Latest

ಅವ್ಯವಸ್ಥೆಗೆ ಗುರಿಯಾದ ಹಿರೇ ಹಡಗಲಿ ಬಸ್ ನಿಲ್ದಾಣ.

ಕರ್ನಾಟಕ ರಾಜ್ಯ ಸರ್ಕಾರದ ಆಡಳಿತದಲ್ಲಿ ಬರುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹೊಸಪೇಟೆ ವಿಭಾಗದಲ್ಲಿ ಬರುವಂತಹ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಹಿರೇ ಹಡಗಲಿ ಬಸ್ ನಿಲ್ದಾಣವನ್ನು ಒಮ್ಮೆ ನೋಡಿದರೆ ತುಂಬಾ ಬೇಸರವಾಗುತ್ತಿದೆ. ಈ ಬಸ್ ನಿಲ್ದಾಣ ಕಳೆದ 1987 ರಲ್ಲಿ ಶ್ರೀ ಸಿದ್ದರಾಮಯ್ಯರವರ ಅದ್ಯೆಕ್ಷ್ಯೆತೆಯಲ್ಲಿ ( ಸಾರಿಗೆ ಸಚಿವರು ) ಉದ್ಘಾಟನೆ ಆಗಿತ್ತು ಆದರೇ ಈಗ ಈ ಬಸ್ ನಿಲ್ದಾಣದಲ್ಲಿ ಹೇಳೋರು ಕೇಳೋರು ಯಾರೂ ಇಲ್ಲಾ ಇಲ್ಲಿ ಬಸ್ ಇದ್ದರೂ ಕೂಡಾ ಸರಿಯಾಗಿ ಬಸ್ ಗಳು ಒಳಗಡೆ ಬರುತ್ತಿಲ್ಲ ಸ್ವಚ್ಚತೆಯಂತೂ ಕೇಳಬೇಡಿ ಎಲ್ಲೆಂದರಲ್ಲಿ ಧೂಳು ಮಣ್ಣಿನಿಂದ ಕೂಡಿರುತ್ತದೆ ಬಸ್ ನಿಲ್ದಾಣದಲ್ಲಿ ಅಲ್ಲಲ್ಲಿ ಕಸ ಬಿದ್ದಿರುತ್ತದೆ ಬಸ್ ನಿಲ್ದಾಣದ ಆವರಣದಲ್ಲಿ ಕಸದ ಗಿಡಗಳು ಬೆಳೆದಿರುತ್ತವೆ ಶೌಚಾಲಯ ವಿಚಾರ ನೋಡಿದ್ರೆ ಅಯ್ಯೋ ಎನ್ನುವ ಹಾಗೇ ಇದೆ ಹೆಸರಿಗಷ್ಟೇ ಶೌಚಾಲಯ ಆದರೆ ಈ ಶೌಚಾಲಯಕ್ಕೆ ತೆರಳುವಾಗ ಮೆಟ್ಟಿಲುಗಳ ಮೇಲೆ ಕೆಲ ಕಿಡಿಗೇಡಿಗಳು ಎಲೆ ಅಡಿಕೆ ಗುಟ್ಕಾ ತಿಂದು ಎಲ್ಲೆಂದರಲ್ಲಿ ಉಗುಳಿರುತ್ತಾರೆ ಶೌಚಾಲಯದ 4 ಬಾಗಿಲುಗಳನ್ನು ಬಂದ್ ಮಾಡಿ ಒಂದನ್ನು ಚೀಲಕ ಹಾಕಿದ್ದಾರೆ ಅದು ಯಾವ ಕಾಲದಲ್ಲಿ ಸುಸಜ್ಜಿತವಾಗಿ ಪ್ರಯಾಣಿಕರಿಗೆ ಬಳಕೆ ಆಗುತ್ತಿತ್ತೋ ಗೊತ್ತಿಲ್ಲ ಯಾರೂ ಬಳಕೆ ಮಾಡದ ಕಾರಣ ಎಲ್ಲಾ ಕಡೆ ತುಂಬಾ ಧೂಳಿನಿಂದ ಕೂಡಿ ಜಾಡ ಕಟ್ಟಿದೆ.
ಇಲ್ಲಿ ಯಾವ ಬಸ್ ಎಷ್ಟೊತ್ತಿಗೆ ಬರುತ್ತೆ ಎಷ್ಟೊತ್ತಿಗೆ ಹೋಗಿದೆ ಎಂದು ಕೇಳಲು ಯಾವ ಸಾರಿಗೆ ನಿಯಂತ್ರಕರು ಇರುವುದಿಲ್ಲ ಇಲ್ಲಿನ ಸಾರಿಗೆ ನಿಯಂತ್ರಿಕರು ಸಂಭಂದ ಪಟ್ಟ ಅಧಿಕಾರಿಗಳು ತಮ್ಮ ಕರ್ತವ್ಯದ ಸಮಯದಲ್ಲಿ ಎಲ್ಲಿರುತ್ತಾರೋ ತಿಳಿಯುತ್ತಿಲ್ಲ.
ಇನ್ನೂ ಮೇಲಾದರೂ ಇಷ್ಟೆಲ್ಲಾ ಅವ್ಯವಸ್ಥೆಯಿಂದ ಕೂಡಿದ ಬಸ್ ನಿಲ್ದಾಣದ ಕಡೆ ಸಂಭಂದ ಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುತ್ತಾರಾ ಕಾದು ನೋಡಬೇಕಾಗಿದೆ.
ವರದಿ : ಶಿವರಾಜ್

ಭ್ರಷ್ಟರ ಬೇಟೆ

Recent Posts

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

17 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

21 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

21 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

21 hours ago

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಗೋಕುಲ ಗೌಡ ಸಾವು ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…

21 hours ago

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಹಳಿಯಾಳದ ಕಾಳಗಿನಕೊಪ್ಪ ಗ್ರಾಮದಲ್ಲಿ ಆತಂಕ

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…

21 hours ago