Latest

ಮುಸ್ಲಿಂ ಧರ್ಮಕ್ಕೆ ಮತಾಂತರ ಆಗುವಂತೆ ಹಿಂದು ಮಂಗಳಮುಖಿಯರಿಗೆ ಒತ್ತಾಯ, ಒಪ್ಪದವರಿಗೆ ಎಚ್ಐವಿ ಸೋಂಕಿಗೆ ಗುರಿ.

ಇಂದೋರ್: ಇಂದೋರ್‌ನ ನಂದಲಾಲ್‌ಪುರ ಪ್ರದೇಶದಲ್ಲಿ ಮಂಗಳಮುಖಿ ಸಮುದಾಯದೊಳಗೆ ತೀವ್ರ ಸಂಘರ್ಷ ಮತ್ತು ಆಘಾತಕಾರಿ ಆರೋಪಗಳು ಬೆಳಕಿಗೆ ಬಂದಿವೆ. ಕೆಲವು ಮುಸ್ಲಿಂ ಮಂಗಳಮುಖಿ ಸದಸ್ಯರು, ಹಿಂದೂ ಮಂಗಳಮುಖಿ ವ್ಯಕ್ತಿಗಳನ್ನು ಇಸ್ಲಾಂ ಧರ್ಮಕ್ಕೆ ಬಲವಂತವಾಗಿ ಮತಾಂತರಗೊಳಿಸಲು ಒತ್ತಾಯಿಸಿದ್ದಾರೆಯೆಂಬ ಆರೋಪ ಕೇಳಿಬಂದಿದೆ. ಅದಕ್ಕೂ ಹೆಷಾರಾಗಿ, ಮತಾಂತರಕ್ಕೆ ಒಪ್ಪದವರ ಮೇಲೆ HIV ಸೋಂಕಿತ ಸಿರಿಂಜ್‌ಗಳ ಮೂಲಕ ಉದ್ದೇಶಪೂರ್ವಕವಾಗಿ ಸೋಂಕು ಹರಡಿಸಿರುವುದು ಗುಡುಗು ಹಾಕುವಂತಹ ವಿಷಯವಾಗಿದೆ.

ಈ ಆರೋಪಗಳು ಪ್ರಸಾರವಾದ ಬಳಿಕ ಮಂಗಳಮುಖಿ ಸಮುದಾಯದಲ್ಲಿ ಭಯ ಮತ್ತು ಉದ್ವಿಗ್ನತೆ ಹೆಚ್ಚಾಗಿದೆ. ಇಂದೋರ್ ಪೊಲೀಸ್ ಆಯುಕ್ತ ಸಂತೋಷ್ ಕುಮಾರ್ ಸಿಂಗ್ ಅವರು ಈ ಪ್ರಕರಣದ ಗಂಭೀರತೆ ಗಮನಿಸಿ, ವಿಶೇಷ ತನಿಖಾ ತಂಡ (SIT) ರಚಿಸಿದ್ದಾರೆ. ತನಿಖಾ ತಂಡದಲ್ಲಿ DCP ರಿಷಿಕೇಶ್ ಮೀನಾ, ಡಿಷೆಸ್ ಅಗರವಾಲ್, IPS ಅಧಿಕಾರಿ ಆದಿತ್ಯ ಪಟೇಲ್ ಮತ್ತು ACP ಹೇಮಂತ್ ಚೌಹಾನ್ ಸೇರಿದ್ದಾರೆ.

ಆರೋಪಗಳ ಪ್ರಕಾರ, ಮಲೆಗಾಂವಿನ ಪಾಯಲ್ ಎನಿಸಿಕೊಂಡ ನಯೀಮ್ ಅನ್ಸಾರಿ ಮತ್ತು ಸೀಮಾ ಹಾಜಿ ಎಂಬ ಹೆಸರಿನಲ್ಲಿ ಗುರುತಿಸಲಾದ ಫರ್ಜಾನಾ ಈ ಮತಾಂತರ ಚಟುವಟಿಕೆಗೆ ಮುಂದಾಳತ್ವ ನೀಡುತ್ತಿದ್ದಾರೆ. ಸಕೀನಾ ಗುರು ಎಂಬವರು ತಮ್ಮ ಹಾಗೂ ತಮ್ಮ ಗುಂಪಿನ ಸದಸ್ಯರ ಅನುಭವದ ವಿವರಗಳನ್ನು ಹಂಚಿಕೊಂಡು, ಮತಾಂತರದ ಒತ್ತಡವನ್ನು ತಳ್ಳಿಹಾಕಿದ ಬಳಿಕ ಅವರೇ HIV ಸೋಂಕಿತ ಸಿರಿಂಜ್‌ಗಳಿಂದ ಇಂಜೆಕ್ಷನ್ ಪಡೆದಿರುವುದಾಗಿ ಆರೋಪಿಸಿದ್ದಾರೆ.

ಈ ಘಟನೆಯಿಂದಾಗಿ ಸುಮಾರು 60ಕ್ಕೂ ಹೆಚ್ಚು ಮಂದಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದ್ದು, ಅವರಲ್ಲಿ 12 ಮಂದಿ ಇಂದೋರ್‌ನ ಮಹಾರಾಜ ಯಶವಂತ್‌ ರಾವ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಲ್ಲಿ ART ಕೇಂದ್ರದಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಪ್ರಕರಣ ಸಂಬಂಧ ಇಂದಾಗಲೇ ವಿಜಯ್ ನಗರ ಮತ್ತು ಚಂದನ್ ನಗರ ಪೊಲೀಸ್ ಠಾಣೆಗಳಲ್ಲಿ ದೈಹಿಕ ದಾಳಿ, ಅಪಹರಣ ಮತ್ತು ಬೆದರಿಕೆ ಸಂಬಂಧಿತ ಹಲವಾರು ದೂರುಗಳು ದಾಖಲಾಗಿವೆ. ಸಕೀನಾ ಗುರು ಅವರು ಮಾಹಿತಿ ನೀಡಿದಂತೆ, ಅವರ ಗುಂಪಿನ ಹಲವರು ಈಗಾಗಲೇ ಭಯದಿಂದಾಗಿ ಇಂದೋರ್ ನಗರವನ್ನು ತೊರೆದು ಹೋಗಿದ್ದಾರೆ.

ಸಮುದಾಯದೊಳಗಿನ ಧಾರ್ಮಿಕ ನಿಲುವು ಮತ್ತು ಬಲವಂತದ ಧರ್ಮಾಂತರಕ್ಕೆ ಸಂಬಂಧಿಸಿದ ಈ ಬೆಳವಣಿಗೆಗಳು ಸಾಮಾಜಿಕವಾಗಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಪೊಲೀಸರು ನ್ಯಾಯಪ್ರಕ್ರಿಯೆಯ ಮೂಲಕ ಸತ್ಯ ಹೊರತೆಗೆಯಲು ಸಿದ್ಧತೆ ನಡೆಸುತ್ತಿದ್ದಾರೆ.

ತನಿಖೆ ಮುಂದುವರಿದಿರುವ ಹಿನ್ನೆಲೆಯಲ್ಲಿ, ಈ ಆರೋಪಗಳ ಸತ್ಯಾಸತ್ಯತೆ ಶೀಘ್ರದಲ್ಲೇ ಬೆಳಕಿಗೆ ಬರುವ ನಿರೀಕ್ಷೆಯಿದೆ.

nazeer ahamad

Recent Posts

ರೀಲ್ಸ್ ಹುಚ್ಚಾಟದ ದುರಂತ: ಹುಬ್ಬಳ್ಳಿಯಲ್ಲಿ ಬಾಲಕ ಸಾವು – ಇಬ್ಬರ ಬಂಧನ

ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…

3 hours ago

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

16 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

17 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

1 day ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

1 day ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

1 day ago