Latest

ಅವ್ಯವಸ್ಥೆಗೆ ಗುರಿಯಾದ ಹಿರೇ ಹಡಗಲಿ ಬಸ್ ನಿಲ್ದಾಣ.

ಕರ್ನಾಟಕ ರಾಜ್ಯ ಸರ್ಕಾರದ ಆಡಳಿತದಲ್ಲಿ ಬರುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹೊಸಪೇಟೆ ವಿಭಾಗದಲ್ಲಿ ಬರುವಂತಹ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಹಿರೇ ಹಡಗಲಿ ಬಸ್ ನಿಲ್ದಾಣವನ್ನು ಒಮ್ಮೆ ನೋಡಿದರೆ ತುಂಬಾ ಬೇಸರವಾಗುತ್ತಿದೆ. ಈ ಬಸ್ ನಿಲ್ದಾಣ ಕಳೆದ 1987 ರಲ್ಲಿ ಶ್ರೀ ಸಿದ್ದರಾಮಯ್ಯರವರ ಅದ್ಯೆಕ್ಷ್ಯೆತೆಯಲ್ಲಿ ( ಸಾರಿಗೆ ಸಚಿವರು ) ಉದ್ಘಾಟನೆ ಆಗಿತ್ತು ಆದರೇ ಈಗ ಈ ಬಸ್ ನಿಲ್ದಾಣದಲ್ಲಿ ಹೇಳೋರು ಕೇಳೋರು ಯಾರೂ ಇಲ್ಲಾ ಇಲ್ಲಿ ಬಸ್ ಇದ್ದರೂ ಕೂಡಾ ಸರಿಯಾಗಿ ಬಸ್ ಗಳು ಒಳಗಡೆ ಬರುತ್ತಿಲ್ಲ ಸ್ವಚ್ಚತೆಯಂತೂ ಕೇಳಬೇಡಿ ಎಲ್ಲೆಂದರಲ್ಲಿ ಧೂಳು ಮಣ್ಣಿನಿಂದ ಕೂಡಿರುತ್ತದೆ ಬಸ್ ನಿಲ್ದಾಣದಲ್ಲಿ ಅಲ್ಲಲ್ಲಿ ಕಸ ಬಿದ್ದಿರುತ್ತದೆ ಬಸ್ ನಿಲ್ದಾಣದ ಆವರಣದಲ್ಲಿ ಕಸದ ಗಿಡಗಳು ಬೆಳೆದಿರುತ್ತವೆ ಶೌಚಾಲಯ ವಿಚಾರ ನೋಡಿದ್ರೆ ಅಯ್ಯೋ ಎನ್ನುವ ಹಾಗೇ ಇದೆ ಹೆಸರಿಗಷ್ಟೇ ಶೌಚಾಲಯ ಆದರೆ ಈ ಶೌಚಾಲಯಕ್ಕೆ ತೆರಳುವಾಗ ಮೆಟ್ಟಿಲುಗಳ ಮೇಲೆ ಕೆಲ ಕಿಡಿಗೇಡಿಗಳು ಎಲೆ ಅಡಿಕೆ ಗುಟ್ಕಾ ತಿಂದು ಎಲ್ಲೆಂದರಲ್ಲಿ ಉಗುಳಿರುತ್ತಾರೆ ಶೌಚಾಲಯದ 4 ಬಾಗಿಲುಗಳನ್ನು ಬಂದ್ ಮಾಡಿ ಒಂದನ್ನು ಚೀಲಕ ಹಾಕಿದ್ದಾರೆ ಅದು ಯಾವ ಕಾಲದಲ್ಲಿ ಸುಸಜ್ಜಿತವಾಗಿ ಪ್ರಯಾಣಿಕರಿಗೆ ಬಳಕೆ ಆಗುತ್ತಿತ್ತೋ ಗೊತ್ತಿಲ್ಲ ಯಾರೂ ಬಳಕೆ ಮಾಡದ ಕಾರಣ ಎಲ್ಲಾ ಕಡೆ ತುಂಬಾ ಧೂಳಿನಿಂದ ಕೂಡಿ ಜಾಡ ಕಟ್ಟಿದೆ.
ಇಲ್ಲಿ ಯಾವ ಬಸ್ ಎಷ್ಟೊತ್ತಿಗೆ ಬರುತ್ತೆ ಎಷ್ಟೊತ್ತಿಗೆ ಹೋಗಿದೆ ಎಂದು ಕೇಳಲು ಯಾವ ಸಾರಿಗೆ ನಿಯಂತ್ರಕರು ಇರುವುದಿಲ್ಲ ಇಲ್ಲಿನ ಸಾರಿಗೆ ನಿಯಂತ್ರಿಕರು ಸಂಭಂದ ಪಟ್ಟ ಅಧಿಕಾರಿಗಳು ತಮ್ಮ ಕರ್ತವ್ಯದ ಸಮಯದಲ್ಲಿ ಎಲ್ಲಿರುತ್ತಾರೋ ತಿಳಿಯುತ್ತಿಲ್ಲ.
ಇನ್ನೂ ಮೇಲಾದರೂ ಇಷ್ಟೆಲ್ಲಾ ಅವ್ಯವಸ್ಥೆಯಿಂದ ಕೂಡಿದ ಬಸ್ ನಿಲ್ದಾಣದ ಕಡೆ ಸಂಭಂದ ಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುತ್ತಾರಾ ಕಾದು ನೋಡಬೇಕಾಗಿದೆ.
ವರದಿ : ಶಿವರಾಜ್

ಭ್ರಷ್ಟರ ಬೇಟೆ

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago