Latest

ಪಟ್ಟಣ ಪಂಚಾಯಿತಿ ಆಡಳಿತ ವ್ಯವಸ್ಥೆ ಕುರಿತು ಪ್ರೌಢಶಾಲಾ ವಿದ್ಯಾರ್ಥಿನಿಯರ ಜೊತೆ ಮುಖ್ಯಾಧಿಕಾರಿ ಚರ್ಚೆ

ಕೊಟ್ಟೂರು:- ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ವಿದ್ಯಾರ್ಥಿನಿಯರು ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಎ. ನಸಾರುಲ್ಲ ರವರ ಜೊತೆ ಸ್ಥಳೀಯ ಪಟ್ಟಣ ಪಂಚಾಯಿತಿ ಆಡಳಿತ ವ್ಯವಸ್ಥೆಯ ಕುರಿತು ಗುರುವಾರ ಚರ್ಚೆ ನಡೆಸಿದರು

ಈ ಸಂದರ್ಭದಲ್ಲಿ ಮಾತನಾಡಿದ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಯವರು ಪಂಚಾಯಿತಿಗಳು ಹೇಗೆ ಉಗಮವಾಯಿತು ಇದರ ಉದ್ದೇಶ ಏನು ಇದರಿಂದ ಏನೆಲ್ಲಾ ಪ್ರಯೋಜನ ಇದರ ಮೂಲ ಇತಿಹಾಸದ ಸಂಪೂರ್ಣ ಮಾಹಿತಿಯನ್ನು ವಿದ್ಯಾರ್ಥಿನಿಯರಿಗೆ ತಿಳಿಸಲಾಯಿತು .

ಪ್ರಸ್ತುತ ಕೊಟ್ಟೂರು ಪಟ್ಟಣವನ್ನು 20 ವಾರ್ಡ್‌ಗಳಾಗಿ ವಿಂಗಡಿಸಲಾಗಿದ್ದು, ಕೊಟ್ಟೂರು ಟೌನ್ ಪಂಚಾಯತ್ 26,289 ಜನಸಂಖ್ಯೆಯನ್ನು ಹೊಂದಿದೆ ಅದರಲ್ಲಿ 13,190 ಪುರುಷರು ಮತ್ತು 13,099 ಮಹಿಳೆಯರು ಇದು 2011 ರ ಜನಗಣತಿಯ ವರದಿಯ ಪ್ರಕಾರವಾಗಿದೆ ಎಂದರು

ಪಟ್ಟಣ ಪಂಚಾಯಿತಿಯ ಆಡಳಿತ ವ್ಯವಸ್ಥೆಯಲ್ಲಿ ಮನೆಗಳಿಗೆ ಸಂಬಂಧಿಸಿದಂತೆ ಖಾತಾ ನಕಲು, ಅಂಗಡಿಗಳಿಗೆ, ಉದ್ಯಮಿದಾರರಿಗೆ , ವಾಣಿಜ್ಯ ಪರವಾನಿಗೆ ನೀಡಲಾಗುವುದು, ಜನನ, ಮರಣ ಪ್ರಮಾಣ ಪತ್ರಗಳು, ಕಟ್ಟಡ ಪರವಾನಿಗೆ ನೀಡುವುದು, ನಳ ಮತ್ತು ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವುದು , ಆಸ್ತಿ ಮಾಲಿಕತ್ವದ ಹಕ್ಕು ಬದಲಾವಣೆ, ಈಗೆ ಹಲವಾರು ಒಟ್ಟು 18 ಸೇವೆಗಳನ್ನು ನೀಡಲಾಗಿದೆ ಹಾಗೂ ವಿದ್ಯಾರ್ಥಿಗಳಿಗೆ ಬುಕ್ ಬಿಲ್ ಎಂಬ ಪ್ರೋತ್ಸಾಹ ಧನವಾಗಿ ಪ್ರತಿ ವರ್ಷ ನೀಡಲಾಗುತ್ತಿದೆ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು

ಕಿರಿಯ ಆರೋಗ್ಯ ನಿರೀಕ್ಷಕರಾದ ಅನುಷಾ ರವರು ಮಾತನಾಡಿ ಪ್ಲಾಸ್ಟಿಕ್ ನಿಂದ ಆಗುವ ಅನಾನುಕೂಲಗಳು ಕುರಿತು ಚರ್ಚಿಸಿದರು
ಜನನ ಮತ್ತು ಮರಣ ಪ್ರಮಾಣ ಪತ್ರಗಳ ಬಗ್ಗೆ ಮಾಹಿತಿ ನೀಡಲಾಯಿತು ಮತ್ತು ಹಸಿ ಕಸ ಮತ್ತು ಒಣ ಕಸ ಪ್ರತಿ ಮನೆಯಲ್ಲಿ ವಿಂಗಡಣೆ ಮಾಡಬೇಕು ಪಟ್ಟಣ ಸ್ವಚ್ಛತೆ ಹೊಂದಲು ಪಟ್ಟಣ ಪಂಚಾಯಿತಿಯ ಸಿಬ್ಬಂದಿ ಜೊತೆಗೆ ಸಾರ್ವಜನಿಕರು ಸಹಕರಿಸುವಂತೆ ನಿಮ್ಮ ನಿಮ್ಮ ಮನೆಯಲ್ಲಿ ವಿದ್ಯಾರ್ಥಿಗಳು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ನಂತರ ವಿದ್ಯಾರ್ಥಿನಿಯರು ಮುಖ್ಯಧಿಕಾರಿಗಳ ಜೊತೆ ಪಟ್ಟಣ ಪಂಚಾಯತ್ ಆಡಳಿತದ ವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಕೇಳುವುದರ ಮೂಲಕ ಪರಿಹಾರ ಕಂಡುಕೊಂಡರು ಹಾಗೂ ವಿದ್ಯಾರ್ಥಿನಿಯರು ಮುಖ್ಯಧಿಕಾರಿಗಳಿಗೆ ಶಾಲೆಯ ಸಮಸ್ಯೆ ಕುರಿತು ಪರಿಹರಿಸುವಂತೆ ಮನವಿ ಪತ್ರ ಸಲ್ಲಿಸಲಾಯಿತು

ಈ ಸಂದರ್ಭದಲ್ಲಿ ಸದಸ್ಯೆ ವೀಣಾ ವಿವೇಕಾನಂದ, ಶಿಕ್ಷಕ ಹೆಚ್. ಮಹಾಂತೇಶ್, ಜಿ. ಕೊಟ್ರಮ್ಮ,ಅನಿತಾ ಮತ್ತು ವಿದ್ಯಾರ್ಥಿನಿಯರು ಇದ್ದರು.

ವರದಿ:- ಮಣಿಕಂಠ. ಬಿ

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago