Categories: Latest

ಅಖಾಡಕ್ಕಿಳಿದ ಆರೋಗ್ಯ ಇಲಾಖೆ: ಭಟ್ಕಳದಲ್ಲಿ 3 ಕ್ಲಿನಿಕ್ ಸೀಜ್!

ಭಟ್ಕಳ: ಸಾರ್ವಜನಿಕರ ಆರೋಗ್ಯ ರಕ್ಷಣೆಯನ್ನು ಪ್ರಮುಖವಾಗಿ ಪರಿಗಣಿಸಿರುವ ಜಿಲ್ಲಾ ಆರೋಗ್ಯ ಇಲಾಖೆ, ಭಟ್ಕಳ ಪಟ್ಟಣದಲ್ಲಿ ನಕಲಿ ಕ್ಲಿನಿಕ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಸೋಮವಾರ ಟಿಎಚ್‌ಒ ಡಾ. ಸನಾ ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ನಿಯಮಬಾಹಿರವಾಗಿ ಕಾರ್ಯನಿರ್ವಹಿಸುತ್ತಿದ್ದ ಮೂರು ಕ್ಲಿನಿಕ್‌ಗಳನ್ನು ಸೀಲ್ ಮಾಡಲಾಗಿದೆ.

ಜಿಲ್ಲಾ ಆರೋಗ್ಯ ಇಲಾಖೆಯ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ನೋಡಲ್ ಅಧಿಕಾರಿ, ಆಯುಷ್ ಅಧಿಕಾರಿ, ನಗರ ಠಾಣೆ ಪೊಲೀಸರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು. ತಂಡವು ಭಟ್ಕಳ ಪಟ್ಟಣದ ನಾಲ್ಕು ಕ್ಲಿನಿಕ್‌ಗಳು ಹಾಗೂ ಶಿರಾಲಿಯ ಒಂದು ಕ್ಲಿನಿಕ್‌ನಲ್ಲಿ ಪರಿಶೀಲನೆ ನಡೆಸಿತು.

ಪರಿಶೀಲನೆ ವೇಳೆ ವೈದ್ಯರು ಹೊಂದಿರುವ ಎಂ.ಬಿ.ಬಿ.ಎಸ್., ಬಿ.ಎ.ಎಂ.ಎಸ್., ಬಿ.ಎಚ್‌.ಎಂ.ಎಸ್. ಹಾಗೂ ಯುನಾನಿ ಪದವಿಗಳ ಪ್ರಮಾಣಪತ್ರಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಯಿತು. ಈ ವೇಳೆ ಅಗತ್ಯ ಮಾನ್ಯತೆ ಇಲ್ಲದೆ ಕಾರ್ಯನಿರ್ವಹಿಸುತ್ತಿದ್ದ ಮೂರು ಕ್ಲಿನಿಕ್‌ಗಳನ್ನು ತಕ್ಷಣ ಸೀಲ್ ಮಾಡಲಾಗಿದೆ.

ಮದಿನಾ ಕಾಲನಿಯಲ್ಲಿರುವ ಒಂದು ಕ್ಲಿನಿಕ್ ಮಾಲೀಕರು ಸ್ವಯಂಪ್ರೇರಿತವಾಗಿ ಕ್ಲಿನಿಕ್ ಮುಚ್ಚಿದ್ದು, ಅವರ ಬಾಗಿಲಿಗೆ ಆರೋಗ್ಯ ಇಲಾಖೆ ನೋಟಿಸ್ ಅಂಟಿಸಿದೆ.

ಈ ಕುರಿತು ವರದಿಯನ್ನು ಜಿಲ್ಲಾ ಆರೋಗ್ಯ ಇಲಾಖೆಗೆ ರವಾನಿಸಲಾಗಿದ್ದು, ಸಮಗ್ರ ತನಿಖೆಯ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಟಿಎಚ್‌ಒ ಡಾ. ಸನಾ ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಪಟ್ಟಣ ಹಾಗೂ ತಾಲೂಕಿನ ವಿವಿಧ ಭಾಗಗಳಲ್ಲಿ ಇಂತಹ ದಾಳಿ ಮತ್ತು ಪರಿಶೀಲನೆ ಮುಂದುವರಿಯಲಿದ್ದು, ಸಾರ್ವಜನಿಕರು ಅನಧಿಕೃತ ವೈದ್ಯರಿಂದ ಚಿಕಿತ್ಸೆ ಪಡೆಯಬಾರದು ಎಂದು ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಸರ್ಕಾರದಿಂದ ಮಾನ್ಯತೆ ಪಡೆದ ನೋಂದಾಯಿತ ವೈದ್ಯರನ್ನು ಮಾತ್ರ ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.

ಭ್ರಷ್ಟರ ಬೇಟೆ

Recent Posts

ಕ್ರಿಕೆಟ್‌ನ ಕರಾಳ ಮುಖ ಬಯಲು? ಆಯ್ಕೆಗೆ ಲೈಂಗಿಕ ಆಮಿಷ, ದುಬಾರಿ ಗಿಫ್ಟ್ ಆರೋಪ!

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಒಂದು ಪಾಡ್‌ಕಾಸ್ಟ್ ವಿಡಿಯೋ ಇದೀಗ ಭಾರತೀಯ ಕ್ರಿಕೆಟ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮಾಜಿ…

5 hours ago

ಸುಜಾತ ಭೂಮಿ ವಿವಾದಕ್ಕೆ ಹೊಸ ತಿರುವು: ರೈತರ ಪರ ನಿಂತ ಹರತಾಳು ಹಾಲಪ್ಪ, ಡಿಎಫ್‌ಒಗೆ ಮನವಿ

ಸಾಗರ ತಾಲೂಕಿನ ಅಡ್ಡೇರಿ ಗ್ರಾಮದ ರೈತ ಮಹಿಳೆ ಸುಜಾತ ಅವರ ಭೂಮಿ ವಿವಾದ ಇದೀಗ ಹೊಸ ಹಂತ ತಲುಪಿದ್ದು, ಮಾಜಿ…

1 day ago

ಕಚೇರಿಯನ್ನೇ ಮದ್ಯಪಾನದ ಅಡ್ಡೆಯನ್ನಾಗಿಸಿದ ಅಧಿಕಾರಿಗಳು; ಎಇಇ ಸೇರಿ ಮೂವರು ಸಸ್ಪೆಂಡ್

ರಾಯಚೂರಿನಲ್ಲಿ ಸರ್ಕಾರಿ ಕಚೇರಿಯಲ್ಲೇ ಗುಂಡು-ತುಂಡಿನ ಪಾರ್ಟಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಮೂವರು ಸಿಬ್ಬಂದಿಯನ್ನು…

1 day ago

ಕಳ್ಳತನ ನಡೆದ 8 ಗಂಟೆಯೊಳಗೆ ಇಬ್ಬರು ಆರೋಪಿಗಳ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನ-ನಗದು ವಶ

ಭಟ್ಕಳ: ಮನೆ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ ಹಾಗೂ ನಗದು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಕೇವಲ…

2 days ago

ಕಾರವಾರದಲ್ಲಿ 100 ಕೋಟಿ ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸಂಪುಟ ಅಸ್ತು!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜನತೆಯ ಬಹುದಿನಗಳ ಕನಸಿಗೆ ಕೊನೆಗೂ ಜಯ ಸಿಕ್ಕಿದೆ. ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ…

2 days ago

3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಅರೆಸ್ಟ್!

ಹಳಿಯಾಳ: ಸುಲಿಗೆ ಹಾಗೂ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಕಳೆದ ಮೂರು ವರ್ಷಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್‌ನ್ನು…

2 days ago