ಮುಂಡಗೋಡ: ಪಟ್ಟಣದ ತಾಲೂಕು ಆಸ್ಪತ್ರೆಗೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು ಶುಕ್ರವಾರ ಸಂಜೆ ಭೇಟಿ ನೀಡಿ ವೈದ್ಯರು ಮತ್ತು ಸಿಬ್ಬಂದಿಗಳಿಗೆ ತರಾಟೆಯನ್ನು ತೆಗೆದುಕೊಂಡ ಘಟನೆ ನಡೆದಿದೆ.
ಮಳಗಿಯ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪಿಕ್ನಿಕ್ ಗೆ ತೆರಳಿ ಬರುತ್ತಿದ್ದ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ಗಾಯಗೊಂಡಿದ್ದ ಕೆಲವು ವಿದ್ಯಾರ್ಥಿನಿಯರನ್ನು ತಾಲೂಕ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಘಟನೆಯ ಮಾಹಿತಿ ತಿಳಿದ ಸಚಿವ ಹೆಬ್ಬಾರ್ ಅವರು ಗಾಯಾಳುಗಳನ್ನು ಮಾತನಾಡಿಸಲು ಆಸ್ಪತ್ರೆಗೆ ಬಂದಿದ್ದಾಗ ವೈದ್ಯರು ಹಾಗೂ ಸಿಬ್ಬಂದಿಗಳು ಆಸ್ಪತ್ರೆಯಲ್ಲಿ ಇರಲಿಲ್ಲ ಇದರಿಂದ ಅಸಮಾಧಾನಗೊಂಡ ಸಚಿವರು ನಂತರ ಬಂದ ವೈದ್ಯರು ಮತ್ತು ಸಿಬ್ಬಂದಿಗಳಿಗೆ ತರಾಟೆ ತೆಗೆದುಕೊಂಡರು.
ಆಸ್ಪತ್ರೆಗೆ ದಾಖಲಾಗಿದ್ದ ಕೆಲವು ವಿದ್ಯಾರ್ಥಿನಿಯರನ್ನು ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ ಎಂದು ವೈದ್ಯರು ತಿಳಿಸಿದಾಗ ಮತ್ತಷ್ಟು ಕೋಪಗೊಂಡ ಸಚಿವರು ಇಷ್ಟು ಬೇಗ ವಿದ್ಯಾರ್ಥಿನಿಯರನ್ನು ಮನೆಗೆ ಕಳುಹಿಸುವ ಅಗತ್ಯವೆನಿತ್ತು?ಆ ವಿದ್ಯಾರ್ಥಿನಿಯರನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಿಕೊಂಡು ಉತ್ತಮ ಚಿಕಿತ್ಸೆ ನೀಡುವಂತೆ ಸೂಚಿಸಿದರು..
ಶನಿವಾರದಂದು ಮೃತ ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿ, ಆಕೆಯ ತಂದೆ ತಾಯಿ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಲಾಗುವುದು, ಇದರಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರಿಗೆ ಶಿಕ್ಷೆ ಆಗಲಿದೆ ಮತ್ತು ಶಿರಸಿಯ ಟಿಎಸ್ಎಸ್ ಆಸ್ಪತ್ರೆಗೂ ಸಹ ಭೇಟಿ ನೀಡಲಾಗುವುದು ಎಂದು ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದರು.
ವರದಿ:ಮಂಜುನಾಥ ಹರಿಜನ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…