Crime

ಖಾನಾಪುರ್ ತಾಲೂಕಿನ ಕನಕುಂಬಿ ತನಿಖಾ ಠಾಣೆ ಹತ್ತಿರ ಇರುವ ಚೌಕಿ ಗ್ರಾಮದ ಹತ್ತಿರ ಅಬಕಾರಿ ಅಧಿಕಾರಿಗಳಿಂದ ಭರ್ಜರಿ ಬೇಟೆ

ದಿನಾಂಕ: 19/01/2025 ರಂದು ಮಾನ್ಯ ಅಬಕಾರಿ ಅಪರ ಆಯುಕ್ತರು, ಕೇಂದ್ರಸ್ಥಾನ ಬೆಳಗಾವಿ ರವರ, ಮಾನ್ಯ ಅಬಕಾರಿ ಜಂಟಿ ಆಯುಕ್ತರು, ಬೆಳಗಾವಿ ವಿಭಾಗದ, ಮಾನ್ಯ ಅಬಕಾರಿ ಉಪ ಆಯುಕ್ತರು, ಬೆಳಗಾವಿ ಜಿಲ್ಲೆ ದಕ್ಷಿಣ ರವರ ಆದೇಶದಂತೆ, ಮಾನ್ಯ ಅಬಕಾರಿ ಉಪ ಅಧೀಕ್ಷಕರು, ಬೆಳಗಾವಿ ಉಪ ವಿಭಾಗರವರ ಮಾರ್ಗದರ್ಶನದಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಬಕಾರಿ ಅಧಿಕಾರಿಗಳು ಹಾಗೂ ಅಧೀನ ಸಿಬ್ಬಂದಿ ಕೂಡಿಕೊಂಡು ಖಾನಾಪೂರ ತಾಲೂಕಿನ ಕಣಕುಂಬಿ ತನಿಖಾ ಠಾಣೆಯ ಹತ್ತಿರವಿರುವ ಚೌಕಿ ಗ್ರಾಮದಿಂದ ಮಾನ ಗ್ರಾಮದ ಕಡೆಗೆ ಹೋಗುವ ರಸ್ತೆಯಲ್ಲಿ ಗಸ್ತು ಕಾರ್ಯ ಮಾಡುತ್ತಿರುವಾಗ 1] ಓಮ್ನಿ ಕಾರ ಸಂಖ್ಯೆ: ಜಿಎ-01ಜೆ-1658, 2] ಹಿರೋ ಹೊಂಡಾ ಸ್ಪ್ಲೆಂಡರ್ ಪ್ಲಸ್ ದ್ವಿಚಕ್ರ ವಾಹನ ಸಂಖ್ಯೆ: ಕೆಎ-22/ಇಡಿ-5617, 3] ಹಿರೋ ಹೊಂಡಾ ಪ್ಯಾಶನ್ ದ್ವಿಚಕ್ರ ವಾಹನ ಸಂಖ್ಯೆ: ಕೆಎ-22/ಯು-6928 ರಲ್ಲಿ ಒಟ್ಟು 261.36 ಲೀ. ದಷ್ಟು ಗೋವಾ ಮದ್ಯ ಸಿಕ್ಕಿದ್ದು, ಇದು ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ: 10, 11, 12, 14 ಸಹ ಕಲಂ: 32(1), 34, 38(ಎ) ಮತ್ತು 43 ರನ್ವಯ ಅಪರಾಧವಾಗಿರುವುದರಿಂದ ಎ-1] ರತ್ನಾಕರ ನಾನು ಗಾವಡೆ, ಸಾ: ಹಬ್ಬಾನಟ್ಟಿ, ತಾ: ಖಾನಾಪೂರ, ಜಿ: ಬೆಳಗಾವಿ, ಎ-2] ದಿಲೀಪ ನಿಂಗೋ ಪಾಟೀಲ, ಸಾ: ತೋರಾಳಿ, ತಾ: ಖಾನಾಪೂರ, ಜಿ: ಬೆಳಗಾವಿ, ಎ-3] ಓಡಿ ಹೋದ ಆರೋಪಿ, ಎ-4] ಮಾರುತಿ ಸುಜುಕಿ ಕಂಪನಿಯ ಓಮ್ನಿ-ಇ ನಾಲ್ಕು ಚಕ್ರದ ವಾಹನ ಸಂಖ್ಯೆ: ಜಿಎ-01/ಜೆ-1658 ನೇದ್ದರ ಮಾಲಿಕ, ಎ-5] ಹಿರೋ ಹೊಂಡಾ ಸ್ಪ್ಲೆಂಡರ್ ಪ್ಲಸ್ ದ್ವಿಚಕ್ರ ವಾಹನ ಸಂಖ್ಯೆ: ಕೆಎ-22/ಇಡಿ-5617 ನೇದ್ದರ ಮಾಲಿಕ, ಎ-6] ಹಿರೋ ಹೊಂಡಾ ಪ್ಯಾಶನ್ ದ್ಚಿಚಕ್ರ ವಾಹನ ಸಂಖ್ಯೆ: ಕೆಎ-22/ಯು-6928ನೇದ್ದರ ಮಾಲಿಕನ ವಿರುದ್ಧ ಅಬಕಾರಿ ನಿರೀಕ್ಷಕರು ಖಾನಾಪುರ ವಲಯ ರವರು ಪ್ರಕರಣ ದಾಖಲಿಸಿರುತ್ತಾರೆ.ಮುದ್ದೆಮಾಲು ಹಾಗೂ ವಾಹನಗಳ (01-ನಾಲ್ಕು ಚಕ್ರದ ಮತ್ತು 02-ದ್ವಿಚಕ್ರ ವಾಹನಗಳು) ಅಂದಾಜು ಮೌಲ್ಯ ರೂ. 587408 ರಷ್ಟಿರುತ್ತದೆ. ವರದಿ: ಮಿರ್ಜಾ ಸಲೀಮ್ ಎಸ್ ಬೇಗ

nazeer ahamad

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

11 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

11 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

11 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

11 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

11 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago