಿಗಳು ಹೇಗೆ ಉಗಮವಾಯಿತು ಇದರ ಉದ್ದೇಶ ಏನು ಇದರಿಂದ ಏನೆಲ್ಲಾ ಪ್ರಯೋಜನ ಇದರ ಮೂಲ ಇತಿಹಾಸದ ಸಂಪೂರ್ಣ ಮಾಹಿತಿಯನ್ನು ವಿದ್ಯಾರ್ಥಿನಿಯರಿಗೆ ತಿಳಿಸಲಾಯಿತು .

ಪ್ರಸ್ತುತ ಕೊಟ್ಟೂರು ಪಟ್ಟಣವನ್ನು 20 ವಾರ್ಡ್‌ಗಳಾಗಿ ವಿಂಗಡಿಸಲಾಗಿದ್ದು, ಕೊಟ್ಟೂರು ಟೌನ್ ಪಂಚಾಯತ್ 26,289 ಜನಸಂಖ್ಯೆಯನ್ನು ಹೊಂದಿದೆ ಅದರಲ್ಲಿ 13,190 ಪುರುಷರು ಮತ್ತು 13,099 ಮಹಿಳೆಯರು ಇದು 2011 ರ ಜನಗಣತಿಯ ವರದಿಯ ಪ್ರಕಾರವಾಗಿದೆ ಎಂದರು

ಪಟ್ಟಣ ಪಂಚಾಯಿತಿಯ ಆಡಳಿತ ವ್ಯವಸ್ಥೆಯಲ್ಲಿ ಮನೆಗಳಿಗೆ ಸಂಬಂಧಿಸಿದಂತೆ ಖಾತಾ ನಕಲು, ಅಂಗಡಿಗಳಿಗೆ, ಉದ್ಯಮಿದಾರರಿಗೆ , ವಾಣಿಜ್ಯ ಪರವಾನಿಗೆ ನೀಡಲಾಗುವುದು, ಜನನ, ಮರಣ ಪ್ರಮಾಣ ಪತ್ರಗಳು, ಕಟ್ಟಡ ಪರವಾನಿಗೆ ನೀಡುವುದು, ನಳ ಮತ್ತು ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವುದು , ಆಸ್ತಿ ಮಾಲಿಕತ್ವದ ಹಕ್ಕು ಬದಲಾವಣೆ, ಈಗೆ ಹಲವಾರು ಒಟ್ಟು 18 ಸೇವೆಗಳನ್ನು ನೀಡಲಾಗಿದೆ ಹಾಗೂ ವಿದ್ಯಾರ್ಥಿಗಳಿಗೆ ಬುಕ್ ಬಿಲ್ ಎಂಬ ಪ್ರೋತ್ಸಾಹ ಧನವಾಗಿ ಪ್ರತಿ ವರ್ಷ ನೀಡಲಾಗುತ್ತಿದೆ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು

ಕಿರಿಯ ಆರೋಗ್ಯ ನಿರೀಕ್ಷಕರಾದ ಅನುಷಾ ರವರು ಮಾತನಾಡಿ ಪ್ಲಾಸ್ಟಿಕ್ ನಿಂದ ಆಗುವ ಅನಾನುಕೂಲಗಳು ಕುರಿತು ಚರ್ಚಿಸಿದರು
ಜನನ ಮತ್ತು ಮರಣ ಪ್ರಮಾಣ ಪತ್ರಗಳ ಬಗ್ಗೆ ಮಾಹಿತಿ ನೀಡಲಾಯಿತು ಮತ್ತು ಹಸಿ ಕಸ ಮತ್ತು ಒಣ ಕಸ ಪ್ರತಿ ಮನೆಯಲ್ಲಿ ವಿಂಗಡಣೆ ಮಾಡಬೇಕು ಪಟ್ಟಣ ಸ್ವಚ್ಛತೆ ಹೊಂದಲು ಪಟ್ಟಣ ಪಂಚಾಯಿತಿಯ ಸಿಬ್ಬಂದಿ ಜೊತೆಗೆ ಸಾರ್ವಜನಿಕರು ಸಹಕರಿಸುವಂತೆ ನಿಮ್ಮ ನಿಮ್ಮ ಮನೆಯಲ್ಲಿ ವಿದ್ಯಾರ್ಥಿಗಳು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ನಂತರ ವಿದ್ಯಾರ್ಥಿನಿಯರು ಮುಖ್ಯಧಿಕಾರಿಗಳ ಜೊತೆ ಪಟ್ಟಣ ಪಂಚಾಯತ್ ಆಡಳಿತದ ವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಕೇಳುವುದರ ಮೂಲಕ ಪರಿಹಾರ ಕಂಡುಕೊಂಡರು ಹಾಗೂ ವಿದ್ಯಾರ್ಥಿನಿಯರು ಮುಖ್ಯಧಿಕಾರಿಗಳಿಗೆ ಶಾಲೆಯ ಸಮಸ್ಯೆ ಕುರಿತು ಪರಿಹರಿಸುವಂತೆ ಮನವಿ ಪತ್ರ ಸಲ್ಲಿಸಲಾಯಿತು

ಈ ಸಂದರ್ಭದಲ್ಲಿ ಸದಸ್ಯೆ ವೀಣಾ ವಿವೇಕಾನಂದ, ಶಿಕ್ಷಕ ಹೆಚ್. ಮಹಾಂತೇಶ್, ಜಿ. ಕೊಟ್ರಮ್ಮ,ಅನಿತಾ ಮತ್ತು ವಿದ್ಯಾರ್ಥಿನಿಯರು ಇದ್ದರು.

ವರದಿ:- ಮಣಿಕಂಠ. ಬಿ

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago