Latest

ಮುಂಬೈನಲ್ಲಿ ಹೃದಯವಿದ್ರಾವಕ ಘಟನೆ: ಕ್ಯಾನ್ಸರ್ ಪೀಡಿತ ಅಜ್ಜಿಯನ್ನು ಕಸದ ರಾಶಿಗೆ ಎಸೆದು ಹೋದ ಮೊಮ್ಮಗ..!

ಮುಂಬೈನಲ್ಲಿ ಮಾನವೀಯತೆ ಕಳೆಯುತ್ತಿರುವ ಕ್ರೂರ ಘಟನೆ ಬೆಳಕಿಗೆ ಬಂದಿದೆ. ಚರ್ಮದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ 60 ವರ್ಷದ ಹಿರಿಯ ನಾಗರಿಕೆಯನ್ನು ತನ್ನದೇ ಮೊಮ್ಮಗನೆಂದು ಶಂಕಿಸಲಾದ ವ್ಯಕ್ತಿ ಕಸದ ರಾಶಿಗೆ ಎಸೆದುಹೋಗಿದ್ದಾನೆ.

ಶನಿವಾರ ಮುಂಬೈ ನಗರದ ಆರೆ ಕಾಲೋನಿಯ ರಸ್ತೆಯ ಪಕ್ಕದ ಕಸದ ರಾಶಿಯ ಬಳಿ ದುರಸ್ಥಿತಿಯಲ್ಲಿದ್ದ ಮಹಿಳೆಯನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಯಶೋದಾ ಗಾಯಕ್‌ವಾಡ್ ಎಂದು ಗುರುತಿಸಲ್ಪಟ್ಟ ಈ ಮಹಿಳೆ ಶರೀರದ ಸ್ಥಿತಿ ಅತ್ಯಂತ ನಾಜೂಕಾಗಿದ್ದು, ಅವರು ಬಹುತೇಕ ಮಾತನಾಡಲಾಗದಷ್ಟು ದುರ್ಬಲರಾಗಿದ್ದಾರಂತೆ.

ಪೊಲೀಸರ ಪ್ರಾಥಮಿಕ ವಿಚಾರಣೆ ವೇಳೆ, ಯಶೋದಾ ತಮ್ಮ ಮೊಮ್ಮಗನೇ ತಮ್ಮನ್ನು ರಸ್ತೆಯ ಪಕ್ಕದ ಕಸದ ರಾಶಿಗೆ ಎಸೆದುಹೋಗಿದ್ದಾನೆ ಎಂದು ತಿಳಿಸಿದ್ದಾಳೆ. ತಕ್ಷಣವೇ ವೈದ್ಯಕೀಯ ಸಹಾಯದ ಅವಶ್ಯಕತೆ ಇದ್ದರೂ, ಹಲವಾರು ಆಸ್ಪತ್ರೆಗಳು ಆಕೆಯ ಸ್ಥಿತಿ ಗಮನಿಸಿ ದಾಖಲಾತಿಗೆ ನಿರಾಕರಿಸಿವೆ. ಕೊನೆಗೆ ಕೂಪರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಯಶೋದಾ ಗಾಯಕ್‌ವಾಡ್ ಅವರಿಂದ ಮಲಾಡ್ ಹಾಗೂ ಕಾಂದಿವಲಿ ಪ್ರದೇಶಗಳಿಗೆ ಸಂಬಂಧಿಸಿದ ಎರಡು ವಿಳಾಸಗಳನ್ನು ಪೊಲೀಸರು ಪಡೆದುಕೊಂಡಿದ್ದಾರೆ. ಇದೀಗ ಪೊಲೀಸರು ಆ ವಿಳಾಸದ ಮೂಲಕ ಕುಟುಂಬಸ್ಥರನ್ನು ಪತ್ತೆಹಚ್ಚಲು ಕ್ರಮ ಕೈಗೊಂಡಿದ್ದು, ಯಶೋದಾ ಅವರ ಚಿತ್ರವನ್ನು ವಿವಿಧ ಪೊಲೀಸ್ ಠಾಣೆಗಳಿಗೆ ಹಂಚಿ, ಸಂಬಂಧಿಕರ ಜಾಡು ಹುಡುಕುತ್ತಿದ್ದಾರೆ.

ಈ ಮಧ್ಯೆ, ಹಿರಿಯ ನಾಗರಿಕರ ಮೇಲಿನ ಈ ರೀತಿಯ ಅಮಾನವೀಯ ವರ್ತನೆಗೆ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ. ಘಟನೆ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದ್ದು, ಆರೋಪಿಗೆ ಶೀಘ್ರದಲ್ಲೇ ಕಾನೂನಿನ ಕಡಿವಾಣ ಬೀಳುವ ಸಾಧ್ಯತೆ ಇದೆ.

nazeer ahamad

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

11 hours ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

11 hours ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

11 hours ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

11 hours ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

1 day ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

1 day ago