Corruption

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ ಮೀನಾಮೇಷ ಎಣಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.
ತೆರುವುಗೊಳಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ಪತ್ರ ಬರೆದಿದ್ದರೂ ತಾಲೂಕು ಆಡಳಿತ ಮೌನಕ್ಕೆ ಶರಣಾಗಿರುವುದು ಭಾರಿ ಅನುಮಾನಗಳಿಗೆ ಎಡೆ ಮಾಡಿಕೊಟ್ಟಂತಾಗಿದೆ.ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವುದಾಗಿ ಭೂಮಾಪಕರ ವರದಿ ನೀಡಿ ಎರಡು ವರ್ಷ ಕಳೆದಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಶಂಕೆಗೆ ಕಾರಣವಾಗಿದೆ.
ನಂಜನಗೂಡು ತಾಲೂಕು ಕಸಬಾ ಹೋಬಳಿ ವಳಗೆರೆ ಗ್ರಾಮ ಸರ್ವೆ ನಂ.193 ರಲ್ಲಿ ಎರಡು ಎಕ್ರೆ ಸರ್ಕಾರಿ ಖರಾಬು ಗೋಮಾಳ ಜಮೀನಿದ್ದು ಇದನ್ನುಮಂಡ್ಯ ಮೂಲದ ಖಾಸಗಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಅತಿಕ್ರಮಣ ಮಾಡಿ ಹೈಟೆಕ್ ಪೌಲ್ಟ್ರಿ ಫಾರಂ,ಮೂರು ವಾಸದ ಮನೆ ಒಂದು ವಾಟರ್ ಟ್ಯಾಂಕ್ ನಿರ್ಮಿಸಿಕೊಂಡಿದ್ದಾರೆ.
ಅಲ್ಲದೆ ಅಕ್ರಮ ಒತ್ತುವರಿ ಮಾಡಿದ ವ್ಯಕ್ತಿಗಳು ಸ್ಥಳೀಯ ರೈತರಿಗೆ ತೊಂದರೆ ಕೊಡುತ್ತಿದ್ದಾರೆ. ಸರಕಾರಿ ಒತ್ತುವರಿ ತೆರುವುಗೊಳಿಸುವಂತೆ ತಾಲೂಕು ಆಡಳಿತಕ್ಕೆ 2023 ರಲ್ಲೇ ದೂರು ಬಂದಿದೆ.ಇದರಂತೆ ಭೂಮಾಪಕರು ಅಳತೆ ಮಾಡಿದಾಗ ಒತ್ತುವರಿ ಆಗಿರುವುದಾಗಿ ಅಧಿಕೃತವಾಗಿ ವರದಿ ನೀಡಿದ್ದಾರೆ.
ಈ ಬಗ್ಗೆ ದಲಿತ ಸಂಘರರ್ಷ ಸಮಿತಿ ಸಹ ದೂರು ನೀಡಿದೆ.ಭೂಮಾಪಕರು ವರದಿ ನೀಡಿ ಎರಡೂವರೆ ವರ್ಷ ಕಳೆದಿದೆ
ಹಾಗೂ ತೆರುವುಗೊಳಿಸುವಂತೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ಉಪವಿಭಾಗಾಧಿಕಾರಿಗಳಿಗೂ ಪತ್ರ ರವಾನೆ ಆಗಿದೆ.ಇಷ್ಟೆಲ್ಲಾ ಬೆಳವಣಿಗೆ ಆದ್ರೂ ತಮ್ಮ ಆಸ್ತಿಯನ್ನ ರಕ್ಷಿಸಿಕೊಳ್ಳಲು ನಂಜನಗೂಡು ತಾಲೂಕು ಆಡಳಿತ ಆಸಕ್ತಿ ತೋರಿಸುತ್ತಿಲ್ಲ.
ಯಾವುದೇ ಕ್ರಮವೂ ಕೈಗೊಂಡಿಲ್ಲ.ಕೋಟ್ಯಾಂತರ ಬೆಲೆ ಬಾಳುವ ಆಸ್ತಿಯನ್ನ ಖಾಸಗಿ ವ್ಯಕ್ತಿ ಅನುಭವಿಸುತ್ತಿದ್ದರೂ ಜಾಣಕುರುಡರಂತೆ ವರ್ತಿಸುತ್ತಿರುವ ತಾಲೂಕು ಆಡಳಿತಕ್ಕೆ ಜಿಲ್ಲಾಡಳಿತ ಚುರುಕು ಮುಟ್ಟಿಸಿ ತಮ್ಮ. ಆಸ್ತಿಯನ್ನ ರಕ್ಷಿಸಿಕೊಳ್ಳಬೇಕಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

22 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

22 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

22 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

22 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

22 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

22 hours ago