ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಎಂಬ ಕಾರಣಕ್ಕೆ ಪ್ರಿಯಕರನೊಂದಿಗೆ ಸೇರಿ ಸ್ವಂತ ತಮ್ಮನನ್ನೇ ಕೊಲೆ ಮಾಡಿ ಪರಾರಿಯಾಗಿದ್ದ ಹಂತಕಿ ಅಕ್ಕ ಹಾಗೂ ಪ್ರಿಯಕರ 8 ವರ್ಷದ ಬಳಿಕ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಬಿಜಾಪುರ ಮೂಲದ ಭಾಗ್ಯಶ್ರೀ(38) ಹಾಗೂ ಶಂಕರಪ್ಪ (42) ಬಂಧಿತ ಆರೋಪಿಗಳು. ಅಕ್ಕನ ಸಂಚಿಗೆ ಲಿಂಗರಾಜು (35) ಮೃತ ದುದೈವಿ. ರಾಯಚೂರಿನ ಕಾಲೇಜೊಂದರಲ್ಲಿ ಓದುತ್ತಿದ್ದ ಭಾಗ್ಯಶ್ರೀ ಆ ದಿನಗಳಲ್ಲೆ ಶಂಕರಪ್ಪ ತಳವಾರ ಎಂಬುವನೊಂದಿಗೆ ಸಲುಗೆ ಬೆಳೆಸಿಕೊಂಡಿದ್ದಳು. ಈ ವೇಳೆಗಾಗಲೇ ಶಂಕರಪ್ಪನಿಗೆ ಮದುವೆಯಾಗಿತ್ತಾದರೂ ಭಾಗ್ಯಶ್ರೀ ಮೋಹಕ್ಕೆ ಸಿಲುಕಿ ಪತ್ನಿ ತೊರೆದು ಈಕೆ ಸಹವಾಸಕ್ಕೆ ಬಿದ್ದಿದ್ದ. ಇವರಿಬ್ಬರು ರಾಯಚೂರು ತೊರೆದು ಆನೇಕಲ್ ತಾಲೂಕಿನ ಜಿಗಣಿಯಲ್ಲಿ ವಾಸ್ತವ್ಯ ಹೂಡಿದ್ದರು.
ಅಕ್ಕನನ್ನು ಕಾಣಲು ಬಂದ ತಮ್ಮ ಲಿಂಗರಾಜು ಇವರಿಬ್ಬರ ಸಂಬಂಧವನ್ನು ವಿರೋಧಿಸಿದ್ದ, ಇದೇ ವಿಷಯಕ್ಕೆ ಶಂಕರಪ್ಪನೊಂದಿಗೆ ಗಲಾಟೆ ಮಾಡಿಕೊಂಡಿದ್ದ. ಇದರಿಂದ ಭಾಗ್ಯಶ್ರೀ ಹಾಗೂ ಶಂಕರಪ್ಪ ಆಕ್ರೋಶಗೊಂಡಿದ್ದರು. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ತಮ್ಮನನ್ನು ಕೊಲೆ ಮಾಡಲು ಸಂಚುರೂಪಿಸಿದ್ದರು.
ಲಿಂಗರಾಜು ದೇಹವನ್ನು ತುಂಡುತುಂಡಾಗಿ ಕತ್ತರಿಸಿದ ಹಂತಕರು ಕೈಕಾಲುಗಳನ್ನು ಹೋಟೆಲ್ವೊಂದರ ಹಿಂದೆ ಎಸೆದು ಉಳಿದ ದೇಹವನ್ನು ಮಂಚನಹಳ್ಳಿ ಕೆರೆಗೆ ಎಸೆದು ಮಹಾರಾಷ್ಟ್ರಕ್ಕೆ ಪರಾರಿಯಾಗಿದ್ದರು. ಆರೋಪಿಗಳ ಪತ್ತೆಯಾಗದ ಹಿನ್ನೆಲೆಯಲ್ಲಿ ಪ್ರಕರಣ ಮುಚ್ಚಿಹೋಗುವ ಹಂತದಲ್ಲಿತ್ತು. ಆನೇಕಲ್ ಠಾಣೆ ಪೊಲೀಸರ ತೀವ್ರ ತನಿಖೆಯಿಂದ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿ ನಾರಾಯಣಪುರ ಗ್ರಾಮದಲ್ಲಿ ಮಗುಗಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟುವಂತಾಗಿದೆ. ಮನೆಯ…
ಬೆಂಗಳೂರು: 'ಸಂಜು ವೆಡ್ಸ್ ಗೀತಾ-2' ಸಿನಿಮಾ ತಂಡ ಮತ್ತು ನಟಿ ರಚಿತಾ ರಾಮ್ ನಡುವಿನ ವೈಮನಸ್ಸು ಬಹಿರಂಗಗೊಂಡಿದ್ದು, ಸಾಮಾಜಿಕ ಮಾಧ್ಯಮಗಳಿಂದ…
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳ್ಕೆ ಗ್ರಾಮದ ಕಲ್ಬಂಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಂದು ಖಾಸಗಿ ಕ್ಲಬ್ನಲ್ಲಿ ಜೂಜಾಟ ನಡೆಯುತ್ತಿತ್ತು ಎಂಬ…
ಬೆಳಗಾವಿ: ಮೂರು ದಶಕಗಳ ಹಿಂದಿನ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಿವೃತ್ತವಾಗಿರುವ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಜೈಲು ಸೇರುವ ಅಪರೂಪದ ಪ್ರಕರಣ…
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…