Latest

ಅವ್ಯವಸ್ಥೆಗೆ ಗುರಿಯಾದ ಹಿರೇ ಹಡಗಲಿ ಬಸ್ ನಿಲ್ದಾಣ.

ಕರ್ನಾಟಕ ರಾಜ್ಯ ಸರ್ಕಾರದ ಆಡಳಿತದಲ್ಲಿ ಬರುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹೊಸಪೇಟೆ ವಿಭಾಗದಲ್ಲಿ ಬರುವಂತಹ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಹಿರೇ ಹಡಗಲಿ ಬಸ್ ನಿಲ್ದಾಣವನ್ನು ಒಮ್ಮೆ ನೋಡಿದರೆ ತುಂಬಾ ಬೇಸರವಾಗುತ್ತಿದೆ. ಈ ಬಸ್ ನಿಲ್ದಾಣ ಕಳೆದ 1987 ರಲ್ಲಿ ಶ್ರೀ ಸಿದ್ದರಾಮಯ್ಯರವರ ಅದ್ಯೆಕ್ಷ್ಯೆತೆಯಲ್ಲಿ ( ಸಾರಿಗೆ ಸಚಿವರು ) ಉದ್ಘಾಟನೆ ಆಗಿತ್ತು ಆದರೇ ಈಗ ಈ ಬಸ್ ನಿಲ್ದಾಣದಲ್ಲಿ ಹೇಳೋರು ಕೇಳೋರು ಯಾರೂ ಇಲ್ಲಾ ಇಲ್ಲಿ ಬಸ್ ಇದ್ದರೂ ಕೂಡಾ ಸರಿಯಾಗಿ ಬಸ್ ಗಳು ಒಳಗಡೆ ಬರುತ್ತಿಲ್ಲ ಸ್ವಚ್ಚತೆಯಂತೂ ಕೇಳಬೇಡಿ ಎಲ್ಲೆಂದರಲ್ಲಿ ಧೂಳು ಮಣ್ಣಿನಿಂದ ಕೂಡಿರುತ್ತದೆ ಬಸ್ ನಿಲ್ದಾಣದಲ್ಲಿ ಅಲ್ಲಲ್ಲಿ ಕಸ ಬಿದ್ದಿರುತ್ತದೆ ಬಸ್ ನಿಲ್ದಾಣದ ಆವರಣದಲ್ಲಿ ಕಸದ ಗಿಡಗಳು ಬೆಳೆದಿರುತ್ತವೆ ಶೌಚಾಲಯ ವಿಚಾರ ನೋಡಿದ್ರೆ ಅಯ್ಯೋ ಎನ್ನುವ ಹಾಗೇ ಇದೆ ಹೆಸರಿಗಷ್ಟೇ ಶೌಚಾಲಯ ಆದರೆ ಈ ಶೌಚಾಲಯಕ್ಕೆ ತೆರಳುವಾಗ ಮೆಟ್ಟಿಲುಗಳ ಮೇಲೆ ಕೆಲ ಕಿಡಿಗೇಡಿಗಳು ಎಲೆ ಅಡಿಕೆ ಗುಟ್ಕಾ ತಿಂದು ಎಲ್ಲೆಂದರಲ್ಲಿ ಉಗುಳಿರುತ್ತಾರೆ ಶೌಚಾಲಯದ 4 ಬಾಗಿಲುಗಳನ್ನು ಬಂದ್ ಮಾಡಿ ಒಂದನ್ನು ಚೀಲಕ ಹಾಕಿದ್ದಾರೆ ಅದು ಯಾವ ಕಾಲದಲ್ಲಿ ಸುಸಜ್ಜಿತವಾಗಿ ಪ್ರಯಾಣಿಕರಿಗೆ ಬಳಕೆ ಆಗುತ್ತಿತ್ತೋ ಗೊತ್ತಿಲ್ಲ ಯಾರೂ ಬಳಕೆ ಮಾಡದ ಕಾರಣ ಎಲ್ಲಾ ಕಡೆ ತುಂಬಾ ಧೂಳಿನಿಂದ ಕೂಡಿ ಜಾಡ ಕಟ್ಟಿದೆ.
ಇಲ್ಲಿ ಯಾವ ಬಸ್ ಎಷ್ಟೊತ್ತಿಗೆ ಬರುತ್ತೆ ಎಷ್ಟೊತ್ತಿಗೆ ಹೋಗಿದೆ ಎಂದು ಕೇಳಲು ಯಾವ ಸಾರಿಗೆ ನಿಯಂತ್ರಕರು ಇರುವುದಿಲ್ಲ ಇಲ್ಲಿನ ಸಾರಿಗೆ ನಿಯಂತ್ರಿಕರು ಸಂಭಂದ ಪಟ್ಟ ಅಧಿಕಾರಿಗಳು ತಮ್ಮ ಕರ್ತವ್ಯದ ಸಮಯದಲ್ಲಿ ಎಲ್ಲಿರುತ್ತಾರೋ ತಿಳಿಯುತ್ತಿಲ್ಲ.
ಇನ್ನೂ ಮೇಲಾದರೂ ಇಷ್ಟೆಲ್ಲಾ ಅವ್ಯವಸ್ಥೆಯಿಂದ ಕೂಡಿದ ಬಸ್ ನಿಲ್ದಾಣದ ಕಡೆ ಸಂಭಂದ ಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುತ್ತಾರಾ ಕಾದು ನೋಡಬೇಕಾಗಿದೆ.
ವರದಿ : ಶಿವರಾಜ್

ಭ್ರಷ್ಟರ ಬೇಟೆ

Recent Posts

ಭ್ರೂಣಲಿಂಗ ಪತ್ತೆ–ಅಕ್ರಮ ಸ್ಕ್ಯಾನಿಂಗ್ ದಂಧೆ ಭಂಡಾಫೋಡ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಬಂಧನ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…

7 hours ago

₹15 ಲಕ್ಷ ಲಂಚ ಸ್ವೀಕರಿಸುವ ವೇಳೆ ಕೆಎಎಸ್ ಅಧಿಕಾರಿ ಬಲೆಗೆ; ಚಾಲಕನೊಂದಿಗೆ ಬಂಧನ

ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…

7 hours ago

ಪತ್ನಿಯ ದ್ರೋಹ ಗೊತ್ತಿದ್ದರೂ ಮಕ್ಕಳಿಗಾಗಿ ಸಹನೆ; ವಿಚ್ಛೇದನವೇ? ಹೊಸ ಬದುಕೇ? ಪತಿಯ ಪ್ರಶ್ನೆ ವೈರಲ್

ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…

9 hours ago

31 ವರ್ಷ ಜೈಲು ಜೀವನದ ನಂತರ ಹೊಸ ಹಾದಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ದೋಷಿ ಪೆರಾರಿವಾಲನ್ ಇದೀಗ ವಕೀಲ

ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…

9 hours ago

ಪತಿಯ ಅನೈತಿಕ ಸಂಬಂಧ, ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ; ಬಿಜೆಪಿ ಮುಖಂಡ ಬಂಧನ

ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…

9 hours ago

ಮದುವೆ ಹೆಸರಿನಲ್ಲಿ ₹10 ಕೋಟಿ ವಂಚನೆ ಆರೋಪ: ಬಿಗ್‌ಬಾಸ್ ಖ್ಯಾತಿಯ ಆಶು ರೆಡ್ಡಿ ವಿರುದ್ಧ ಪ್ರಕರಣ

ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್‌ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…

1 day ago