Categories: Latest

19 ವರ್ಷದ ಯುವತಿ ಗಂಡನನ್ನು ಬಿಟ್ಟು ಪ್ರಿಯಕರನೊಂದಿಗೆ ಬದುಕಲು ಹೈಕೋರ್ಟ್ ಬೆಂಬಲ

ಮಧ್ಯಪ್ರದೇಶ: ಪತಿಯೊಂದಿಗೆ ಜೀವನ ನಡೆಸಲು ಸಾಧ್ಯವಿಲ್ಲವೆಂದು ಹೇಳಿದ 19 ವರ್ಷದ ಯುವತಿಗೆ ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಆಕೆಗೆ ತನ್ನ ಪ್ರಿಯಕರನೊಂದಿಗೆ ಬದುಕಲು ಅವಕಾಶ ಕಲ್ಪಿಸಿದೆ.

ಈ ಪ್ರಕರಣದಲ್ಲಿ ಅವಧೇಶ್ ಎಂಬುವವರು ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿ, ತಮ್ಮ ಪತ್ನಿಯನ್ನು ಅನುಜ್ ಕುಮಾರ್ ಎಂಬ ವ್ಯಕ್ತಿ ಅಕ್ರಮವಾಗಿ ಬಂಧಿಸಿ ಇಟ್ಟಿದ್ದಾನೆ ಎಂದು ಆರೋಪಿಸಿದ್ದರು. ನ್ಯಾಯಾಲಯದ ನಿರ್ದೇಶನದ ಮೇರೆಗೆ ಪೊಲೀಸರು ಯುವತಿಯನ್ನು ಪತ್ತೆಹಚ್ಚಿ, ಸಾಂತ್ವನ ಕೇಂದ್ರದಲ್ಲಿ ಇರಿಸಿ ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

ನ್ಯಾಯಾಧೀಶರ ಮುಂದೆ ಯುವತಿ ತನ್ನ ಮನದ ಮಾತು ಹೊರಹಾಕಿದಳು. “ನನಗೆ 19 ವರ್ಷ, ಪತಿಗೆ 40 ವರ್ಷ. ನಮ್ಮಿಬ್ಬರ ನಡುವೆ 21 ವರ್ಷದ ವಯೋಮಾನದ ಅಂತರವಿದೆ. ನಮ್ಮ ಸಂಬಂಧದಲ್ಲಿ ಯಾವುದೇ ಹೊಂದಾಣಿಕೆ ಇರಲಿಲ್ಲ. ನನ್ನ ವೈವಾಹಿಕ ಜೀವನ ಸಂತೋಷಕರವಾಗಿರಲಿಲ್ಲ,” ಎಂದು ಆಕೆ ಹೇಳಿಕೊಂಡಳು. ಜೊತೆಗೆ, ತಾನು ಪ್ರಿಯಕರ ಅನುಜ್ ಕುಮಾರ್ ಜೊತೆ ಬದುಕಲು ಬಯಸುವುದಾಗಿ ಸ್ಪಷ್ಟಪಡಿಸಿದಳು.

ಯುವತಿಯನ್ನು ಮನವೊಲಿಸಲು ನ್ಯಾಯಾಲಯವು ಕೌನ್ಸೆಲಿಂಗ್‌ಗೆ ಆದೇಶಿಸಿತು. ಆದರೆ ಕೌನ್ಸೆಲಿಂಗ್ ನಂತರವೂ ಆಕೆ ತನ್ನ ನಿರ್ಧಾರವನ್ನು ಬದಲಿಸದೇ ಪ್ರಿಯಕರನೊಂದಿಗೆ ಜೀವನ ನಡೆಸುವ ಆಸೆಯನ್ನು ಪುನರುಚ್ಚರಿಸಿದಳು. ಪ್ರಿಯಕರ ಅನುಜ್ ಕುಮಾರ್ ಕೂಡ ಯುವತಿಯ ಸುರಕ್ಷತೆ ಹಾಗೂ ಜವಾಬ್ದಾರಿಯನ್ನು ಹೊರುವುದಾಗಿ ನ್ಯಾಯಾಲಯಕ್ಕೆ ಭರವಸೆ ನೀಡಿದನು.

ಈ ಹಿನ್ನೆಲೆ ನ್ಯಾಯಮೂರ್ತಿಗಳಾದ ಆನಂದ್ ಪಾಠಕ್ ಮತ್ತು ಪುಷ್ಪೇಂದ್ರ ಯಾದವ್ ಅವರ ಪೀಠವು, “ಯುವತಿ ವಯಸ್ಕಳಾಗಿರುವುದರಿಂದ ಆಕೆಯ ಸ್ವತಂತ್ರ ನಿರ್ಧಾರವೇ ಪ್ರಮುಖ. ಆಕೆ ಯಾವುದೇ ಒತ್ತಡ ಅಥವಾ ಅಕ್ರಮ ಬಂಧನದಲ್ಲಿಲ್ಲ ಎಂಬುದು ಸ್ಪಷ್ಟವಾಗಿದೆ” ಎಂದು ಅಭಿಪ್ರಾಯಪಟ್ಟಿತು. ವಯಸ್ಕರಿಗೆ ತಮ್ಮ ಇಚ್ಛೆಯಂತೆ ಬದುಕುವ ಹಕ್ಕು ಇದೆ ಎಂದು ಹೇಳಿ, ಆಕೆಯನ್ನು ಪ್ರಿಯಕರನ ಜೊತೆ ಹೋಗಲು ಅನುಮತಿಸಿತು.

ಇದಲ್ಲದೆ, ಯುವತಿಯ ಸುರಕ್ಷತೆಗಾಗಿ ನ್ಯಾಯಾಲಯವು ವಿಶೇಷ ಸೂಚನೆ ನೀಡಿದ್ದು, ಮುಂದಿನ ಆರು ತಿಂಗಳ ಕಾಲ “ಶೌರ್ಯ ದೀದಿ” ಯೋಜನೆಯಡಿ ಮಹಿಳಾ ಅಧಿಕಾರಿಗಳು ಆಕೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಕ್ಷೇಮ ವಿಚಾರಣೆ ನಡೆಸಬೇಕು ಎಂದು ಆದೇಶಿಸಿದೆ.

ಭ್ರಷ್ಟರ ಬೇಟೆ

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

4 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

4 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

4 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

4 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago