ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ ಹರಿದಾಡುತ್ತಿದ್ದು, ಪೋಷಕರು ಹಾಗೂ ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವೈರಲ್ ಆಗಿರುವ ದೃಶ್ಯದಲ್ಲಿ, ಶಾಲೆಯ ಮುಖ್ಯೋಪಾಧ್ಯಾಯಿನಿ ಕಲೈವಾಣಿ ತರಗತಿ ಕೊಠಡಿಯಲ್ಲಿ ಮೇಜಿನ ಮೇಲೆ ಮಲಗಿಕೊಂಡು, ವಿದ್ಯಾರ್ಥಿಗಳಿಂದ ತನ್ನ ಕಾಲುಗಳನ್ನು ಒತ್ತಿಸುತ್ತಿರುವುದು ಸ್ಪಷ್ಟವಾಗಿ ಕಾಣಿಸಿದೆ. ವಿದ್ಯಾಭ್ಯಾಸಕ್ಕಾಗಿ ಶ್ರಮಿಸುತ್ತಿರುವ ಬಡ ಮಕ್ಕಳು ಈ ರೀತಿಯಾಗಿ ಶಿಕ್ಷಕರ ಸೇವೆಗೆ ಬಳಸಲ್ಪಟ್ಟಿದ್ದಾರೆ ಎಂಬ ಸಂಗತಿ ಪೋಷಕರಲ್ಲಿ ಕೋಪ ಹುಟ್ಟಿಸಿದೆ.
ಈ ಶಾಲೆಯಲ್ಲಿ ಸದ್ಯಕ್ಕೆ ಕೇವಲ 30 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅವರಿಗೆ ಪಾಠ ಕಲಿಸುವ ಬದಲು, ತಮ್ಮ ವೈಯಕ್ತಿಕ ಅಗತ್ಯಗಳನ್ನು ಪೂರೈಸಲು ಬಳಸಿಕೊಂಡಿದ್ದಾರೆ ಎಂಬ ಆರೋಪಗಳು ಕಲೈವಾಣಿ ವಿರುದ್ಧ ಕೇಳಿ ಬಂದಿವೆ. “ಶಿಕ್ಷಕರು ಆದರ್ಶವಾಗಬೇಕು, ಇಂತಹ ವರ್ತನೆ ಅಸಹ್ಯ” ಎಂದು ಟೀಕೆಗಳ ಮಳೆ ಸುರಿಯುತ್ತಿದೆ.
ಘಟನೆಯ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ವರದಿ ಕೋರಿರುವುದಾಗಿ ಮೂಲಗಳು ತಿಳಿಸಿವೆ. ಸ್ಥಳೀಯ ಗ್ರಾಮಸ್ಥರು ಕೂಡ ಮುಖ್ಯೋಪಾಧ್ಯಾಯಿನಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…