Categories: Latest

ಅಕ್ರಮ ಸಾಗಾಟದಿಂದ ಪಾರಾದ 7 ಶ್ವಾನಗಳು 17 ಕಿ.ಮೀ. ನಡೆದು ಮನೆ ಸೇರಿ ಮನಸೂರೆಗೈದ ಕಥೆ

ಈಶಾನ್ಯ ಚೀನಾದಲ್ಲಿ ಹೃದಯಸ್ಪರ್ಶಿ ಘಟನೆ ಒಂದಾಗಿದೆ. ಅಕ್ರಮವಾಗಿ ಸಾಗಿಸಲಾಗುತ್ತಿದ್ದ 7 ಶ್ವಾನಗಳು ವಾಹನದಿಂದ ತಪ್ಪಿಸಿಕೊಂಡು, ಸುಮಾರು 17 ಕಿಲೋಮೀಟರ್‌ ದೂರವನ್ನು ಒಟ್ಟಾಗಿ ಪ್ರಯಾಣಿಸಿ ತಮ್ಮ ಮನೆ ಸೇರಿವೆ.

ಶ್ವಾನಗಳನ್ನು ಕದ್ದು ಸಾಗಿಸುತ್ತಿದ್ದ ವಾಹನದಿಂದ ತಪ್ಪಿಸಿಕೊಂಡ ಈ ನಾಯಿಗಳು, ಪರಸ್ಪರ ಬೆಂಬಲವಾಗಿ ಒಂದಾಗಿ ಸಾಗಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಸ್ತೆ ಬದಿಯಲ್ಲಿ ಶಿಸ್ತಿನಿಂದ, ಒಗ್ಗಟ್ಟಿನಿಂದ ಸಾಗುತ್ತಿರುವ ಈ ಗುಂಪನ್ನು ಸ್ಥಳೀಯರೊಬ್ಬರು ವಿಡಿಯೋದಲ್ಲಿ ಸೆರೆಹಿಡಿದಿದ್ದಾರೆ.

ವಿಡಿಯೋದಲ್ಲಿ ‘ಕಾರ್ಗಿ’ ತಳಿಯ ಶ್ವಾನವು ಗುಂಪಿನ ಮುನ್ನಡೆ ವಹಿಸಿಕೊಂಡಿದ್ದು, ಇತರ ನಾಯಿಗಳನ್ನು ದಾರಿತೋರಿಸುತ್ತಿರುವುದು ಕಾಣಿಸುತ್ತದೆ. ಜೊತೆಗೆ, ‘ಗೋಲ್ಡನ್ ರಿಟ್ರೀವರ್’ ಶ್ವಾನವು ಕಾವಲುಗಾರನಂತೆ ವರ್ತಿಸುತ್ತಿದೆ. ಗಾಯಗೊಂಡಿದ್ದ ‘ಜರ್ಮನ್ ಶೆಫರ್ಡ್’ ಶ್ವಾನವು ಕುಂಟುತ್ತ ಸಾಗುತ್ತಿದ್ದರೂ, ಅದನ್ನು ಒಂಟಿಯಾಗಲು ಬಿಡದೇ, ಇತರ ನಾಯಿಗಳು ಅದರ ವೇಗಕ್ಕೆ ತಕ್ಕಂತೆ ಸಾಗಿರುವುದು ಮನಸೂರೆಗೈಯುವಂತಿದೆ.

ಈ ವಿಡಿಯೋ ವೈರಲ್ ಆದ ಬಳಿಕ ಪ್ರಾಣಿ ದಯಾ ಸಂಘಗಳು ತಕ್ಷಣ ಕಾರ್ಯಪ್ರವೃತ್ತಗೊಂಡು, ಎಲ್ಲಾ ಶ್ವಾನಗಳನ್ನು ಸುರಕ್ಷಿತವಾಗಿ ಅವುಗಳ ಮಾಲೀಕರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿವೆ.

ಭ್ರಷ್ಟರ ಬೇಟೆ

Recent Posts

ಅಂಕೋಲಾದಲ್ಲಿ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯಕ ಮೇಲೆ ಕೊಲೆ ಯತ್ನ

ಅಂಕೋಲಾ: ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ ಅವರ ಮೇಲೆ ಇಂದು…

11 minutes ago

ಗಂಡನ ಬೆಂಬಲದಿಂದ ಸರ್ಕಾರಿ ಉದ್ಯೋಗ ಪಡೆದ ಪತ್ನಿ: ದೂರವಾಗಿದ್ದರಿಂದ ಮನನೊಂದ ಪತಿ ಆತ್ಮಹತ್ಯೆ

ಶಿಕ್ಷಣಕ್ಕೆ ಬೆಂಬಲ ನೀಡಿ ಪತ್ನಿಗೆ ಸರ್ಕಾರಿ ಉದ್ಯೋಗ ಸಿಗುವಂತೆ ಮಾಡಿದ ಗಂಡನೊಬ್ಬ, ನಂತರ ಪತ್ನಿಯ ನಿರ್ಲಕ್ಷ್ಯ ಮತ್ತು ಕಿರುಕುಳದಿಂದ ಮನನೊಂದು…

8 hours ago

ಮಲೆನಾಡಿನಲ್ಲಿ ನಿಗೂಢವಾಗಿ ಹಾರಾಡಿದ್ದ ವಿಮಾನದ ರಹಸ್ಯ ಬಯಲು..!

ಚಿಕ್ಕಮಗಳೂರು ಜಿಲ್ಲೆಯ ಕಳಸದಿಂದ ಬಾಳೆಹೊನ್ನೂರುವರೆಗೆ ಭದ್ರಾ ನದಿ ಪ್ರದೇಶದಲ್ಲಿ ಇತ್ತೀಚೆಗೆ ಕಡಿಮೆ ಎತ್ತರದಲ್ಲಿ ಹಾರಾಡುತ್ತಿದ್ದ ನಿಗೂಢ ವಿಮಾನ ಸಾರ್ವಜನಿಕರಲ್ಲಿ ಭೀತಿ…

8 hours ago

ಧಾರವಾಡ ಅರಣ್ಯದಲ್ಲಿ ದಾರುಣ ಘಟನೆ: ಕಾರಿನಲ್ಲೇ ಸುಟ್ಟ ಸ್ಥಿತಿಯಲ್ಲಿ ಮಾಜಿ ಶಾಸಕನ ಪುತ್ರ

ಧಾರವಾಡ ಜಿಲ್ಲೆಯ ರಾಮಾಪುರ ಅರಣ್ಯ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ…

19 hours ago

ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ: ಶಿಕ್ಷಣ, ಆರೋಗ್ಯ, ಪೊಲೀಸ್ ಇಲಾಖೆಗಳಲ್ಲೇ ಹೆಚ್ಚಿನ ಕೊರತೆ

ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಹತ್ವದ ಮಾಹಿತಿ ಬಹಿರಂಗವಾಗಿದೆ. ವಿಧಾನಸಭೆಯಲ್ಲಿ ಸಂಡೂರು ಕ್ಷೇತ್ರದ ಶಾಸಕ…

1 day ago

ಸರ್ಕಾರಿ ನೌಕರರಿಗೆ ಹೊಸ ನಿಯಮ: ಮುಂಬಡ್ತಿಗೆ ತರಬೇತಿ ಕಡ್ಡಾಯ

ಕರ್ನಾಟಕ ಸರ್ಕಾರವು ನಾಗರಿಕ ಸೇವೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಮಹತ್ವದ ಹೊಸ ನಿಯಮ ಜಾರಿಗೆ ತಂದಿದೆ. ಇನ್ಮುಂದೆ ಸರ್ಕಾರಿ ನೌಕರರು ಮುಂಬಡ್ತಿ…

1 day ago