Corruption

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ ಮೀನಾಮೇಷ ಎಣಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.
ತೆರುವುಗೊಳಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ಪತ್ರ ಬರೆದಿದ್ದರೂ ತಾಲೂಕು ಆಡಳಿತ ಮೌನಕ್ಕೆ ಶರಣಾಗಿರುವುದು ಭಾರಿ ಅನುಮಾನಗಳಿಗೆ ಎಡೆ ಮಾಡಿಕೊಟ್ಟಂತಾಗಿದೆ.ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವುದಾಗಿ ಭೂಮಾಪಕರ ವರದಿ ನೀಡಿ ಎರಡು ವರ್ಷ ಕಳೆದಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಶಂಕೆಗೆ ಕಾರಣವಾಗಿದೆ.
ನಂಜನಗೂಡು ತಾಲೂಕು ಕಸಬಾ ಹೋಬಳಿ ವಳಗೆರೆ ಗ್ರಾಮ ಸರ್ವೆ ನಂ.193 ರಲ್ಲಿ ಎರಡು ಎಕ್ರೆ ಸರ್ಕಾರಿ ಖರಾಬು ಗೋಮಾಳ ಜಮೀನಿದ್ದು ಇದನ್ನುಮಂಡ್ಯ ಮೂಲದ ಖಾಸಗಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಅತಿಕ್ರಮಣ ಮಾಡಿ ಹೈಟೆಕ್ ಪೌಲ್ಟ್ರಿ ಫಾರಂ,ಮೂರು ವಾಸದ ಮನೆ ಒಂದು ವಾಟರ್ ಟ್ಯಾಂಕ್ ನಿರ್ಮಿಸಿಕೊಂಡಿದ್ದಾರೆ.
ಅಲ್ಲದೆ ಅಕ್ರಮ ಒತ್ತುವರಿ ಮಾಡಿದ ವ್ಯಕ್ತಿಗಳು ಸ್ಥಳೀಯ ರೈತರಿಗೆ ತೊಂದರೆ ಕೊಡುತ್ತಿದ್ದಾರೆ. ಸರಕಾರಿ ಒತ್ತುವರಿ ತೆರುವುಗೊಳಿಸುವಂತೆ ತಾಲೂಕು ಆಡಳಿತಕ್ಕೆ 2023 ರಲ್ಲೇ ದೂರು ಬಂದಿದೆ.ಇದರಂತೆ ಭೂಮಾಪಕರು ಅಳತೆ ಮಾಡಿದಾಗ ಒತ್ತುವರಿ ಆಗಿರುವುದಾಗಿ ಅಧಿಕೃತವಾಗಿ ವರದಿ ನೀಡಿದ್ದಾರೆ.
ಈ ಬಗ್ಗೆ ದಲಿತ ಸಂಘರರ್ಷ ಸಮಿತಿ ಸಹ ದೂರು ನೀಡಿದೆ.ಭೂಮಾಪಕರು ವರದಿ ನೀಡಿ ಎರಡೂವರೆ ವರ್ಷ ಕಳೆದಿದೆ
ಹಾಗೂ ತೆರುವುಗೊಳಿಸುವಂತೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ಉಪವಿಭಾಗಾಧಿಕಾರಿಗಳಿಗೂ ಪತ್ರ ರವಾನೆ ಆಗಿದೆ.ಇಷ್ಟೆಲ್ಲಾ ಬೆಳವಣಿಗೆ ಆದ್ರೂ ತಮ್ಮ ಆಸ್ತಿಯನ್ನ ರಕ್ಷಿಸಿಕೊಳ್ಳಲು ನಂಜನಗೂಡು ತಾಲೂಕು ಆಡಳಿತ ಆಸಕ್ತಿ ತೋರಿಸುತ್ತಿಲ್ಲ.
ಯಾವುದೇ ಕ್ರಮವೂ ಕೈಗೊಂಡಿಲ್ಲ.ಕೋಟ್ಯಾಂತರ ಬೆಲೆ ಬಾಳುವ ಆಸ್ತಿಯನ್ನ ಖಾಸಗಿ ವ್ಯಕ್ತಿ ಅನುಭವಿಸುತ್ತಿದ್ದರೂ ಜಾಣಕುರುಡರಂತೆ ವರ್ತಿಸುತ್ತಿರುವ ತಾಲೂಕು ಆಡಳಿತಕ್ಕೆ ಜಿಲ್ಲಾಡಳಿತ ಚುರುಕು ಮುಟ್ಟಿಸಿ ತಮ್ಮ. ಆಸ್ತಿಯನ್ನ ರಕ್ಷಿಸಿಕೊಳ್ಳಬೇಕಿದೆ.

