Categories: Latest

ಅಕ್ರಮ ಸಾಗಾಟದಿಂದ ಪಾರಾದ 7 ಶ್ವಾನಗಳು 17 ಕಿ.ಮೀ. ನಡೆದು ಮನೆ ಸೇರಿ ಮನಸೂರೆಗೈದ ಕಥೆ

ಈಶಾನ್ಯ ಚೀನಾದಲ್ಲಿ ಹೃದಯಸ್ಪರ್ಶಿ ಘಟನೆ ಒಂದಾಗಿದೆ. ಅಕ್ರಮವಾಗಿ ಸಾಗಿಸಲಾಗುತ್ತಿದ್ದ 7 ಶ್ವಾನಗಳು ವಾಹನದಿಂದ ತಪ್ಪಿಸಿಕೊಂಡು, ಸುಮಾರು 17 ಕಿಲೋಮೀಟರ್‌ ದೂರವನ್ನು ಒಟ್ಟಾಗಿ ಪ್ರಯಾಣಿಸಿ ತಮ್ಮ ಮನೆ ಸೇರಿವೆ.

ಶ್ವಾನಗಳನ್ನು ಕದ್ದು ಸಾಗಿಸುತ್ತಿದ್ದ ವಾಹನದಿಂದ ತಪ್ಪಿಸಿಕೊಂಡ ಈ ನಾಯಿಗಳು, ಪರಸ್ಪರ ಬೆಂಬಲವಾಗಿ ಒಂದಾಗಿ ಸಾಗಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಸ್ತೆ ಬದಿಯಲ್ಲಿ ಶಿಸ್ತಿನಿಂದ, ಒಗ್ಗಟ್ಟಿನಿಂದ ಸಾಗುತ್ತಿರುವ ಈ ಗುಂಪನ್ನು ಸ್ಥಳೀಯರೊಬ್ಬರು ವಿಡಿಯೋದಲ್ಲಿ ಸೆರೆಹಿಡಿದಿದ್ದಾರೆ.

ವಿಡಿಯೋದಲ್ಲಿ ‘ಕಾರ್ಗಿ’ ತಳಿಯ ಶ್ವಾನವು ಗುಂಪಿನ ಮುನ್ನಡೆ ವಹಿಸಿಕೊಂಡಿದ್ದು, ಇತರ ನಾಯಿಗಳನ್ನು ದಾರಿತೋರಿಸುತ್ತಿರುವುದು ಕಾಣಿಸುತ್ತದೆ. ಜೊತೆಗೆ, ‘ಗೋಲ್ಡನ್ ರಿಟ್ರೀವರ್’ ಶ್ವಾನವು ಕಾವಲುಗಾರನಂತೆ ವರ್ತಿಸುತ್ತಿದೆ. ಗಾಯಗೊಂಡಿದ್ದ ‘ಜರ್ಮನ್ ಶೆಫರ್ಡ್’ ಶ್ವಾನವು ಕುಂಟುತ್ತ ಸಾಗುತ್ತಿದ್ದರೂ, ಅದನ್ನು ಒಂಟಿಯಾಗಲು ಬಿಡದೇ, ಇತರ ನಾಯಿಗಳು ಅದರ ವೇಗಕ್ಕೆ ತಕ್ಕಂತೆ ಸಾಗಿರುವುದು ಮನಸೂರೆಗೈಯುವಂತಿದೆ.

ಈ ವಿಡಿಯೋ ವೈರಲ್ ಆದ ಬಳಿಕ ಪ್ರಾಣಿ ದಯಾ ಸಂಘಗಳು ತಕ್ಷಣ ಕಾರ್ಯಪ್ರವೃತ್ತಗೊಂಡು, ಎಲ್ಲಾ ಶ್ವಾನಗಳನ್ನು ಸುರಕ್ಷಿತವಾಗಿ ಅವುಗಳ ಮಾಲೀಕರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿವೆ.

ಭ್ರಷ್ಟರ ಬೇಟೆ

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

13 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

20 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

20 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago