ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ಸುಲಿಗೆ ಮಾಡುತ್ತಿದ್ದ ಎನ್ನಲಾದ ಜಾಲವೊಂದು ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಬೆಳಕಿಗೆ ಬಂದಿದೆ. ಹೈಕೋರ್ಟ್ ವಕೀಲರೊಬ್ಬರು ನೀಡಿದ ದೂರಿನ ಬಳಿಕ ಈ ಪ್ರಕರಣದ ಹಲವು ಅಂಶಗಳು ಬಹಿರಂಗವಾಗಿವೆ.
ಈ ಪ್ರಕರಣದಲ್ಲಿ ಪಲ್ಲವಿ ಸಿಂಗ್ ರಜಪೂತ್ ಎಂಬ ಮಹಿಳೆಯನ್ನು ಪ್ರಮುಖ ಆರೋಪಿ ಎಂದು ಗುರುತಿಸಲಾಗಿದೆ. ‘ಸ್ವೀಟಿ ತಿವಾರಿ’ ಸೇರಿದಂತೆ ವಿವಿಧ ಹೆಸರುಗಳಲ್ಲಿ ಸಾಮಾಜಿಕ ಜಾಲತಾಣಗಳು ಹಾಗೂ ಟಿಂಡರ್ ಡೇಟಿಂಗ್ ಆ್ಯಪ್ನಲ್ಲಿ ಈಕೆ ಸಕ್ರಿಯವಾಗಿದ್ದಳು ಎನ್ನಲಾಗಿದೆ. ಈಕೆಯೊಂದಿಗೆ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸೇರಿ ಕಾರ್ಯನಿರ್ವಹಿಸುತ್ತಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಆರೋಪದ ಪ್ರಕಾರ, ಮೊದಲು ಟಿಂಡರ್ ಅಥವಾ ಫೇಸ್ಬುಕ್ ಮೂಲಕ ಶ್ರೀಮಂತ ಪುರುಷರನ್ನು ಪರಿಚಯಿಸಿಕೊಳ್ಳುತ್ತಿದ್ದಳು. ಬಳಿಕ ಸ್ನೇಹವನ್ನು ಗಾಢಗೊಳಿಸಿ, ಅವರನ್ನು ನೇರವಾಗಿ ಭೇಟಿಯಾಗುತ್ತಿದ್ದಳು. ಭೇಟಿಯ ವೇಳೆ ಆಪ್ತ ಕ್ಷಣಗಳನ್ನು ರಹಸ್ಯವಾಗಿ ಫೋಟೋ ಅಥವಾ ವಿಡಿಯೋ ಮಾಡಿಕೊಳ್ಳುತ್ತಿದ್ದಳು ಎನ್ನಲಾಗಿದೆ.
ನಂತರ ಇದೇ ಫೋಟೋ ಮತ್ತು ವಿಡಿಯೋಗಳನ್ನು ಬಳಸಿಕೊಂಡು ಹಣಕ್ಕೆ ಬೇಡಿಕೆ ಇಡುತ್ತಿದ್ದಳು. ಹಣ ನೀಡಲು ನಿರಾಕರಿಸಿದರೆ ಅತ್ಯಾಚಾರ ಅಥವಾ ಕೊಲೆಯತ್ನದಂತಹ ಗಂಭೀರ ಪ್ರಕರಣಗಳಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕುತ್ತಿದ್ದಳು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸಮಾಜದಲ್ಲಿ ಮಾನಹಾನಿಯಾಗುವ ಭಯ ಹಾಗೂ ಪೊಲೀಸ್ ಪ್ರಕರಣ ಮತ್ತು ಜೈಲು ಶಿಕ್ಷೆಯ ಆತಂಕದಿಂದ ಹಲವು ಪುರುಷರು ಲಕ್ಷಾಂತರ ರೂಪಾಯಿ ಹಣ ನೀಡಿದ್ದರು ಎನ್ನಲಾಗಿದೆ. ಈ ಜಾಲದ ಮೂಲಕ ₹6 ಕೋಟಿಗೂ ಅಧಿಕ ಹಣವನ್ನು ಸುಲಿಗೆ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಇನ್ನೂ ಆಘಾತಕಾರಿ ಸಂಗತಿಯೆಂದರೆ, ಆರೋಪಿ ಮಹಿಳೆ ನೀಡಿದ್ದ ದೂರಿನ ಆಧಾರದ ಮೇಲೆ ಕನಿಷ್ಠ ಐವರು ಪುರುಷರು ಜೈಲು ಸೇರಿದ್ದರು ಎನ್ನಲಾಗಿದೆ. ಇದೀಗ ಹೈಕೋರ್ಟ್ ವಕೀಲರ ದೂರಿನ ಬಳಿಕ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಈ ಜಾಲದ ಹಿಂದೆ ಇನ್ನಷ್ಟು ಮಂದಿ ಇದ್ದಾರೆಯೇ ಮತ್ತು ಇದುವರೆಗೆ ಎಷ್ಟು ಮಂದಿಯನ್ನು ಬಲೆಗೆ ಬೀಳಿಸಲಾಗಿದೆ ಎಂಬುದರ ಕುರಿತು ತನಿಖೆ ನಡೆಯುತ್ತಿದೆ.
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…
ವಡೋದರಾ: ಸಾಮಾನ್ಯವಾಗಿ ಮುಂಜಾನೆ 3 ಗಂಟೆ ಎಂದರೆ ಬಹುತೇಕರು ಗಾಢ ನಿದ್ರೆಯಲ್ಲಿರುವ ಸಮಯ. ರಸ್ತೆಗಳು ಕೂಡ ನಿರ್ಜನವಾಗಿರುತ್ತವೆ. ಆದರೆ ಗುಜರಾತ್ನ…