ಭ್ರಷ್ಟರ ಬೇಟೆ

Recent Posts

ಸುಜಾತ ಭೂಮಿ ವಿವಾದಕ್ಕೆ ಹೊಸ ತಿರುವು: ರೈತರ ಪರ ನಿಂತ ಹರತಾಳು ಹಾಲಪ್ಪ, ಡಿಎಫ್‌ಒಗೆ ಮನವಿ

ಸಾಗರ ತಾಲೂಕಿನ ಅಡ್ಡೇರಿ ಗ್ರಾಮದ ರೈತ ಮಹಿಳೆ ಸುಜಾತ ಅವರ ಭೂಮಿ ವಿವಾದ ಇದೀಗ ಹೊಸ ಹಂತ ತಲುಪಿದ್ದು, ಮಾಜಿ…

15 hours ago

ಕಚೇರಿಯನ್ನೇ ಮದ್ಯಪಾನದ ಅಡ್ಡೆಯನ್ನಾಗಿಸಿದ ಅಧಿಕಾರಿಗಳು; ಎಇಇ ಸೇರಿ ಮೂವರು ಸಸ್ಪೆಂಡ್

ರಾಯಚೂರಿನಲ್ಲಿ ಸರ್ಕಾರಿ ಕಚೇರಿಯಲ್ಲೇ ಗುಂಡು-ತುಂಡಿನ ಪಾರ್ಟಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಮೂವರು ಸಿಬ್ಬಂದಿಯನ್ನು…

15 hours ago

ಕಳ್ಳತನ ನಡೆದ 8 ಗಂಟೆಯೊಳಗೆ ಇಬ್ಬರು ಆರೋಪಿಗಳ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನ-ನಗದು ವಶ

ಭಟ್ಕಳ: ಮನೆ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ ಹಾಗೂ ನಗದು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಕೇವಲ…

1 day ago

ಕಾರವಾರದಲ್ಲಿ 100 ಕೋಟಿ ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸಂಪುಟ ಅಸ್ತು!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜನತೆಯ ಬಹುದಿನಗಳ ಕನಸಿಗೆ ಕೊನೆಗೂ ಜಯ ಸಿಕ್ಕಿದೆ. ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ…

1 day ago

3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಅರೆಸ್ಟ್!

ಹಳಿಯಾಳ: ಸುಲಿಗೆ ಹಾಗೂ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಕಳೆದ ಮೂರು ವರ್ಷಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್‌ನ್ನು…

1 day ago

ಕುಡಿದ ಅಮಲಿನಲ್ಲಿ ಹೆತ್ತ ಮಗಳ ಮೇಲೆಯೇ ಅತ್ಯಾಚಾರ! ಉತ್ತರಕನ್ನಡದಲ್ಲಿ ಬೆಚ್ಚಿಬೀಳಿಸಿದ ಪಾಪಿ ತಂದೆಯ ಕೃತ್ಯ

ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಮಾನವೀಯತೆಯನ್ನೇ ಮರೆಸುವಂತಹ ಅಮಾನುಷ ಘಟನೆ ಬೆಳಕಿಗೆ ಬಂದಿದೆ. ಕುಡಿದ ಮತ್ತಿನಲ್ಲಿ ತಂದೆಯೊಬ್ಬ ತನ್ನ 13…

2 days ago