ಪ್ರೀತಿ ಮತ್ತು ಸ್ನೇಹದ ಹೆಸರಿನಲ್ಲಿ ಡೇಟಿಂಗ್ ಆ್ಯಪ್ಗಳ ಮೂಲಕ ಯುವಕರನ್ನು ಬಲೆಗೆ ಬೀಳಿಸಿ, ಬಳಿಕ ನಿರ್ಜನ ಪ್ರದೇಶಗಳಿಗೆ ಕರೆಸಿಕೊಂಡು ಬೆದರಿಸಿ ಹಣ ಹಾಗೂ ಚಿನ್ನಾಭರಣ ದೋಚುತ್ತಿದ್ದ ಹನಿಟ್ರ್ಯಾಪ್ ಜಾಲವೊಂದನ್ನು ಬೆಂಗಳೂರು ಹೊರವಲಯದ ಜಿಗಣಿ ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇಬ್ಬರು ಅಪ್ರಾಪ್ತರನ್ನು ಬಾಲ ನ್ಯಾಯ ಮಂಡಳಿಗೆ (JJB) ಹಾಜರುಪಡಿಸಲಾಗಿದೆ.
ಆನೇಕಲ್ ತಾಲ್ಲೂಕಿನ ಜಿಗಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈ ಗ್ಯಾಂಗ್, ಗೇ ಡೇಟಿಂಗ್ ಆ್ಯಪ್ಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಯುವಕರನ್ನು ಸಂಪರ್ಕಿಸುತ್ತಿತ್ತು. ಕೆಲ ದಿನಗಳ ಕಾಲ ಆತ್ಮೀಯವಾಗಿ ಮಾತನಾಡಿ ಅವರ ವಿಶ್ವಾಸ ಗಳಿಸಿದ ಬಳಿಕ, ಸಲಿಂಗ ಸಂಬಂಧದ ಆಮಿಷವೊಡ್ಡಿ ಆನೇಕಲ್ ಸುತ್ತಮುತ್ತಲಿನ ನಿರ್ಜನ ಪ್ರದೇಶಗಳಿಗೆ ಕರೆಸಿಕೊಳ್ಳುತ್ತಿತ್ತು.
ಯುವಕರು ಸ್ಥಳಕ್ಕೆ ಬಂದ ತಕ್ಷಣ ಅಲ್ಲೇ ಹೊಂಚು ಹಾಕಿದ್ದ ತಂಡ ಹಲ್ಲೆ ನಡೆಸಿ, ಬೆದರಿಕೆ ಹಾಕಿ, ಅವರ ಬಳಿಯಿದ್ದ ನಗದು, ಮೊಬೈಲ್ ಹಾಗೂ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗುತ್ತಿತ್ತು. ಇತ್ತೀಚೆಗೆ ಇದೇ ರೀತಿ ಮೋಸಕ್ಕೊಳಗಾದ ಯುವಕನೊಬ್ಬ ಧೈರ್ಯ ಮಾಡಿ ಜಿಗಣಿ ಪೊಲೀಸ್ ಠಾಣೆಗೆ ದೂರು ನೀಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ.
ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆನೇಕಲ್ ಪಟ್ಟಣದ ವಿಶಾಲ್ (18), ಅಜಯ್ (19), ಸೂರ್ಯ (19) ಮತ್ತು ಸಂಜಯ್ (22) ಎಂಬ ನಾಲ್ವರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಅಪ್ರಾಪ್ತರನ್ನು ಬಾಲ ನ್ಯಾಯ ಮಂಡಳಿಗೆ ಹಾಜರುಪಡಿಸಲಾಗಿದೆ. ಬಂಧಿತರಿಂದ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ಪೊಲೀಸರು ಸಂಗ್ರಹಿಸುತ್ತಿದ್ದು, ಇದೇ ರೀತಿಯ ಇನ್ನಷ್ಟು ಘಟನೆಗಳಲ್ಲಿ ಇವರ ಕೈವಾಡವಿದೆಯೇ ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ.
ಈ ಘಟನೆ ಆನ್ಲೈನ್ ಡೇಟಿಂಗ್ ಆ್ಯಪ್ಗಳನ್ನು ಬಳಸುವಾಗ ಹೆಚ್ಚಿನ ಎಚ್ಚರಿಕೆ ವಹಿಸುವ ಅಗತ್ಯವನ್ನು ಮತ್ತೊಮ್ಮೆ ನೆನಪಿಸಿದೆ. ಅಪರಿಚಿತರನ್ನು ಸುಲಭವಾಗಿ ನಂಬದೇ, ಸಾರ್ವಜನಿಕ ಸ್ಥಳಗಳಲ್ಲಿ ಮಾತ್ರ ಭೇಟಿಯಾಗುವುದು ಹಾಗೂ ಯಾವುದೇ ಅನುಮಾನಾಸ್ಪದ ಪರಿಸ್ಥಿತಿ ಎದುರಾದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವುದು ಸುರಕ್ಷಿತ ಕ್ರಮವಾಗಿದೆ.
ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಮಹಿಳೆಯೊಬ್ಬಳು ತನ್ನ ಪ್ರೇಮಿಯ ಮರ್ಮಾಂಗವನ್ನು ಕತ್ತರಿಸಿರುವ…
ಒಂದೇ ಒಂದು ರಾಂಗ್ ಕಾಲ್ ಹತ್ತು ವರ್ಷಗಳ ಸುಖಿ ದಾಂಪತ್ಯವನ್ನು ಛಿದ್ರಗೊಳಿಸಿದ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂ ಕ್ಷೇತ್ರದಲ್ಲಿ…
ಮುಂಡಗೋಡ: ತಾಲೂಕಿನ ಅಂಗಡಿಗಳಿಗೆ ಭೇಟಿ ನೀಡಿ ಅಂಗಡಿ ಮಾಲೀಕರು ಹಾಗೂ ಸಿಬ್ಬಂದಿಯ ಗಮನವನ್ನು ಬೇರೆಡೆ ಸೆಳೆದು ಹಣ, ಒಡವೆ ಸೇರಿದಂತೆ…
ಹಾಸನ: ಪತ್ನಿಗೆ ಬೇರೊಬ್ಬನೊಂದಿಗೆ ಅನೈತಿಕ ಸಂಬಂಧವಿದೆ ಎಂಬ ಶಂಕೆಯಿಂದ ಪತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿ ಬಳಿಕ ಆತ್ಮಹತ್ಯೆಗೆ ಶರಣಾಗಿರುವ…
ಪ್ರೀತಿಯ ಸಂಬಂಧಕ್ಕಾಗಿ ಪತಿಯನ್ನೇ ಸೈನೈಡ್ ನೀಡಿ ಹತ್ಯೆಗೈದು, ಬಳಿಕ ಆತ ಆಸ್ಟ್ರೇಲಿಯಾದಲ್ಲಿ ಉದ್ಯೋಗದಲ್ಲಿದ್ದಾನೆ ಎಂದು ಬರೋಬ್ಬರಿ ಎರಡು ವರ್ಷಗಳ ಕಾಲ…
ಖ್ಯಾತ ಜ್ಯೋತಿಷಿ ಕಮಲಾಕರ ಭಟ್ ವಿರುದ್ಧ ದಾಖಲಾಗಿರುವ ವಸಂತ್ ನಾಯ್ಕ್ ಕೊಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಕಳೆದ ಆರು ತಿಂಗಳಿಂದ…