Categories: CrimeLatest

ಐಪಿಎಸ್ ಲೇಔಟ್‌ನಲ್ಲಿ ಹೈಫೈ ರೇವ್ ಪಾರ್ಟಿ ಬಯಲು: 20 ಸಾವಿರಕ್ಕೆ ವಿಲ್ಲಾ ಬಾಡಿಗೆ, ಇ-ಸಿಗರೇಟ್, ಹುಕ್ಕಾ ಪತ್ತೆ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೇವ್ ಪಾರ್ಟಿಗಳಿಗೆ ಕಡಿವಾಣ ಹಾಕಲು ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದರೂ, ಆಯೋಜಕರು ಹೊಸ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿರುವುದು ಮತ್ತೆ ಬೆಳಕಿಗೆ ಬಂದಿದೆ. ನಗರದ ಪ್ರತಿಷ್ಠಿತ ಎಚ್‌ಎಸ್‌ಆರ್ ಲೇಔಟ್‌ನ ಐಪಿಎಸ್ ಲೇಔಟ್‌ನಲ್ಲಿ ನಡೆದಿದ್ದ ಹೈಫೈ ರೇವ್ ಪಾರ್ಟಿಯ ಮೇಲೆ ಪೊಲೀಸರು ದಾಳಿ ನಡೆಸಿ ಅಕ್ರಮ ಚಟುವಟಿಕೆಗಳನ್ನು ಪತ್ತೆಹಚ್ಚಿದ್ದಾರೆ.

ಎಚ್‌ಎಸ್‌ಆರ್ ಲೇಔಟ್ 6ನೇ ಸೆಕ್ಟರ್‌ನಲ್ಲಿರುವ ಸಿ-9 ವಿಲ್ಲಾವನ್ನು ‘ರೇವ್ ಕೀ ಹಾಸ್ಪಿಟಾಲಿಟಿ ಸರ್ವಿಸ್’ ಹೆಸರಿನಲ್ಲಿ ಸುಮಾರು ₹20,000 ಬಾಡಿಗೆ ನೀಡಿ ಬುಕ್ ಮಾಡಲಾಗಿತ್ತು. ‘ಅಮಿಗೋಸ್’ ಆಪ್ ಮೂಲಕ ಯುವಕ-ಯುವತಿಯರಿಗೆ ರಹಸ್ಯವಾಗಿ ಆಹ್ವಾನ ನೀಡಲಾಗಿತ್ತು. ಪಾರ್ಟಿಗೆ ಪ್ರವೇಶಕ್ಕಾಗಿ ಯುವಕರಿಂದ ₹1,099 ಹಾಗೂ ಯುವತಿಯರಿಂದ ₹499 ಶುಲ್ಕ ವಸೂಲಿ ಮಾಡಲಾಗುತ್ತಿತ್ತು ಎನ್ನಲಾಗಿದೆ.

ವಿಲ್ಲಾದೊಳಗೆ ಮದ್ಯದ ವ್ಯವಸ್ಥೆ ಮಾಡಲಾಗಿದ್ದು, ರಾಜ್ಯದಲ್ಲಿ ನಿಷೇಧಿತವಾಗಿರುವ ಹುಕ್ಕಾ ಹಾಗೂ ಇ-ಸಿಗರೇಟ್‌ಗಳನ್ನೂ ಬಳಸಲಾಗುತ್ತಿತ್ತು. ಜೋರಾದ ಸಂಗೀತ, ಡ್ಯಾನ್ಸ್ ಹಾಗೂ ರಾತ್ರಿ ಪೂರ್ತಿ ನಡೆಯುತ್ತಿದ್ದ ಪಾರ್ಟಿಯ ಬಗ್ಗೆ ಮಾಹಿತಿ ಪಡೆದ ಮಹಿಳಾ ಘಟಕದ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ವಿಲ್ಲಾ ಮೇಲೆ ದಾಳಿ ಮಾಡಿದ್ದಾರೆ.

ದಾಳಿಯ ವೇಳೆ ಸ್ಥಳದಲ್ಲಿದ್ದ ಕೆಲ ಯುವತಿಯರನ್ನು ಸುರಕ್ಷಿತವಾಗಿ ಹೊರತೆಗೆದಿರುವುದಾಗಿ ತಿಳಿದುಬಂದಿದೆ. ಅಲ್ಲದೆ, ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

ಶಾಂತಿ ಮತ್ತು ಉತ್ತಮ ವಸತಿ ಪ್ರದೇಶವೆಂದು ಗುರುತಿಸಿಕೊಂಡಿರುವ ಐಪಿಎಸ್ ಲೇಔಟ್‌ನಲ್ಲಿ ಇಂತಹ ಅಕ್ರಮ ರೇವ್ ಪಾರ್ಟಿ ನಡೆದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಈ ಜಾಲದ ಹಿಂದಿರುವ ಪ್ರಮುಖ ಸಂಘಟಕರು ಯಾರು ಹಾಗೂ ಇನ್ನಷ್ಟು ಮಂದಿ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಒಂಟಿ ಯುವತಿಯ ಮನೆಗೆ ನುಗ್ಗಲು ಯತ್ನಿಸಿದ ಡೆಲಿವರಿ ಬಾಯ್? ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆ!

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…

23 hours ago

ಪ್ಯಾಕಿಂಗ್ ಕೆಲಸದ ಆಮಿಷಕ್ಕೆ ಕೋಟಿ ಕೋಟಿ ವಂಚನೆ: ದಂಪತಿ ಬಂಧನ, ಹಲವು ಜಿಲ್ಲೆಗಳಲ್ಲಿ ಪ್ರಕರಣ ದಾಖಲು!

ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…

23 hours ago

₹5 ಲಕ್ಷ ಸಾಲ ವಾಪಸ್ ಕೇಳಿದ್ದಕ್ಕೆ ರೇಪ್ ಕೇಸ್ ಬೆದರಿಕೆ? ಮಾನಸಿಕ ಕಿರುಕುಳಕ್ಕೆ ನೊಂದು ಯುವಕ ಆತ್ಮಹತ್ಯೆ; ಕುಟುಂಬದ ಗಂಭೀರ ಆರೋಪ

ಮಂಡ್ಯ: ಸಾಲವಾಗಿ ನೀಡಿದ್ದ ಹಣವನ್ನು ಮರಳಿ ಕೇಳಿದ್ದಕ್ಕೆ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ ವಿವಾಹಿತೆಯ ಮಾನಸಿಕ ಕಿರುಕುಳದಿಂದ…

23 hours ago

ಹುಟ್ಟುಹಬ್ಬದ ಸಂಭ್ರಮ ದುರಂತದಲ್ಲಿ ಅಂತ್ಯ: ನೆಲಮಂಗಲದಲ್ಲಿ ಕಾರು ಪಲ್ಟಿ, ಇಬ್ಬರು ಸಾವು..!

ಬೆಂಗಳೂರು ಗ್ರಾಮಾಂತರ: ಹುಟ್ಟುಹಬ್ಬದ ಸಂಭ್ರಮ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಸ್ನೇಹಿತರ ತಂಡ ಭೀಕರ ರಸ್ತೆ ಅಪಘಾತಕ್ಕೆ ಗುರಿಯಾಗಿದ್ದು, ಇಬ್ಬರು…

23 hours ago

ರೋಡ್ ರೇಜ್ ವಿವಾದದ ಬಳಿಕ ಮಾಲೂರು ನ್ಯಾಯಾಧೀಶೆ ಗಾಯತ್ರಿಗೆ ಬೀದರ್ ವರ್ಗಾವಣೆ; ಹೈಕೋರ್ಟ್ ಆಡಳಿತಾತ್ಮಕ ಕ್ರಮ

ಬೆಂಗಳೂರು: ಸಾರ್ವಜನಿಕರೊಂದಿಗೆ ರಸ್ತೆ ಮಧ್ಯೆ ಮಾತಿನ ಚಕಮಕಿ ನಡೆಸಿ ಅಧಿಕಾರ ದುರ್ಬಳಕೆ ಆರೋಪಕ್ಕೆ ಗುರಿಯಾಗಿದ್ದ ಹಾಗೂ ಹೈಕೋರ್ಟ್‌ನಿಂದ ತೀವ್ರ ತರಾಟೆಗೆ…

23 hours ago

ರಾಪಿಡೋ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿಯ ಬದುಕೇ ಚಿಂದಿ: 20 ಲಕ್ಷ ಚಿಕಿತ್ಸಾ ವೆಚ್ಚ, ನ್ಯಾಯಕ್ಕಾಗಿ ಕಣ್ಣೀರಿನ ಹೋರಾಟ!

ಬೆಂಗಳೂರು: ಆನ್‌ಲೈನ್ ಬೈಕ್ ಟ್ಯಾಕ್ಸಿ ಸೇವೆಗಳ ಸುರಕ್ಷತೆ ಕುರಿತು ಮತ್ತೆ ಪ್ರಶ್ನೆಗಳು ಮೂಡುವಂತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಪಿಡೋ ಬೈಕ್…

23 hours ago