Latest

ಮುಸ್ಲಿಂ ಧರ್ಮಕ್ಕೆ ಮತಾಂತರ ಆಗುವಂತೆ ಹಿಂದು ಮಂಗಳಮುಖಿಯರಿಗೆ ಒತ್ತಾಯ, ಒಪ್ಪದವರಿಗೆ ಎಚ್ಐವಿ ಸೋಂಕಿಗೆ ಗುರಿ.

ಇಂದೋರ್: ಇಂದೋರ್‌ನ ನಂದಲಾಲ್‌ಪುರ ಪ್ರದೇಶದಲ್ಲಿ ಮಂಗಳಮುಖಿ ಸಮುದಾಯದೊಳಗೆ ತೀವ್ರ ಸಂಘರ್ಷ ಮತ್ತು ಆಘಾತಕಾರಿ ಆರೋಪಗಳು ಬೆಳಕಿಗೆ ಬಂದಿವೆ. ಕೆಲವು ಮುಸ್ಲಿಂ ಮಂಗಳಮುಖಿ ಸದಸ್ಯರು, ಹಿಂದೂ ಮಂಗಳಮುಖಿ ವ್ಯಕ್ತಿಗಳನ್ನು ಇಸ್ಲಾಂ ಧರ್ಮಕ್ಕೆ ಬಲವಂತವಾಗಿ ಮತಾಂತರಗೊಳಿಸಲು ಒತ್ತಾಯಿಸಿದ್ದಾರೆಯೆಂಬ ಆರೋಪ ಕೇಳಿಬಂದಿದೆ. ಅದಕ್ಕೂ ಹೆಷಾರಾಗಿ, ಮತಾಂತರಕ್ಕೆ ಒಪ್ಪದವರ ಮೇಲೆ HIV ಸೋಂಕಿತ ಸಿರಿಂಜ್‌ಗಳ ಮೂಲಕ ಉದ್ದೇಶಪೂರ್ವಕವಾಗಿ ಸೋಂಕು ಹರಡಿಸಿರುವುದು ಗುಡುಗು ಹಾಕುವಂತಹ ವಿಷಯವಾಗಿದೆ.

ಈ ಆರೋಪಗಳು ಪ್ರಸಾರವಾದ ಬಳಿಕ ಮಂಗಳಮುಖಿ ಸಮುದಾಯದಲ್ಲಿ ಭಯ ಮತ್ತು ಉದ್ವಿಗ್ನತೆ ಹೆಚ್ಚಾಗಿದೆ. ಇಂದೋರ್ ಪೊಲೀಸ್ ಆಯುಕ್ತ ಸಂತೋಷ್ ಕುಮಾರ್ ಸಿಂಗ್ ಅವರು ಈ ಪ್ರಕರಣದ ಗಂಭೀರತೆ ಗಮನಿಸಿ, ವಿಶೇಷ ತನಿಖಾ ತಂಡ (SIT) ರಚಿಸಿದ್ದಾರೆ. ತನಿಖಾ ತಂಡದಲ್ಲಿ DCP ರಿಷಿಕೇಶ್ ಮೀನಾ, ಡಿಷೆಸ್ ಅಗರವಾಲ್, IPS ಅಧಿಕಾರಿ ಆದಿತ್ಯ ಪಟೇಲ್ ಮತ್ತು ACP ಹೇಮಂತ್ ಚೌಹಾನ್ ಸೇರಿದ್ದಾರೆ.

ಆರೋಪಗಳ ಪ್ರಕಾರ, ಮಲೆಗಾಂವಿನ ಪಾಯಲ್ ಎನಿಸಿಕೊಂಡ ನಯೀಮ್ ಅನ್ಸಾರಿ ಮತ್ತು ಸೀಮಾ ಹಾಜಿ ಎಂಬ ಹೆಸರಿನಲ್ಲಿ ಗುರುತಿಸಲಾದ ಫರ್ಜಾನಾ ಈ ಮತಾಂತರ ಚಟುವಟಿಕೆಗೆ ಮುಂದಾಳತ್ವ ನೀಡುತ್ತಿದ್ದಾರೆ. ಸಕೀನಾ ಗುರು ಎಂಬವರು ತಮ್ಮ ಹಾಗೂ ತಮ್ಮ ಗುಂಪಿನ ಸದಸ್ಯರ ಅನುಭವದ ವಿವರಗಳನ್ನು ಹಂಚಿಕೊಂಡು, ಮತಾಂತರದ ಒತ್ತಡವನ್ನು ತಳ್ಳಿಹಾಕಿದ ಬಳಿಕ ಅವರೇ HIV ಸೋಂಕಿತ ಸಿರಿಂಜ್‌ಗಳಿಂದ ಇಂಜೆಕ್ಷನ್ ಪಡೆದಿರುವುದಾಗಿ ಆರೋಪಿಸಿದ್ದಾರೆ.

ಈ ಘಟನೆಯಿಂದಾಗಿ ಸುಮಾರು 60ಕ್ಕೂ ಹೆಚ್ಚು ಮಂದಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದ್ದು, ಅವರಲ್ಲಿ 12 ಮಂದಿ ಇಂದೋರ್‌ನ ಮಹಾರಾಜ ಯಶವಂತ್‌ ರಾವ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಲ್ಲಿ ART ಕೇಂದ್ರದಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಪ್ರಕರಣ ಸಂಬಂಧ ಇಂದಾಗಲೇ ವಿಜಯ್ ನಗರ ಮತ್ತು ಚಂದನ್ ನಗರ ಪೊಲೀಸ್ ಠಾಣೆಗಳಲ್ಲಿ ದೈಹಿಕ ದಾಳಿ, ಅಪಹರಣ ಮತ್ತು ಬೆದರಿಕೆ ಸಂಬಂಧಿತ ಹಲವಾರು ದೂರುಗಳು ದಾಖಲಾಗಿವೆ. ಸಕೀನಾ ಗುರು ಅವರು ಮಾಹಿತಿ ನೀಡಿದಂತೆ, ಅವರ ಗುಂಪಿನ ಹಲವರು ಈಗಾಗಲೇ ಭಯದಿಂದಾಗಿ ಇಂದೋರ್ ನಗರವನ್ನು ತೊರೆದು ಹೋಗಿದ್ದಾರೆ.

ಸಮುದಾಯದೊಳಗಿನ ಧಾರ್ಮಿಕ ನಿಲುವು ಮತ್ತು ಬಲವಂತದ ಧರ್ಮಾಂತರಕ್ಕೆ ಸಂಬಂಧಿಸಿದ ಈ ಬೆಳವಣಿಗೆಗಳು ಸಾಮಾಜಿಕವಾಗಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಪೊಲೀಸರು ನ್ಯಾಯಪ್ರಕ್ರಿಯೆಯ ಮೂಲಕ ಸತ್ಯ ಹೊರತೆಗೆಯಲು ಸಿದ್ಧತೆ ನಡೆಸುತ್ತಿದ್ದಾರೆ.

ತನಿಖೆ ಮುಂದುವರಿದಿರುವ ಹಿನ್ನೆಲೆಯಲ್ಲಿ, ಈ ಆರೋಪಗಳ ಸತ್ಯಾಸತ್ಯತೆ ಶೀಘ್ರದಲ್ಲೇ ಬೆಳಕಿಗೆ ಬರುವ ನಿರೀಕ್ಷೆಯಿದೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

15 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

21 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

21 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago