Categories: CrimeLatest

ವಿವಾಹಿತ ಮುಸ್ಲಿಂ ಚಾಲಕನೊಂದಿಗೆ ಹಿಂದೂ ಯುವತಿ ಪರಾರಿ: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಯುವತಿ ನಾಪತ್ತೆಯಾದ ಪ್ರಕರಣೊಂದು ಇದೀಗ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಧಾರವಾಡ ಜಿಲ್ಲೆಯ ಕೆಲಗೇರಿ ನಿವಾಸಿಯಾದ 22 ವರ್ಷದ ತಂಗೆಮ್ಮಾ ಎಂಬ ಯುವತಿ, ಪರಿಚಿತನಾದ ವ್ಯಕ್ತಿಯೊಂದಿಗೆ ನಾಪತ್ತೆಯಾಗಿರುವುದಾಗಿ ಕುಟುಂಬದವರು ಆರೋಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆ ಖರೀದಿ ಹೆಸರಿನಲ್ಲಿ ನೀಡಿದ್ದ 10 ಲಕ್ಷ ರೂಪಾಯಿಯೂ ಕಳೆದುಹೋಗಿರುವುದು ಕುಟುಂಬದ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.

ಯುವತಿಯ ತಾಯಿ ಮಂಜುಳಾ ಅವರ ಪ್ರಕಾರ, ತಮ್ಮ ಮಗಳು ಮುನ್ನಾ ಎಂಬ ಕಾರು ಚಾಲಕನೊಂದಿಗೆ ಪರಿಚಯ ಹೊಂದಿದ್ದಳು. ಅವರು ಕೆಲಸ ಮಾಡುತ್ತಿದ್ದ ವಕೀಲರ ಮೂಲಕ ಮುನ್ನಾ ಪರಿಚಯವಾಗಿದ್ದನು. ಕುಟುಂಬವು ಸ್ವಂತ ಮನೆ ಖರೀದಿಸಲು ಉದ್ದೇಶಿಸಿ, ಮುನ್ನಾ ಹಾಗೂ ವಕೀಲರಿಗೆ ಸುಮಾರು 10 ಲಕ್ಷ ರೂಪಾಯಿ ನೀಡಿದ್ದಾಗಿ ಅವರು ತಿಳಿಸಿದ್ದಾರೆ.

2023ರಲ್ಲಿ ಕುಟುಂಬದವರು ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ, ಮುನ್ನಾ ತಮ್ಮ ಮಗಳನ್ನು ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ ಎಂದು ತಾಯಿ ಆರೋಪಿಸಿದ್ದಾರೆ. ಈ ಕುರಿತು ಧಾರವಾಡ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದರೂ, ಆರೋಪಿಯ ವಿರುದ್ಧ ಪ್ರಕರಣ ದಾಖಲಿಸದೇ ಕೇವಲ ನಾಪತ್ತೆ ಪ್ರಕರಣವಾಗಿ ದಾಖಲಿಸಿಕೊಂಡಿದ್ದಾರೆ ಎಂಬ ಅಸಮಾಧಾನವನ್ನು ಅವರು ವ್ಯಕ್ತಪಡಿಸಿದ್ದಾರೆ.

ಎರಡು ವರ್ಷಗಳಾದರೂ ತಮ್ಮ ಮಗಳ ಪತ್ತೆಗೆ ಯಾವುದೇ ಸ್ಪಷ್ಟ ಸುಳಿವು ಸಿಕ್ಕಿಲ್ಲ ಎಂದು ಕುಟುಂಬದವರು ದೂರಿದ್ದಾರೆ. ಆರಂಭದಲ್ಲಿ ಪೊಲೀಸರು ಹೈದರಾಬಾದ್ ಸೇರಿದಂತೆ ವಿವಿಧ ಕಡೆಗಳಲ್ಲಿ ಹುಡುಕಾಟ ನಡೆಸಿದರೂ, ನಂತರ ಆರೋಪಿ ಸಿಮ್ ಕಾರ್ಡ್ ಬದಲಾಯಿಸಿಕೊಂಡು ಸಂಪರ್ಕ ಕಡಿತಗೊಳಿಸಿದ್ದರಿಂದ ಪತ್ತೆ ಕಷ್ಟವಾಗುತ್ತಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ಆತಂಕಕಾರಿ ಸಂಗತಿಯೆಂದರೆ, ಮುನ್ನಾ ಈಗಾಗಲೇ ವಿವಾಹಿತನಾಗಿದ್ದು, ಇಬ್ಬರು ಮಕ್ಕಳ ತಂದೆಯೂ ಆಗಿದ್ದಾನೆ ಎಂಬ ಮಾಹಿತಿ ಬಹಿರಂಗವಾಗಿದೆ. ಅಲ್ಲದೆ, ಆತನ ವಿರುದ್ಧ ಇತರ ಪ್ರದೇಶಗಳಲ್ಲಿ ಗಂಭೀರ ಆರೋಪಗಳೂ ಇರುವುದಾಗಿ ತಿಳಿದುಬಂದಿದೆ.

ತಮ್ಮ ಮಗಳನ್ನು ಪತ್ತೆಹಚ್ಚಿ ನೀಡುವಂತೆ ಮಂಜುಳಾ ಅವರು ಹಲವು ಬಾರಿ ಪೊಲೀಸರಿಗೆ ಮನವಿ ಮಾಡಿದರೂ ಪ್ರಯೋಜನವಾಗದ ಹಿನ್ನೆಲೆಯಲ್ಲಿ, ಇದೀಗ ಅವರು ಪೊಲೀಸ್ ಕಮಿಷನರ್‌ರಿಗೆ ದೂರು ಸಲ್ಲಿಸಿದ್ದಾರೆ. ಪ್ರಕರಣದ ಸಮಗ್ರ ತನಿಖೆ ನಡೆಸಿ, ಯುವತಿಯನ್ನು ಸುರಕ್ಷಿತವಾಗಿ ಮರಳಿ ತರಬೇಕೆಂದು ಕುಟುಂಬದವರು ಒತ್ತಾಯಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

19 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

19 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

19 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

19 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

19 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

19 hours ago