ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ ಹರಿದಾಡುತ್ತಿದ್ದು, ಪೋಷಕರು ಹಾಗೂ ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವೈರಲ್ ಆಗಿರುವ ದೃಶ್ಯದಲ್ಲಿ, ಶಾಲೆಯ ಮುಖ್ಯೋಪಾಧ್ಯಾಯಿನಿ ಕಲೈವಾಣಿ ತರಗತಿ ಕೊಠಡಿಯಲ್ಲಿ ಮೇಜಿನ ಮೇಲೆ ಮಲಗಿಕೊಂಡು, ವಿದ್ಯಾರ್ಥಿಗಳಿಂದ ತನ್ನ ಕಾಲುಗಳನ್ನು ಒತ್ತಿಸುತ್ತಿರುವುದು ಸ್ಪಷ್ಟವಾಗಿ ಕಾಣಿಸಿದೆ. ವಿದ್ಯಾಭ್ಯಾಸಕ್ಕಾಗಿ ಶ್ರಮಿಸುತ್ತಿರುವ ಬಡ ಮಕ್ಕಳು ಈ ರೀತಿಯಾಗಿ ಶಿಕ್ಷಕರ ಸೇವೆಗೆ ಬಳಸಲ್ಪಟ್ಟಿದ್ದಾರೆ ಎಂಬ ಸಂಗತಿ ಪೋಷಕರಲ್ಲಿ ಕೋಪ ಹುಟ್ಟಿಸಿದೆ.
ಈ ಶಾಲೆಯಲ್ಲಿ ಸದ್ಯಕ್ಕೆ ಕೇವಲ 30 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅವರಿಗೆ ಪಾಠ ಕಲಿಸುವ ಬದಲು, ತಮ್ಮ ವೈಯಕ್ತಿಕ ಅಗತ್ಯಗಳನ್ನು ಪೂರೈಸಲು ಬಳಸಿಕೊಂಡಿದ್ದಾರೆ ಎಂಬ ಆರೋಪಗಳು ಕಲೈವಾಣಿ ವಿರುದ್ಧ ಕೇಳಿ ಬಂದಿವೆ. “ಶಿಕ್ಷಕರು ಆದರ್ಶವಾಗಬೇಕು, ಇಂತಹ ವರ್ತನೆ ಅಸಹ್ಯ” ಎಂದು ಟೀಕೆಗಳ ಮಳೆ ಸುರಿಯುತ್ತಿದೆ.
ಘಟನೆಯ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ವರದಿ ಕೋರಿರುವುದಾಗಿ ಮೂಲಗಳು ತಿಳಿಸಿವೆ. ಸ್ಥಳೀಯ ಗ್ರಾಮಸ್ಥರು ಕೂಡ ಮುಖ್ಯೋಪಾಧ್ಯಾಯಿನಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತಿದ್ದಾರೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…