ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಎಂಬ ಕಾರಣಕ್ಕೆ ಪ್ರಿಯಕರನೊಂದಿಗೆ ಸೇರಿ ಸ್ವಂತ ತಮ್ಮನನ್ನೇ ಕೊಲೆ ಮಾಡಿ ಪರಾರಿಯಾಗಿದ್ದ ಹಂತಕಿ ಅಕ್ಕ ಹಾಗೂ ಪ್ರಿಯಕರ 8 ವರ್ಷದ ಬಳಿಕ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಬಿಜಾಪುರ ಮೂಲದ ಭಾಗ್ಯಶ್ರೀ(38) ಹಾಗೂ ಶಂಕರಪ್ಪ (42) ಬಂಧಿತ ಆರೋಪಿಗಳು. ಅಕ್ಕನ ಸಂಚಿಗೆ ಲಿಂಗರಾಜು (35) ಮೃತ ದುದೈವಿ. ರಾಯಚೂರಿನ ಕಾಲೇಜೊಂದರಲ್ಲಿ ಓದುತ್ತಿದ್ದ ಭಾಗ್ಯಶ್ರೀ ಆ ದಿನಗಳಲ್ಲೆ ಶಂಕರಪ್ಪ ತಳವಾರ ಎಂಬುವನೊಂದಿಗೆ ಸಲುಗೆ ಬೆಳೆಸಿಕೊಂಡಿದ್ದಳು. ಈ ವೇಳೆಗಾಗಲೇ ಶಂಕರಪ್ಪನಿಗೆ ಮದುವೆಯಾಗಿತ್ತಾದರೂ ಭಾಗ್ಯಶ್ರೀ ಮೋಹಕ್ಕೆ ಸಿಲುಕಿ ಪತ್ನಿ ತೊರೆದು ಈಕೆ ಸಹವಾಸಕ್ಕೆ ಬಿದ್ದಿದ್ದ. ಇವರಿಬ್ಬರು ರಾಯಚೂರು ತೊರೆದು ಆನೇಕಲ್ ತಾಲೂಕಿನ ಜಿಗಣಿಯಲ್ಲಿ ವಾಸ್ತವ್ಯ ಹೂಡಿದ್ದರು.
ಅಕ್ಕನನ್ನು ಕಾಣಲು ಬಂದ ತಮ್ಮ ಲಿಂಗರಾಜು ಇವರಿಬ್ಬರ ಸಂಬಂಧವನ್ನು ವಿರೋಧಿಸಿದ್ದ, ಇದೇ ವಿಷಯಕ್ಕೆ ಶಂಕರಪ್ಪನೊಂದಿಗೆ ಗಲಾಟೆ ಮಾಡಿಕೊಂಡಿದ್ದ. ಇದರಿಂದ ಭಾಗ್ಯಶ್ರೀ ಹಾಗೂ ಶಂಕರಪ್ಪ ಆಕ್ರೋಶಗೊಂಡಿದ್ದರು. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ತಮ್ಮನನ್ನು ಕೊಲೆ ಮಾಡಲು ಸಂಚುರೂಪಿಸಿದ್ದರು.
ಲಿಂಗರಾಜು ದೇಹವನ್ನು ತುಂಡುತುಂಡಾಗಿ ಕತ್ತರಿಸಿದ ಹಂತಕರು ಕೈಕಾಲುಗಳನ್ನು ಹೋಟೆಲ್ವೊಂದರ ಹಿಂದೆ ಎಸೆದು ಉಳಿದ ದೇಹವನ್ನು ಮಂಚನಹಳ್ಳಿ ಕೆರೆಗೆ ಎಸೆದು ಮಹಾರಾಷ್ಟ್ರಕ್ಕೆ ಪರಾರಿಯಾಗಿದ್ದರು. ಆರೋಪಿಗಳ ಪತ್ತೆಯಾಗದ ಹಿನ್ನೆಲೆಯಲ್ಲಿ ಪ್ರಕರಣ ಮುಚ್ಚಿಹೋಗುವ ಹಂತದಲ್ಲಿತ್ತು. ಆನೇಕಲ್ ಠಾಣೆ ಪೊಲೀಸರ ತೀವ್ರ ತನಿಖೆಯಿಂದ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…