Crime

ಖಾನಾಪುರ್ ತಾಲೂಕಿನ ಕನಕುಂಬಿ ತನಿಖಾ ಠಾಣೆ ಹತ್ತಿರ ಇರುವ ಚೌಕಿ ಗ್ರಾಮದ ಹತ್ತಿರ ಅಬಕಾರಿ ಅಧಿಕಾರಿಗಳಿಂದ ಭರ್ಜರಿ ಬೇಟೆ

ದಿನಾಂಕ: 19/01/2025 ರಂದು ಮಾನ್ಯ ಅಬಕಾರಿ ಅಪರ ಆಯುಕ್ತರು, ಕೇಂದ್ರಸ್ಥಾನ ಬೆಳಗಾವಿ ರವರ, ಮಾನ್ಯ ಅಬಕಾರಿ ಜಂಟಿ ಆಯುಕ್ತರು, ಬೆಳಗಾವಿ ವಿಭಾಗದ, ಮಾನ್ಯ ಅಬಕಾರಿ ಉಪ ಆಯುಕ್ತರು, ಬೆಳಗಾವಿ ಜಿಲ್ಲೆ ದಕ್ಷಿಣ ರವರ ಆದೇಶದಂತೆ, ಮಾನ್ಯ ಅಬಕಾರಿ ಉಪ ಅಧೀಕ್ಷಕರು, ಬೆಳಗಾವಿ ಉಪ ವಿಭಾಗರವರ ಮಾರ್ಗದರ್ಶನದಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಬಕಾರಿ ಅಧಿಕಾರಿಗಳು ಹಾಗೂ ಅಧೀನ ಸಿಬ್ಬಂದಿ ಕೂಡಿಕೊಂಡು ಖಾನಾಪೂರ ತಾಲೂಕಿನ ಕಣಕುಂಬಿ ತನಿಖಾ ಠಾಣೆಯ ಹತ್ತಿರವಿರುವ ಚೌಕಿ ಗ್ರಾಮದಿಂದ ಮಾನ ಗ್ರಾಮದ ಕಡೆಗೆ ಹೋಗುವ ರಸ್ತೆಯಲ್ಲಿ ಗಸ್ತು ಕಾರ್ಯ ಮಾಡುತ್ತಿರುವಾಗ 1] ಓಮ್ನಿ ಕಾರ ಸಂಖ್ಯೆ: ಜಿಎ-01ಜೆ-1658, 2] ಹಿರೋ ಹೊಂಡಾ ಸ್ಪ್ಲೆಂಡರ್ ಪ್ಲಸ್ ದ್ವಿಚಕ್ರ ವಾಹನ ಸಂಖ್ಯೆ: ಕೆಎ-22/ಇಡಿ-5617, 3] ಹಿರೋ ಹೊಂಡಾ ಪ್ಯಾಶನ್ ದ್ವಿಚಕ್ರ ವಾಹನ ಸಂಖ್ಯೆ: ಕೆಎ-22/ಯು-6928 ರಲ್ಲಿ ಒಟ್ಟು 261.36 ಲೀ. ದಷ್ಟು ಗೋವಾ ಮದ್ಯ ಸಿಕ್ಕಿದ್ದು, ಇದು ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ: 10, 11, 12, 14 ಸಹ ಕಲಂ: 32(1), 34, 38(ಎ) ಮತ್ತು 43 ರನ್ವಯ ಅಪರಾಧವಾಗಿರುವುದರಿಂದ ಎ-1] ರತ್ನಾಕರ ನಾನು ಗಾವಡೆ, ಸಾ: ಹಬ್ಬಾನಟ್ಟಿ, ತಾ: ಖಾನಾಪೂರ, ಜಿ: ಬೆಳಗಾವಿ, ಎ-2] ದಿಲೀಪ ನಿಂಗೋ ಪಾಟೀಲ, ಸಾ: ತೋರಾಳಿ, ತಾ: ಖಾನಾಪೂರ, ಜಿ: ಬೆಳಗಾವಿ, ಎ-3] ಓಡಿ ಹೋದ ಆರೋಪಿ, ಎ-4] ಮಾರುತಿ ಸುಜುಕಿ ಕಂಪನಿಯ ಓಮ್ನಿ-ಇ ನಾಲ್ಕು ಚಕ್ರದ ವಾಹನ ಸಂಖ್ಯೆ: ಜಿಎ-01/ಜೆ-1658 ನೇದ್ದರ ಮಾಲಿಕ, ಎ-5] ಹಿರೋ ಹೊಂಡಾ ಸ್ಪ್ಲೆಂಡರ್ ಪ್ಲಸ್ ದ್ವಿಚಕ್ರ ವಾಹನ ಸಂಖ್ಯೆ: ಕೆಎ-22/ಇಡಿ-5617 ನೇದ್ದರ ಮಾಲಿಕ, ಎ-6] ಹಿರೋ ಹೊಂಡಾ ಪ್ಯಾಶನ್ ದ್ಚಿಚಕ್ರ ವಾಹನ ಸಂಖ್ಯೆ: ಕೆಎ-22/ಯು-6928ನೇದ್ದರ ಮಾಲಿಕನ ವಿರುದ್ಧ ಅಬಕಾರಿ ನಿರೀಕ್ಷಕರು ಖಾನಾಪುರ ವಲಯ ರವರು ಪ್ರಕರಣ ದಾಖಲಿಸಿರುತ್ತಾರೆ.ಮುದ್ದೆಮಾಲು ಹಾಗೂ ವಾಹನಗಳ (01-ನಾಲ್ಕು ಚಕ್ರದ ಮತ್ತು 02-ದ್ವಿಚಕ್ರ ವಾಹನಗಳು) ಅಂದಾಜು ಮೌಲ್ಯ ರೂ. 587408 ರಷ್ಟಿರುತ್ತದೆ. ವರದಿ: ಮಿರ್ಜಾ ಸಲೀಮ್ ಎಸ್ ಬೇಗ

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

1 hour ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

8 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

8 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago