ರಾಜ್ಯದಲ್ಲಿ ಮಳೆ ಆರ್ಭಟ, ಬುಧವಾರ ಸಂಜೆ ಒಂದು ಗಂಟೆಗೂ ಹೆಚ್ಚು ಕಾಲ ವಿವಿಧ ಜಿಲ್ಲೆಗಳ ವ್ಯಾಪ್ತಿಯಲ್ಲಿ ಜೋರು ಮಳೆ ಆಗಿದೆ. ಹಲವೆಡೆ ಗುಡುಗು ಸಹಿತ ಮಳೆ ದಾಖಲಾಗಿದೆ. ಧಾರವಾಡ, ಕಲಘಟಗಿ, ಹಾವೇರಿ, ಬೆಂಗಳೂರಿನ ಒಂದೆರಡು ಪ್ರದೇಶ, ಹುಬ್ಬಳ್ಳಿ ಸೇರಿದಂತೆ ವಿವಿಧ ಭಾಗದಲ್ಲಿ ಮಳೆ ದಾಖಲಾಗಿದೆ.
ರಾಜ್ಯದ ವಿವಿಧೆಡೆ ಬೆಳಗ್ಗೆಯಿಂದ ಕಂಡು ಬಂದ ಬಿಸಿಲು ಮಧ್ಯಾಹ್ನದ ವೇಳೆ ಮರೆಯಾಗಿತ್ತು. ಸಂಜೆ ನಂತರ ಗುಡುಗು ಮಿಂಚು ಸಹಿತ ಅನೇಕ ಕಡೆಗಳಲ್ಲಿ ಆರ್ಭಟಿಸಿತು. ಹಾವೇರಿಯ ಹಲವೆಡೆ ಆಲಿಕಲ್ಲು ಸಹಿತ ಜೋರು ಮಳೆ ಆಗಿದೆ. ಜೋರು ಗಾಳಿ ಬೀಸಿದೆ. ಕಲಘಟಗಿಯಲ್ಲೂ ಮಳೆ ಬಿದ್ದಿದೆ. ಹೀಗೆ ಸಾಕಷ್ಟು ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರಿದಿದೆ.
ಅಲ್ಲದೇ ಮುಂದಿನ ಮೂರು ದಿನ ಕರಾವಳಿ ಭಾಗದ ಜಿಲ್ಲೆಗಳು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗ ಸಹಿತ ಜೋರು ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…