Latest

ಮುಸ್ಲಿಂ ಧರ್ಮಕ್ಕೆ ಮತಾಂತರ ಆಗುವಂತೆ ಹಿಂದು ಮಂಗಳಮುಖಿಯರಿಗೆ ಒತ್ತಾಯ, ಒಪ್ಪದವರಿಗೆ ಎಚ್ಐವಿ ಸೋಂಕಿಗೆ ಗುರಿ.

ಇಂದೋರ್: ಇಂದೋರ್‌ನ ನಂದಲಾಲ್‌ಪುರ ಪ್ರದೇಶದಲ್ಲಿ ಮಂಗಳಮುಖಿ ಸಮುದಾಯದೊಳಗೆ ತೀವ್ರ ಸಂಘರ್ಷ ಮತ್ತು ಆಘಾತಕಾರಿ ಆರೋಪಗಳು ಬೆಳಕಿಗೆ ಬಂದಿವೆ. ಕೆಲವು ಮುಸ್ಲಿಂ ಮಂಗಳಮುಖಿ ಸದಸ್ಯರು, ಹಿಂದೂ ಮಂಗಳಮುಖಿ ವ್ಯಕ್ತಿಗಳನ್ನು ಇಸ್ಲಾಂ ಧರ್ಮಕ್ಕೆ ಬಲವಂತವಾಗಿ ಮತಾಂತರಗೊಳಿಸಲು ಒತ್ತಾಯಿಸಿದ್ದಾರೆಯೆಂಬ ಆರೋಪ ಕೇಳಿಬಂದಿದೆ. ಅದಕ್ಕೂ ಹೆಷಾರಾಗಿ, ಮತಾಂತರಕ್ಕೆ ಒಪ್ಪದವರ ಮೇಲೆ HIV ಸೋಂಕಿತ ಸಿರಿಂಜ್‌ಗಳ ಮೂಲಕ ಉದ್ದೇಶಪೂರ್ವಕವಾಗಿ ಸೋಂಕು ಹರಡಿಸಿರುವುದು ಗುಡುಗು ಹಾಕುವಂತಹ ವಿಷಯವಾಗಿದೆ.

ಈ ಆರೋಪಗಳು ಪ್ರಸಾರವಾದ ಬಳಿಕ ಮಂಗಳಮುಖಿ ಸಮುದಾಯದಲ್ಲಿ ಭಯ ಮತ್ತು ಉದ್ವಿಗ್ನತೆ ಹೆಚ್ಚಾಗಿದೆ. ಇಂದೋರ್ ಪೊಲೀಸ್ ಆಯುಕ್ತ ಸಂತೋಷ್ ಕುಮಾರ್ ಸಿಂಗ್ ಅವರು ಈ ಪ್ರಕರಣದ ಗಂಭೀರತೆ ಗಮನಿಸಿ, ವಿಶೇಷ ತನಿಖಾ ತಂಡ (SIT) ರಚಿಸಿದ್ದಾರೆ. ತನಿಖಾ ತಂಡದಲ್ಲಿ DCP ರಿಷಿಕೇಶ್ ಮೀನಾ, ಡಿಷೆಸ್ ಅಗರವಾಲ್, IPS ಅಧಿಕಾರಿ ಆದಿತ್ಯ ಪಟೇಲ್ ಮತ್ತು ACP ಹೇಮಂತ್ ಚೌಹಾನ್ ಸೇರಿದ್ದಾರೆ.

ಆರೋಪಗಳ ಪ್ರಕಾರ, ಮಲೆಗಾಂವಿನ ಪಾಯಲ್ ಎನಿಸಿಕೊಂಡ ನಯೀಮ್ ಅನ್ಸಾರಿ ಮತ್ತು ಸೀಮಾ ಹಾಜಿ ಎಂಬ ಹೆಸರಿನಲ್ಲಿ ಗುರುತಿಸಲಾದ ಫರ್ಜಾನಾ ಈ ಮತಾಂತರ ಚಟುವಟಿಕೆಗೆ ಮುಂದಾಳತ್ವ ನೀಡುತ್ತಿದ್ದಾರೆ. ಸಕೀನಾ ಗುರು ಎಂಬವರು ತಮ್ಮ ಹಾಗೂ ತಮ್ಮ ಗುಂಪಿನ ಸದಸ್ಯರ ಅನುಭವದ ವಿವರಗಳನ್ನು ಹಂಚಿಕೊಂಡು, ಮತಾಂತರದ ಒತ್ತಡವನ್ನು ತಳ್ಳಿಹಾಕಿದ ಬಳಿಕ ಅವರೇ HIV ಸೋಂಕಿತ ಸಿರಿಂಜ್‌ಗಳಿಂದ ಇಂಜೆಕ್ಷನ್ ಪಡೆದಿರುವುದಾಗಿ ಆರೋಪಿಸಿದ್ದಾರೆ.

ಈ ಘಟನೆಯಿಂದಾಗಿ ಸುಮಾರು 60ಕ್ಕೂ ಹೆಚ್ಚು ಮಂದಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದ್ದು, ಅವರಲ್ಲಿ 12 ಮಂದಿ ಇಂದೋರ್‌ನ ಮಹಾರಾಜ ಯಶವಂತ್‌ ರಾವ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಲ್ಲಿ ART ಕೇಂದ್ರದಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಪ್ರಕರಣ ಸಂಬಂಧ ಇಂದಾಗಲೇ ವಿಜಯ್ ನಗರ ಮತ್ತು ಚಂದನ್ ನಗರ ಪೊಲೀಸ್ ಠಾಣೆಗಳಲ್ಲಿ ದೈಹಿಕ ದಾಳಿ, ಅಪಹರಣ ಮತ್ತು ಬೆದರಿಕೆ ಸಂಬಂಧಿತ ಹಲವಾರು ದೂರುಗಳು ದಾಖಲಾಗಿವೆ. ಸಕೀನಾ ಗುರು ಅವರು ಮಾಹಿತಿ ನೀಡಿದಂತೆ, ಅವರ ಗುಂಪಿನ ಹಲವರು ಈಗಾಗಲೇ ಭಯದಿಂದಾಗಿ ಇಂದೋರ್ ನಗರವನ್ನು ತೊರೆದು ಹೋಗಿದ್ದಾರೆ.

ಸಮುದಾಯದೊಳಗಿನ ಧಾರ್ಮಿಕ ನಿಲುವು ಮತ್ತು ಬಲವಂತದ ಧರ್ಮಾಂತರಕ್ಕೆ ಸಂಬಂಧಿಸಿದ ಈ ಬೆಳವಣಿಗೆಗಳು ಸಾಮಾಜಿಕವಾಗಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಪೊಲೀಸರು ನ್ಯಾಯಪ್ರಕ್ರಿಯೆಯ ಮೂಲಕ ಸತ್ಯ ಹೊರತೆಗೆಯಲು ಸಿದ್ಧತೆ ನಡೆಸುತ್ತಿದ್ದಾರೆ.

ತನಿಖೆ ಮುಂದುವರಿದಿರುವ ಹಿನ್ನೆಲೆಯಲ್ಲಿ, ಈ ಆರೋಪಗಳ ಸತ್ಯಾಸತ್ಯತೆ ಶೀಘ್ರದಲ್ಲೇ ಬೆಳಕಿಗೆ ಬರುವ ನಿರೀಕ್ಷೆಯಿದೆ.

nazeer ahamad

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

6 hours ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

6 hours ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

6 hours ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

6 hours ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

6 hours ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

6 hours ago