Latest

ಮುಂಬೈನಲ್ಲಿ ಹೃದಯವಿದ್ರಾವಕ ಘಟನೆ: ಕ್ಯಾನ್ಸರ್ ಪೀಡಿತ ಅಜ್ಜಿಯನ್ನು ಕಸದ ರಾಶಿಗೆ ಎಸೆದು ಹೋದ ಮೊಮ್ಮಗ..!

ಮುಂಬೈನಲ್ಲಿ ಮಾನವೀಯತೆ ಕಳೆಯುತ್ತಿರುವ ಕ್ರೂರ ಘಟನೆ ಬೆಳಕಿಗೆ ಬಂದಿದೆ. ಚರ್ಮದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ 60 ವರ್ಷದ ಹಿರಿಯ ನಾಗರಿಕೆಯನ್ನು ತನ್ನದೇ ಮೊಮ್ಮಗನೆಂದು ಶಂಕಿಸಲಾದ ವ್ಯಕ್ತಿ ಕಸದ ರಾಶಿಗೆ ಎಸೆದುಹೋಗಿದ್ದಾನೆ.

ಶನಿವಾರ ಮುಂಬೈ ನಗರದ ಆರೆ ಕಾಲೋನಿಯ ರಸ್ತೆಯ ಪಕ್ಕದ ಕಸದ ರಾಶಿಯ ಬಳಿ ದುರಸ್ಥಿತಿಯಲ್ಲಿದ್ದ ಮಹಿಳೆಯನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಯಶೋದಾ ಗಾಯಕ್‌ವಾಡ್ ಎಂದು ಗುರುತಿಸಲ್ಪಟ್ಟ ಈ ಮಹಿಳೆ ಶರೀರದ ಸ್ಥಿತಿ ಅತ್ಯಂತ ನಾಜೂಕಾಗಿದ್ದು, ಅವರು ಬಹುತೇಕ ಮಾತನಾಡಲಾಗದಷ್ಟು ದುರ್ಬಲರಾಗಿದ್ದಾರಂತೆ.

ಪೊಲೀಸರ ಪ್ರಾಥಮಿಕ ವಿಚಾರಣೆ ವೇಳೆ, ಯಶೋದಾ ತಮ್ಮ ಮೊಮ್ಮಗನೇ ತಮ್ಮನ್ನು ರಸ್ತೆಯ ಪಕ್ಕದ ಕಸದ ರಾಶಿಗೆ ಎಸೆದುಹೋಗಿದ್ದಾನೆ ಎಂದು ತಿಳಿಸಿದ್ದಾಳೆ. ತಕ್ಷಣವೇ ವೈದ್ಯಕೀಯ ಸಹಾಯದ ಅವಶ್ಯಕತೆ ಇದ್ದರೂ, ಹಲವಾರು ಆಸ್ಪತ್ರೆಗಳು ಆಕೆಯ ಸ್ಥಿತಿ ಗಮನಿಸಿ ದಾಖಲಾತಿಗೆ ನಿರಾಕರಿಸಿವೆ. ಕೊನೆಗೆ ಕೂಪರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಯಶೋದಾ ಗಾಯಕ್‌ವಾಡ್ ಅವರಿಂದ ಮಲಾಡ್ ಹಾಗೂ ಕಾಂದಿವಲಿ ಪ್ರದೇಶಗಳಿಗೆ ಸಂಬಂಧಿಸಿದ ಎರಡು ವಿಳಾಸಗಳನ್ನು ಪೊಲೀಸರು ಪಡೆದುಕೊಂಡಿದ್ದಾರೆ. ಇದೀಗ ಪೊಲೀಸರು ಆ ವಿಳಾಸದ ಮೂಲಕ ಕುಟುಂಬಸ್ಥರನ್ನು ಪತ್ತೆಹಚ್ಚಲು ಕ್ರಮ ಕೈಗೊಂಡಿದ್ದು, ಯಶೋದಾ ಅವರ ಚಿತ್ರವನ್ನು ವಿವಿಧ ಪೊಲೀಸ್ ಠಾಣೆಗಳಿಗೆ ಹಂಚಿ, ಸಂಬಂಧಿಕರ ಜಾಡು ಹುಡುಕುತ್ತಿದ್ದಾರೆ.

ಈ ಮಧ್ಯೆ, ಹಿರಿಯ ನಾಗರಿಕರ ಮೇಲಿನ ಈ ರೀತಿಯ ಅಮಾನವೀಯ ವರ್ತನೆಗೆ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ. ಘಟನೆ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದ್ದು, ಆರೋಪಿಗೆ ಶೀಘ್ರದಲ್ಲೇ ಕಾನೂನಿನ ಕಡಿವಾಣ ಬೀಳುವ ಸಾಧ್ಯತೆ ಇದೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

15 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

21 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

21 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago